Homeಮುಖಪುಟನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

ನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

- Advertisement -
- Advertisement -

IT ಕಾಯ್ದೆಯ ಸೆಕ್ಷನ್‌ 66A ಇನ್ನೂ ಬಳಕೆಯಾಗುತ್ತಿರುವುದು ಭಯಾನಕ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ರೋಹಿಂಟನ್ ನಾರೀಮನ್, ಕೆ.ಎಮ್‌.ಜೋಸೆಫ್‌, ಬಿ.ಆರ್‌.ಗವಾಯಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೆಂದ್ರ ಸರ್ಕಾರಕ್ಕೆ ಈ ಸಂಬಂಧ ನೋಟಿಸ್ ಕೂಡ ನೀಡಿತು. 2015ರಲ್ಲಿಯೇ ರದ್ದಾದ ಕಾನೂನಿನಡಿ ಇನ್ನೂ FIR ದಾಖಲಾಗುತ್ತಿದ್ದರೆ ಅದು ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗುತ್ತದೆ. ನಾವು ಏನು ಕೇಳುತ್ತಿದ್ದೇವೆ, ನಮ್ಮ ಮುಂದೆ ಏನು ನಡೆಯುತ್ತಿದೆ ಇದು ಅತ್ಯಂತ ಆಘಾತಕಾರಿ ವಿಷಯ ಎಂದು ನ್ಯಾಯಮೂರ್ತಿ ರೋಹಿಂಟನ್ ನಾರೀಮನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಪೀಪಲ್ ಯೂನಿಯನ್‌ ಫಾರ್‌ ಸಿವಿಲ್ ಲಿಬರ್ಟೀಸ್ (PUCL) ಎಂಬ ನಾಗರಿಕ ಹಕ್ಕುಗಳ ಹೋರಾಟ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ 2 ವಾರಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಚಿತ್ರ ಕೃಪೆ: ಬಾರ್‌ ಎಂಡ್ ಬೆಂಚ್‌

ಇದನ್ನೂ ಓದಿ: ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಪ್ರತಿನಿಧಿಸಿ ಉತ್ತರಿಸಿದ ಆಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, “ಸುಪ್ರೀಂ ಕೋರ್ಟ್ 66A ಯನ್ನು ರದ್ದುಪಡಿಸಿದ್ದರೂ ಸೆಕ್ಷನ್‌ ಬಳಕೆಯಲ್ಲಿ ಇದೆ. 66A ಸೆಕ್ಷನ್‌ನಡಿ ಪ್ರಕರಣಗಳಲ್ಲಿ FIR ಕೂಡ ದಾಖಲಿಸಲಾಗುತ್ತಿದೆ. ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಈ ಸೆಕ್ಷನ್‌ಅನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ ಎಂಬ ಅಡಿ ಬರಹವನ್ನು ನಮೂದಿಸಲಾಗುತ್ತದೆ. ಸಂಸತ್ತಿನಲ್ಲಿ IT ಕಾಯ್ದೆ 2000 ಕ್ಕೆ ಬದಲಾವಣೆ ತಂದು 66A ಸೆಕ್ಷನ್‌ ಮುಂದೆ ಬ್ರಾಕೆಟ್‌ನಲ್ಲಿ ರದ್ದುಪಡಿಸಲಾಗಿದೆ ಎಂದು ತಿದ್ದುಪಡಿ ಮಾಡಿದರೆ ಮಾತ್ರ ಸೆಕ್ಷನ್ ರದ್ದಾಗಲಿದೆ” ಎಂದು ತಿಳಿಸಿದ್ದಾರೆ.

ರದ್ದಾಗಿರುವ ಸೆಕ್ಷನ್‌ 66A ಅಡಿಯಲ್ಲಿ ಕೇವಲ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗುತ್ತಿಲ್ಲ. ಜಿಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ಮಾರ್ಚ್‌ 10, 2021ರ ವೇಳೆಗೆ ದೇಶದಲ್ಲಿ ಸೆಕ್ಷನ್‌ 66A ಗೆ ಸಂಬಂಧಿಸಿದ 745 ಪ್ರಕರಣಗಳು ಸಕ್ರಿಯವಾಗಿವೆ ಎಂದು  ಜೊಂಬಿ ಟ್ರ್ಯಾಕರ್‌ ವೆಬ್‌ಸೈಟ್‌ ವರದಿ ಹೆಳುತ್ತದೆ ಎಂದು PUCL ಸಂಘಟನೆಯ ಪರವಾಗಿ ನ್ಯಾಯವಾದಿ ಅಪರ್ಣಾ ಭಟ್‌ ಸುಪ್ರೀಂ ಕೋರ್ಟ್‌ಗೆ ಅಂಕಿ ಅಂಶಗಳನ್ನು ಸಲ್ಲಿಸಿದ್ದಾರೆ.

ಸೆಕ್ಷನ್‌ 66A ಅಡಿಯಲ್ಲಿ ದೇಶದಾದ್ಯಂತ ದಾಖಲಾಗಿರುವ ಎಲ್ಲಾ FIR ಗಳ ಮತ್ತು ವಿಚಾರಣೆ ನಡೆಯುತ್ತಿರುವ ಪ್ರಕರಣಗಳ ಅಂಕಿ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಸೆಕ್ಷನ್‌ 66A ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತಕ್ಷಣವೇ ಕೈಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ಈ ಸಾರ್ವಜನಿಕ ಅರ್ಜಿಯಲ್ಲಿ ಕೋರಲಾಗಿದೆ.

IT ಕಾಯ್ದೆ 2000 ರ ಸೆಕ್ಷನ್ 66A ರದ್ದಾಗಿದೆ ಎಂಬ ಸುದ್ದಿಯನ್ನು ಎಲ್ಲಾ ಇಂಗ್ಲಿಷ್ ಪತ್ರಿಕೆ ಮತ್ತು ಪ್ರಾದೇಶಿಕ ಪತ್ರಿಕೆಯಲ್ಲಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕೆಂದು PUCL ತನ್ನ ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಿದೆ.

2018ರಲ್ಲಿ ಕೂಡ PUCL ಸಂಘಟನೆ ಇಂತಹದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿತ್ತು. 2019ರಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಎಲ್ಲಾ ಹೈಕೋರ್ಟ್‌ಗಳಲ್ಲಿ ಐಟಿ ಕಾಯ್ದೆಯ ಸೆಕ್ಷನ್‌ 66A ರದ್ದಾಗಿರುವ ಕುರಿತು ಮಾಹಿತಿ ಲಭ್ಯವಾಗಬೇಕು ಮತ್ತು ಸಂಬಂಧಿಸಿದ ದಾಖಲೆಗಳು ಸಾರ್ವಜನಿಕರಿಗೆ ಸಿಗಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಏನಿದು Section 66A of IT Act, 2000 ?

IT ಕಾಯ್ದೆಯ ಸೆಕ್ಷನ್‌ 66A ಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ವರ್ಷಗಳೇ ಕಳೆದಿವೆ. ಸಾಮಾಜಿಕ ಜಾಲತಾಣಗಳಲ್ಲಿ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹಂಚಿಕೊಂಡ ಪೋಸ್ಟ್‌ ಅಥವಾ ಸಂದೇಶಗಳು ಆಕ್ಷೇಪಾರ್ಹವೆನಿಸಿದ ತಕ್ಷಣಕ್ಕೆ ಪೊಲೀಸರು ಯಾವುದೇ ವಿಚಾರಣೆಯನ್ನು ನಡೆಸದೇ ಬಂಧಿಸುವ ಅಧಿಕಾರವನ್ನು IT ಕಾಯ್ದೆಯ ಸೆಕ್ಷನ್‌ 66A ಪೊಲೀಸರಿಗೆ ನೀಡುತ್ತದೆ. ಸರ್ಕಾರದ ಯೋಜನೆಗಳನ್ನು ಟೀಕಿಸುವ, ವಿಮರ್ಶಿಸುವವರ ಮೇಲೆ ಈ ಸೆಕ್ಷನ್‌ನ ಪ್ರಹಾರ ಇದುವರೆಗೆ ನಡೆದುಬಂದಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರಯವನ್ನೇ ಕಿತ್ತುಕೊಳ್ಳುವ ಐಟಿ ಕಾಯ್ದೆಯ ಸೆಕ್ಷನ್‌ 66A ಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ 2015 ರಲ್ಲಿ ತೀರ್ಪು ನೀಡಿದೆ. ಶ್ರೇಯಾ ಸಿಂಘಾಲ್ ವಿ. ಭಾರತ ಸರ್ಕಾರ ಪ್ರಕರಣದಲ್ಲಿ ಮಾರ್ಚ್‌ 24 2015 ರಂದು ಸುಪ್ರೀಂ ಕೋರ್ಟ್ ಐಟಿ ಕಾಯ್ದೆಯ 66A ಸೆಕ್ಷನ್ ಅಸಂವಿಧಾನಿಕವಾದುದು, ಜನರ ಮೂಲಭೂತ ಹಕ್ಕುಗಳನ್ನೇ ಕಿತ್ತುಕೊಳ್ಳುವ ಇಂತಹ ಕಾನೂನಗಳನ್ನು ಮುಂದೆ ಬಳಕೆ ಮಾಡಬಾರದೆಂದು  ಭಾರತ ಸರ್ಕಾರಕ್ಕೆ ಆದೇಶಿಸಿದೆ.


ಇದನ್ನೂ ಓದಿ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...