Homeಚಳವಳಿನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

ನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಜ್ಮಾ ನಜೀರ್ ಚಿಕ್ಕನೇರಳೆ ಬೆಂಗಳೂರಿನಲ್ಲಿ ಎಲ್ಲರಿಗೂ ಪರಿಚಯವಾಗಿದ್ದು, ಸಾಮಾಜಿಕ ಹೋರಾಟ ಮತ್ತು ಕಾರ್ಯಕ್ರಮಗಳಲ್ಲಿ ಚುರುಕಾಗಿ ಓಡಾಡುವ ಚಿನಕುರಳಿಯಾಗಿ. ವೈದ್ಯಕೀಯ ವಿದ್ಯಾರ್ಥಿನಿಯಾದ ನಜ್ಮಾ ರೇಡಿಯೋ ಜಾಕಿಯಾಗಿ, ಕಂಠದಾನ ಕಲಾವಿದೆಯಾಗಿಯೂ ಕೆಲಸ ಮಾಡುತ್ತಾರೆ. ಆಕೆಯ ಪಿವೋಟ್ ಪದ್ಯಗಳು ಕೃತಿ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ.

ಮೊನ್ನೆ ನನ್ನ ಶಾಲಾದಿನಗಳ ಜೂನಿಯರ್ ಒಬ್ಬ ವಾಟ್ಸಾಪಿನಲ್ಲಿ ದನ ರಕ್ಷಣೆಯ ಬಗ್ಗೆ ಮೆಸೇಜೊಂದನ್ನ ಕಳುಹಿಸಿದ್ದ. ದನದ ಮಾಂಸ ತಿನ್ನುವವರೆಲ್ಲ ದೇಶದ್ರೋಹಿಗಳು ಎಂದು ನೇರವಾಗಿಯೆ ಬರೆದ ಮೆಸೇಜದು. ಇಂತಹುದ್ದೆ ಸ್ವರೂಪದ ಫ್ಯಾಸಿಸ್ಟ್ ಸಮರ್ಥನೆಯ ಮೆಸೇಜುಗಳನ್ನು ಕಳುಹಿಸಿದ್ದ ಹುಡುಗ ನಮ್ಮ ಮನೆಯಲ್ಲೆ ಅಡ್ಡಾಡಿಕೊಂಡು, ತಿಂದುಂಡುಕೊಂಡು ನಮ್ಮೊಟ್ಟಿಗೆಯೆ ಬೆಳೆದವನು. ಡಿಪ್ಲೊಮಾ ಮುಗಿಸಿ ಬೆಂಗಳೂರಿನ ಕಾರ್ಖಾನೆಯೊಂದರ ನೌಕರನಾಗಿದ್ದ ಆತನನ್ನು ಆರ್ಥಿಕ ಕುಸಿತದ ಕಾರಣ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಕೆಲಸದಿಂದ ತೆಗೆದಿದ್ದಾರೆ. ಕೆಲಸವಿಲ್ಲದ ಕಾರಣ ವಾಟ್ಸಾಪ್ ಯೂನಿವರ್ಸಿಟಿಯ ವಿದ್ಯಾರ್ಥಿಯಾಗಿ ಬಲ ಭಜನೆಯಲ್ಲಿ ಪ್ರತಿದಿನ ಮಿಂದೇಳುತ್ತಿದ್ದಾನೆ.

ಬಲಪಂಥೀಯ ಮೇನಿಯಾ ಈ ಮಟ್ಟಿಗೆ ಮಕ್ಕಳಿಂದ ಮುದಿಯರವರೆಗು ಹರಡಲು ಇವರು ಬಳಸಿಕೊಂಡ ಮುಖ್ಯವಾದ ಅಸ್ತ್ರ ‘ಧರ್ಮ’. ಭಾರತವಷ್ಟೆ ಅಲ್ಲ ಯುನೈಟೆಡ್ ಸ್ಟೇಟ್ಸ್‌ನ ಡೊನಾಲ್ಡ್ ಟ್ರಂಪ್‍ನಿಂದ ಹಿಡಿದು ಇಟಲಿಯ ಮ್ಯಾಟಿಯೊ ಸಾಲ್ವಿನಿ ಮತ್ತು ಬ್ರೆಜಿಲ್‍ನ ಜೈರ್ ಬೋಲ್ಸನಾರೊರವರೆಗೂ ಬಲಪಂಥೀಯವಾದಿಗಳು ಧರ್ಮ, ಏಕಸಂಸ್ಕೃತಿ, ಹುಸಿ ದೇಶಪ್ರೇಮದ ಸಿದ್ಧಾಂತಗಳನ್ನೆ ಪ್ರತಿಪಾದಿಸುತ್ತ ಜನರನ್ನು ಎಮೋಶನಲ್ ಬ್ಲಾಕ್‌ಮೇಲ್ ಮಾಡುತ್ತಲೆ ಎಂದಿಗಿಂತಲೂ ಉತ್ತಮವಾಗಿ ಚುನಾವಣಾ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೆ ಚಾಲಾಕಿತನದಿಂದ ಅಧಿಕಾರ ಪಡೆಯುತ್ತಿದ್ದಾರೆ. ಇಂತಹ ಈ ಸಂದರ್ಭದಲ್ಲಿ ಪ್ರಸಕ್ತ ಸರ್ಕಾರದ ಸ್ತುತಿಗೀತೆ ಹಾಡುತ್ತ ಕುಳಿತರೆ ಮಾತ್ರ ನೀವು ದೇಶದಲ್ಲಿ ಬದುಕಲು ಅರ್ಹ, ಒಂದೇ ಒಂದು ಮಾತು ತುಟಿಕ್‍ಪಿಟಿಕ್ ಎಂದರು ಸೆಕ್ಷನ್ ಮೇಲೆ ಸೆಕ್ಷನ್ ಹಾಕಿ ನಿಮ್ಮ ಅಭಿವ್ಯಕ್ತಿಯ ದಮನವನ್ನು ಮಾಡಲಾಗುತ್ತಿದೆ. ಹೆಚ್ಚು ಮಾತನಾಡಿದರೆ ಪ್ರಾಣ ತೆಗೆಯಲು ಸಿದ್ಧವಾಗಿ ಕುಂತಿದೆ ಬಲಪಂಥಿಯ ಫ್ಯಾಸಿಸ್ಟ್ ಶಕ್ತಿಗಳು.

ಗೋಲ್ವಾಲ್ಕರ್ ಮೊಘಲ್ ಆಳ್ವಿಕೆಯನ್ನು ಮುಸ್ಲಿಮ್ ಆಳ್ವಿಕೆಯೆಂದು ಪ್ರತಿಪಾದಿಸಿದ್ದ ಸಿದ್ಧಾಂತದ ಕಾಪಿ-ಪೇಸ್ಟ್ ಪ್ರಸಕ್ತ ಸರ್ಕಾರದ ಸಿದ್ಧಾಂತ. 2014ರ ಚುನಾವಣೆಯ ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ “ಸಾವಿರ ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಮುಸಲ್ಮಾನರನ್ನು ಇಂದಿಗೂ ಪರಕೀಯರೆಂದೇ, ಆಕ್ರಮಣಕಾರರೆಂದೇ ಸರ್ಕಾರ ಬಿಂಬಿಸುತ್ತಿದೆ. ಮುಸಲ್ಮಾನರ ಆಡಳಿತವನ್ನು ದಬ್ಬಾಳಿಕೆಯ ಕಾಲವೆಂದೇ ನಂಬಿಸಲಾಗುತ್ತಿದೆ.

ಬಹುಸಂಖ್ಯಾತರ ನಡುವೆ ಬಲ ಸಿದ್ಧಾಂತವು ಮುಸಲ್ಮಾನರ ಬಗ್ಗೆ ಅಸಹನೆ ಬೆಳೆಸಿಕೊಳ್ಳುವಂತಹ ವಾತಾವರಣ ನಿರ್ಮಿಸಿದ್ದು, ಕೋಮುವಾದ ಸೃಷ್ಟಿಸಿದ ದ್ವೇಷಾಸೂಯೆ ಅಪಪ್ರಚಾರಗಳನ್ನು ತೀವ್ರರೀತಿಯಲ್ಲಿ ಮಾಡುತ್ತಿದೆ. ಇಂತಹುದರ ಫಲವಾಗಿಯೆ ಕಾಶ್ಮೀರದ ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ಶಾಸಕನೊಬ್ಬ ಜನರ ಹಿಂಡಿನೊಂದಿಗೆ ಆರೋಪಿಯ ಪರ ಬೀದಿಗಿಳಿದು ಹೋರಾಡುವ ಉದಾಹರಣೆಯನ್ನು ನಾವು ಕಣ್ಣಿಂದ ಕಾಣಬೇಕಾಯ್ತು.

ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಹಿಂಸೆ ಅಪಪ್ರಚಾರದ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಇಷ್ಟಪಡುವ ಆಹಾರ ತಿನ್ನುವಂತಿಲ್ಲ, ಮಾತನಾಡುವ ಸ್ವಾತಂತ್ರ್ಯವಿಲ್ಲ, ಸಮಾನತೆಯೊಂದಿಗೆ ಶಿಕ್ಷಣವಿಲ್ಲ, ಉತ್ತಮ ಉದ್ಯೋಗವಿಲ್ಲ. ಕಷ್ಟಪಟ್ಟು ಬದುಕಬೇಕೆಂದು ಹೊರಟರೆ ನೆಮ್ಮದಿಯ ವಾತಾವರಣವಿಲ್ಲ, ರಕ್ಷಣೆಯೂ ಇಲ್ಲ. ಘನತೆಯ ಬದುಕೊಂದನ್ನ ಬದುಕುವ ಹಾಗೂ ಇಲ್ಲ ಎಂಬಂಥ ಪರಿಸ್ಥಿತಿ ಮುಸಲ್ಮಾನ, ದಲಿತ ಮತ್ತು ಹಿಂದುಳಿದ ಸಮುದಾಯಗಳದ್ದಾಗಿದೆ.

ಹಿಂದೆ ಜರ್ಮನಿಯಲ್ಲಿ ಯಹೂದಿಗಳ ಮೇಲಾದಂತೆಯೆ ಇಂದು ಭಾರತದಲ್ಲಿಯೂ ಅಲ್ಪಸಂಖ್ಯಾತರು, ತಳಸಮುದಾಯಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದ ದಹನ ನಡೆಯುತ್ತಿರುವ ಈ ಹೊತ್ತು ಬಹು ಕಠಿಣವಾದ ಕಾಲ. ಅನ್‌ಅಫಿಶಿಯಲಿ ಎಮರ್ಜೆನ್ಸಿ ಘೋಷಣೆಯಾಗಿರುವ ಕಾಲ.

ಈಗ ಪ್ರಗತಿಪರ ಜಾತ್ಯತೀತವಾದಿಗಳೆಲ್ಲ ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಕಾಪಾಡಲು ಒಂದಾಗಲೇಬೇಕಾದ ಹೊತ್ತು. ಕಷ್ಟಪಟ್ಟು ಸಂಪಾದಿಸಿರುವ ಸ್ವಾತಂತ್ರ್ಯ ಸಂವಿಧಾನ, ಪ್ರಜಾಪ್ರಭುತ್ವ ಎಲ್ಲವೂ ಮಣ್ಣು ಪಾಲಾಗುವುದನ್ನು ತಪ್ಪಿಸಲು ಚಳವಳಿಗಳು ಮನೆಮನಗಳಿಗೆ ತಲುಪಬೇಕಾಗಿದೆ. ಮಾಧ್ಯಮಗಳು ಮಾರಾಟವಾಗಿರುವ ಈ ಕಾಲದಲ್ಲಿ ನಾವೇ ನಮಗೆ ಮಾಧ್ಯಮವಾಗಬೇಕಾಗಿರುವ ಕಾಲವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...