Homeಮುಖಪುಟನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

ನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

- Advertisement -
- Advertisement -

IT ಕಾಯ್ದೆಯ ಸೆಕ್ಷನ್‌ 66A ಇನ್ನೂ ಬಳಕೆಯಾಗುತ್ತಿರುವುದು ಭಯಾನಕ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ರೋಹಿಂಟನ್ ನಾರೀಮನ್, ಕೆ.ಎಮ್‌.ಜೋಸೆಫ್‌, ಬಿ.ಆರ್‌.ಗವಾಯಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೆಂದ್ರ ಸರ್ಕಾರಕ್ಕೆ ಈ ಸಂಬಂಧ ನೋಟಿಸ್ ಕೂಡ ನೀಡಿತು. 2015ರಲ್ಲಿಯೇ ರದ್ದಾದ ಕಾನೂನಿನಡಿ ಇನ್ನೂ FIR ದಾಖಲಾಗುತ್ತಿದ್ದರೆ ಅದು ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗುತ್ತದೆ. ನಾವು ಏನು ಕೇಳುತ್ತಿದ್ದೇವೆ, ನಮ್ಮ ಮುಂದೆ ಏನು ನಡೆಯುತ್ತಿದೆ ಇದು ಅತ್ಯಂತ ಆಘಾತಕಾರಿ ವಿಷಯ ಎಂದು ನ್ಯಾಯಮೂರ್ತಿ ರೋಹಿಂಟನ್ ನಾರೀಮನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಪೀಪಲ್ ಯೂನಿಯನ್‌ ಫಾರ್‌ ಸಿವಿಲ್ ಲಿಬರ್ಟೀಸ್ (PUCL) ಎಂಬ ನಾಗರಿಕ ಹಕ್ಕುಗಳ ಹೋರಾಟ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ 2 ವಾರಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಚಿತ್ರ ಕೃಪೆ: ಬಾರ್‌ ಎಂಡ್ ಬೆಂಚ್‌

ಇದನ್ನೂ ಓದಿ: ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಪ್ರತಿನಿಧಿಸಿ ಉತ್ತರಿಸಿದ ಆಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, “ಸುಪ್ರೀಂ ಕೋರ್ಟ್ 66A ಯನ್ನು ರದ್ದುಪಡಿಸಿದ್ದರೂ ಸೆಕ್ಷನ್‌ ಬಳಕೆಯಲ್ಲಿ ಇದೆ. 66A ಸೆಕ್ಷನ್‌ನಡಿ ಪ್ರಕರಣಗಳಲ್ಲಿ FIR ಕೂಡ ದಾಖಲಿಸಲಾಗುತ್ತಿದೆ. ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಈ ಸೆಕ್ಷನ್‌ಅನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ ಎಂಬ ಅಡಿ ಬರಹವನ್ನು ನಮೂದಿಸಲಾಗುತ್ತದೆ. ಸಂಸತ್ತಿನಲ್ಲಿ IT ಕಾಯ್ದೆ 2000 ಕ್ಕೆ ಬದಲಾವಣೆ ತಂದು 66A ಸೆಕ್ಷನ್‌ ಮುಂದೆ ಬ್ರಾಕೆಟ್‌ನಲ್ಲಿ ರದ್ದುಪಡಿಸಲಾಗಿದೆ ಎಂದು ತಿದ್ದುಪಡಿ ಮಾಡಿದರೆ ಮಾತ್ರ ಸೆಕ್ಷನ್ ರದ್ದಾಗಲಿದೆ” ಎಂದು ತಿಳಿಸಿದ್ದಾರೆ.

ರದ್ದಾಗಿರುವ ಸೆಕ್ಷನ್‌ 66A ಅಡಿಯಲ್ಲಿ ಕೇವಲ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗುತ್ತಿಲ್ಲ. ಜಿಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ಮಾರ್ಚ್‌ 10, 2021ರ ವೇಳೆಗೆ ದೇಶದಲ್ಲಿ ಸೆಕ್ಷನ್‌ 66A ಗೆ ಸಂಬಂಧಿಸಿದ 745 ಪ್ರಕರಣಗಳು ಸಕ್ರಿಯವಾಗಿವೆ ಎಂದು  ಜೊಂಬಿ ಟ್ರ್ಯಾಕರ್‌ ವೆಬ್‌ಸೈಟ್‌ ವರದಿ ಹೆಳುತ್ತದೆ ಎಂದು PUCL ಸಂಘಟನೆಯ ಪರವಾಗಿ ನ್ಯಾಯವಾದಿ ಅಪರ್ಣಾ ಭಟ್‌ ಸುಪ್ರೀಂ ಕೋರ್ಟ್‌ಗೆ ಅಂಕಿ ಅಂಶಗಳನ್ನು ಸಲ್ಲಿಸಿದ್ದಾರೆ.

ಸೆಕ್ಷನ್‌ 66A ಅಡಿಯಲ್ಲಿ ದೇಶದಾದ್ಯಂತ ದಾಖಲಾಗಿರುವ ಎಲ್ಲಾ FIR ಗಳ ಮತ್ತು ವಿಚಾರಣೆ ನಡೆಯುತ್ತಿರುವ ಪ್ರಕರಣಗಳ ಅಂಕಿ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಸೆಕ್ಷನ್‌ 66A ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತಕ್ಷಣವೇ ಕೈಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ಈ ಸಾರ್ವಜನಿಕ ಅರ್ಜಿಯಲ್ಲಿ ಕೋರಲಾಗಿದೆ.

IT ಕಾಯ್ದೆ 2000 ರ ಸೆಕ್ಷನ್ 66A ರದ್ದಾಗಿದೆ ಎಂಬ ಸುದ್ದಿಯನ್ನು ಎಲ್ಲಾ ಇಂಗ್ಲಿಷ್ ಪತ್ರಿಕೆ ಮತ್ತು ಪ್ರಾದೇಶಿಕ ಪತ್ರಿಕೆಯಲ್ಲಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕೆಂದು PUCL ತನ್ನ ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಿದೆ.

2018ರಲ್ಲಿ ಕೂಡ PUCL ಸಂಘಟನೆ ಇಂತಹದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿತ್ತು. 2019ರಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಎಲ್ಲಾ ಹೈಕೋರ್ಟ್‌ಗಳಲ್ಲಿ ಐಟಿ ಕಾಯ್ದೆಯ ಸೆಕ್ಷನ್‌ 66A ರದ್ದಾಗಿರುವ ಕುರಿತು ಮಾಹಿತಿ ಲಭ್ಯವಾಗಬೇಕು ಮತ್ತು ಸಂಬಂಧಿಸಿದ ದಾಖಲೆಗಳು ಸಾರ್ವಜನಿಕರಿಗೆ ಸಿಗಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಏನಿದು Section 66A of IT Act, 2000 ?

IT ಕಾಯ್ದೆಯ ಸೆಕ್ಷನ್‌ 66A ಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ವರ್ಷಗಳೇ ಕಳೆದಿವೆ. ಸಾಮಾಜಿಕ ಜಾಲತಾಣಗಳಲ್ಲಿ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹಂಚಿಕೊಂಡ ಪೋಸ್ಟ್‌ ಅಥವಾ ಸಂದೇಶಗಳು ಆಕ್ಷೇಪಾರ್ಹವೆನಿಸಿದ ತಕ್ಷಣಕ್ಕೆ ಪೊಲೀಸರು ಯಾವುದೇ ವಿಚಾರಣೆಯನ್ನು ನಡೆಸದೇ ಬಂಧಿಸುವ ಅಧಿಕಾರವನ್ನು IT ಕಾಯ್ದೆಯ ಸೆಕ್ಷನ್‌ 66A ಪೊಲೀಸರಿಗೆ ನೀಡುತ್ತದೆ. ಸರ್ಕಾರದ ಯೋಜನೆಗಳನ್ನು ಟೀಕಿಸುವ, ವಿಮರ್ಶಿಸುವವರ ಮೇಲೆ ಈ ಸೆಕ್ಷನ್‌ನ ಪ್ರಹಾರ ಇದುವರೆಗೆ ನಡೆದುಬಂದಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರಯವನ್ನೇ ಕಿತ್ತುಕೊಳ್ಳುವ ಐಟಿ ಕಾಯ್ದೆಯ ಸೆಕ್ಷನ್‌ 66A ಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ 2015 ರಲ್ಲಿ ತೀರ್ಪು ನೀಡಿದೆ. ಶ್ರೇಯಾ ಸಿಂಘಾಲ್ ವಿ. ಭಾರತ ಸರ್ಕಾರ ಪ್ರಕರಣದಲ್ಲಿ ಮಾರ್ಚ್‌ 24 2015 ರಂದು ಸುಪ್ರೀಂ ಕೋರ್ಟ್ ಐಟಿ ಕಾಯ್ದೆಯ 66A ಸೆಕ್ಷನ್ ಅಸಂವಿಧಾನಿಕವಾದುದು, ಜನರ ಮೂಲಭೂತ ಹಕ್ಕುಗಳನ್ನೇ ಕಿತ್ತುಕೊಳ್ಳುವ ಇಂತಹ ಕಾನೂನಗಳನ್ನು ಮುಂದೆ ಬಳಕೆ ಮಾಡಬಾರದೆಂದು  ಭಾರತ ಸರ್ಕಾರಕ್ಕೆ ಆದೇಶಿಸಿದೆ.


ಇದನ್ನೂ ಓದಿ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...