Homeಮುಖಪುಟನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

ನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

- Advertisement -
- Advertisement -

IT ಕಾಯ್ದೆಯ ಸೆಕ್ಷನ್‌ 66A ಇನ್ನೂ ಬಳಕೆಯಾಗುತ್ತಿರುವುದು ಭಯಾನಕ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ರೋಹಿಂಟನ್ ನಾರೀಮನ್, ಕೆ.ಎಮ್‌.ಜೋಸೆಫ್‌, ಬಿ.ಆರ್‌.ಗವಾಯಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೆಂದ್ರ ಸರ್ಕಾರಕ್ಕೆ ಈ ಸಂಬಂಧ ನೋಟಿಸ್ ಕೂಡ ನೀಡಿತು. 2015ರಲ್ಲಿಯೇ ರದ್ದಾದ ಕಾನೂನಿನಡಿ ಇನ್ನೂ FIR ದಾಖಲಾಗುತ್ತಿದ್ದರೆ ಅದು ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗುತ್ತದೆ. ನಾವು ಏನು ಕೇಳುತ್ತಿದ್ದೇವೆ, ನಮ್ಮ ಮುಂದೆ ಏನು ನಡೆಯುತ್ತಿದೆ ಇದು ಅತ್ಯಂತ ಆಘಾತಕಾರಿ ವಿಷಯ ಎಂದು ನ್ಯಾಯಮೂರ್ತಿ ರೋಹಿಂಟನ್ ನಾರೀಮನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಪೀಪಲ್ ಯೂನಿಯನ್‌ ಫಾರ್‌ ಸಿವಿಲ್ ಲಿಬರ್ಟೀಸ್ (PUCL) ಎಂಬ ನಾಗರಿಕ ಹಕ್ಕುಗಳ ಹೋರಾಟ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ 2 ವಾರಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಚಿತ್ರ ಕೃಪೆ: ಬಾರ್‌ ಎಂಡ್ ಬೆಂಚ್‌

ಇದನ್ನೂ ಓದಿ: ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಪ್ರತಿನಿಧಿಸಿ ಉತ್ತರಿಸಿದ ಆಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, “ಸುಪ್ರೀಂ ಕೋರ್ಟ್ 66A ಯನ್ನು ರದ್ದುಪಡಿಸಿದ್ದರೂ ಸೆಕ್ಷನ್‌ ಬಳಕೆಯಲ್ಲಿ ಇದೆ. 66A ಸೆಕ್ಷನ್‌ನಡಿ ಪ್ರಕರಣಗಳಲ್ಲಿ FIR ಕೂಡ ದಾಖಲಿಸಲಾಗುತ್ತಿದೆ. ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಈ ಸೆಕ್ಷನ್‌ಅನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ ಎಂಬ ಅಡಿ ಬರಹವನ್ನು ನಮೂದಿಸಲಾಗುತ್ತದೆ. ಸಂಸತ್ತಿನಲ್ಲಿ IT ಕಾಯ್ದೆ 2000 ಕ್ಕೆ ಬದಲಾವಣೆ ತಂದು 66A ಸೆಕ್ಷನ್‌ ಮುಂದೆ ಬ್ರಾಕೆಟ್‌ನಲ್ಲಿ ರದ್ದುಪಡಿಸಲಾಗಿದೆ ಎಂದು ತಿದ್ದುಪಡಿ ಮಾಡಿದರೆ ಮಾತ್ರ ಸೆಕ್ಷನ್ ರದ್ದಾಗಲಿದೆ” ಎಂದು ತಿಳಿಸಿದ್ದಾರೆ.

ರದ್ದಾಗಿರುವ ಸೆಕ್ಷನ್‌ 66A ಅಡಿಯಲ್ಲಿ ಕೇವಲ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗುತ್ತಿಲ್ಲ. ಜಿಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ಮಾರ್ಚ್‌ 10, 2021ರ ವೇಳೆಗೆ ದೇಶದಲ್ಲಿ ಸೆಕ್ಷನ್‌ 66A ಗೆ ಸಂಬಂಧಿಸಿದ 745 ಪ್ರಕರಣಗಳು ಸಕ್ರಿಯವಾಗಿವೆ ಎಂದು  ಜೊಂಬಿ ಟ್ರ್ಯಾಕರ್‌ ವೆಬ್‌ಸೈಟ್‌ ವರದಿ ಹೆಳುತ್ತದೆ ಎಂದು PUCL ಸಂಘಟನೆಯ ಪರವಾಗಿ ನ್ಯಾಯವಾದಿ ಅಪರ್ಣಾ ಭಟ್‌ ಸುಪ್ರೀಂ ಕೋರ್ಟ್‌ಗೆ ಅಂಕಿ ಅಂಶಗಳನ್ನು ಸಲ್ಲಿಸಿದ್ದಾರೆ.

ಸೆಕ್ಷನ್‌ 66A ಅಡಿಯಲ್ಲಿ ದೇಶದಾದ್ಯಂತ ದಾಖಲಾಗಿರುವ ಎಲ್ಲಾ FIR ಗಳ ಮತ್ತು ವಿಚಾರಣೆ ನಡೆಯುತ್ತಿರುವ ಪ್ರಕರಣಗಳ ಅಂಕಿ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಸೆಕ್ಷನ್‌ 66A ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತಕ್ಷಣವೇ ಕೈಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ಈ ಸಾರ್ವಜನಿಕ ಅರ್ಜಿಯಲ್ಲಿ ಕೋರಲಾಗಿದೆ.

IT ಕಾಯ್ದೆ 2000 ರ ಸೆಕ್ಷನ್ 66A ರದ್ದಾಗಿದೆ ಎಂಬ ಸುದ್ದಿಯನ್ನು ಎಲ್ಲಾ ಇಂಗ್ಲಿಷ್ ಪತ್ರಿಕೆ ಮತ್ತು ಪ್ರಾದೇಶಿಕ ಪತ್ರಿಕೆಯಲ್ಲಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕೆಂದು PUCL ತನ್ನ ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಿದೆ.

2018ರಲ್ಲಿ ಕೂಡ PUCL ಸಂಘಟನೆ ಇಂತಹದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿತ್ತು. 2019ರಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಎಲ್ಲಾ ಹೈಕೋರ್ಟ್‌ಗಳಲ್ಲಿ ಐಟಿ ಕಾಯ್ದೆಯ ಸೆಕ್ಷನ್‌ 66A ರದ್ದಾಗಿರುವ ಕುರಿತು ಮಾಹಿತಿ ಲಭ್ಯವಾಗಬೇಕು ಮತ್ತು ಸಂಬಂಧಿಸಿದ ದಾಖಲೆಗಳು ಸಾರ್ವಜನಿಕರಿಗೆ ಸಿಗಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಏನಿದು Section 66A of IT Act, 2000 ?

IT ಕಾಯ್ದೆಯ ಸೆಕ್ಷನ್‌ 66A ಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ವರ್ಷಗಳೇ ಕಳೆದಿವೆ. ಸಾಮಾಜಿಕ ಜಾಲತಾಣಗಳಲ್ಲಿ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹಂಚಿಕೊಂಡ ಪೋಸ್ಟ್‌ ಅಥವಾ ಸಂದೇಶಗಳು ಆಕ್ಷೇಪಾರ್ಹವೆನಿಸಿದ ತಕ್ಷಣಕ್ಕೆ ಪೊಲೀಸರು ಯಾವುದೇ ವಿಚಾರಣೆಯನ್ನು ನಡೆಸದೇ ಬಂಧಿಸುವ ಅಧಿಕಾರವನ್ನು IT ಕಾಯ್ದೆಯ ಸೆಕ್ಷನ್‌ 66A ಪೊಲೀಸರಿಗೆ ನೀಡುತ್ತದೆ. ಸರ್ಕಾರದ ಯೋಜನೆಗಳನ್ನು ಟೀಕಿಸುವ, ವಿಮರ್ಶಿಸುವವರ ಮೇಲೆ ಈ ಸೆಕ್ಷನ್‌ನ ಪ್ರಹಾರ ಇದುವರೆಗೆ ನಡೆದುಬಂದಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರಯವನ್ನೇ ಕಿತ್ತುಕೊಳ್ಳುವ ಐಟಿ ಕಾಯ್ದೆಯ ಸೆಕ್ಷನ್‌ 66A ಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ 2015 ರಲ್ಲಿ ತೀರ್ಪು ನೀಡಿದೆ. ಶ್ರೇಯಾ ಸಿಂಘಾಲ್ ವಿ. ಭಾರತ ಸರ್ಕಾರ ಪ್ರಕರಣದಲ್ಲಿ ಮಾರ್ಚ್‌ 24 2015 ರಂದು ಸುಪ್ರೀಂ ಕೋರ್ಟ್ ಐಟಿ ಕಾಯ್ದೆಯ 66A ಸೆಕ್ಷನ್ ಅಸಂವಿಧಾನಿಕವಾದುದು, ಜನರ ಮೂಲಭೂತ ಹಕ್ಕುಗಳನ್ನೇ ಕಿತ್ತುಕೊಳ್ಳುವ ಇಂತಹ ಕಾನೂನಗಳನ್ನು ಮುಂದೆ ಬಳಕೆ ಮಾಡಬಾರದೆಂದು  ಭಾರತ ಸರ್ಕಾರಕ್ಕೆ ಆದೇಶಿಸಿದೆ.


ಇದನ್ನೂ ಓದಿ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...