Homeಚಳವಳಿನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

ನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಜ್ಮಾ ನಜೀರ್ ಚಿಕ್ಕನೇರಳೆ ಬೆಂಗಳೂರಿನಲ್ಲಿ ಎಲ್ಲರಿಗೂ ಪರಿಚಯವಾಗಿದ್ದು, ಸಾಮಾಜಿಕ ಹೋರಾಟ ಮತ್ತು ಕಾರ್ಯಕ್ರಮಗಳಲ್ಲಿ ಚುರುಕಾಗಿ ಓಡಾಡುವ ಚಿನಕುರಳಿಯಾಗಿ. ವೈದ್ಯಕೀಯ ವಿದ್ಯಾರ್ಥಿನಿಯಾದ ನಜ್ಮಾ ರೇಡಿಯೋ ಜಾಕಿಯಾಗಿ, ಕಂಠದಾನ ಕಲಾವಿದೆಯಾಗಿಯೂ ಕೆಲಸ ಮಾಡುತ್ತಾರೆ. ಆಕೆಯ ಪಿವೋಟ್ ಪದ್ಯಗಳು ಕೃತಿ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ.

ಮೊನ್ನೆ ನನ್ನ ಶಾಲಾದಿನಗಳ ಜೂನಿಯರ್ ಒಬ್ಬ ವಾಟ್ಸಾಪಿನಲ್ಲಿ ದನ ರಕ್ಷಣೆಯ ಬಗ್ಗೆ ಮೆಸೇಜೊಂದನ್ನ ಕಳುಹಿಸಿದ್ದ. ದನದ ಮಾಂಸ ತಿನ್ನುವವರೆಲ್ಲ ದೇಶದ್ರೋಹಿಗಳು ಎಂದು ನೇರವಾಗಿಯೆ ಬರೆದ ಮೆಸೇಜದು. ಇಂತಹುದ್ದೆ ಸ್ವರೂಪದ ಫ್ಯಾಸಿಸ್ಟ್ ಸಮರ್ಥನೆಯ ಮೆಸೇಜುಗಳನ್ನು ಕಳುಹಿಸಿದ್ದ ಹುಡುಗ ನಮ್ಮ ಮನೆಯಲ್ಲೆ ಅಡ್ಡಾಡಿಕೊಂಡು, ತಿಂದುಂಡುಕೊಂಡು ನಮ್ಮೊಟ್ಟಿಗೆಯೆ ಬೆಳೆದವನು. ಡಿಪ್ಲೊಮಾ ಮುಗಿಸಿ ಬೆಂಗಳೂರಿನ ಕಾರ್ಖಾನೆಯೊಂದರ ನೌಕರನಾಗಿದ್ದ ಆತನನ್ನು ಆರ್ಥಿಕ ಕುಸಿತದ ಕಾರಣ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಕೆಲಸದಿಂದ ತೆಗೆದಿದ್ದಾರೆ. ಕೆಲಸವಿಲ್ಲದ ಕಾರಣ ವಾಟ್ಸಾಪ್ ಯೂನಿವರ್ಸಿಟಿಯ ವಿದ್ಯಾರ್ಥಿಯಾಗಿ ಬಲ ಭಜನೆಯಲ್ಲಿ ಪ್ರತಿದಿನ ಮಿಂದೇಳುತ್ತಿದ್ದಾನೆ.

ಬಲಪಂಥೀಯ ಮೇನಿಯಾ ಈ ಮಟ್ಟಿಗೆ ಮಕ್ಕಳಿಂದ ಮುದಿಯರವರೆಗು ಹರಡಲು ಇವರು ಬಳಸಿಕೊಂಡ ಮುಖ್ಯವಾದ ಅಸ್ತ್ರ ‘ಧರ್ಮ’. ಭಾರತವಷ್ಟೆ ಅಲ್ಲ ಯುನೈಟೆಡ್ ಸ್ಟೇಟ್ಸ್‌ನ ಡೊನಾಲ್ಡ್ ಟ್ರಂಪ್‍ನಿಂದ ಹಿಡಿದು ಇಟಲಿಯ ಮ್ಯಾಟಿಯೊ ಸಾಲ್ವಿನಿ ಮತ್ತು ಬ್ರೆಜಿಲ್‍ನ ಜೈರ್ ಬೋಲ್ಸನಾರೊರವರೆಗೂ ಬಲಪಂಥೀಯವಾದಿಗಳು ಧರ್ಮ, ಏಕಸಂಸ್ಕೃತಿ, ಹುಸಿ ದೇಶಪ್ರೇಮದ ಸಿದ್ಧಾಂತಗಳನ್ನೆ ಪ್ರತಿಪಾದಿಸುತ್ತ ಜನರನ್ನು ಎಮೋಶನಲ್ ಬ್ಲಾಕ್‌ಮೇಲ್ ಮಾಡುತ್ತಲೆ ಎಂದಿಗಿಂತಲೂ ಉತ್ತಮವಾಗಿ ಚುನಾವಣಾ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೆ ಚಾಲಾಕಿತನದಿಂದ ಅಧಿಕಾರ ಪಡೆಯುತ್ತಿದ್ದಾರೆ. ಇಂತಹ ಈ ಸಂದರ್ಭದಲ್ಲಿ ಪ್ರಸಕ್ತ ಸರ್ಕಾರದ ಸ್ತುತಿಗೀತೆ ಹಾಡುತ್ತ ಕುಳಿತರೆ ಮಾತ್ರ ನೀವು ದೇಶದಲ್ಲಿ ಬದುಕಲು ಅರ್ಹ, ಒಂದೇ ಒಂದು ಮಾತು ತುಟಿಕ್‍ಪಿಟಿಕ್ ಎಂದರು ಸೆಕ್ಷನ್ ಮೇಲೆ ಸೆಕ್ಷನ್ ಹಾಕಿ ನಿಮ್ಮ ಅಭಿವ್ಯಕ್ತಿಯ ದಮನವನ್ನು ಮಾಡಲಾಗುತ್ತಿದೆ. ಹೆಚ್ಚು ಮಾತನಾಡಿದರೆ ಪ್ರಾಣ ತೆಗೆಯಲು ಸಿದ್ಧವಾಗಿ ಕುಂತಿದೆ ಬಲಪಂಥಿಯ ಫ್ಯಾಸಿಸ್ಟ್ ಶಕ್ತಿಗಳು.

ಗೋಲ್ವಾಲ್ಕರ್ ಮೊಘಲ್ ಆಳ್ವಿಕೆಯನ್ನು ಮುಸ್ಲಿಮ್ ಆಳ್ವಿಕೆಯೆಂದು ಪ್ರತಿಪಾದಿಸಿದ್ದ ಸಿದ್ಧಾಂತದ ಕಾಪಿ-ಪೇಸ್ಟ್ ಪ್ರಸಕ್ತ ಸರ್ಕಾರದ ಸಿದ್ಧಾಂತ. 2014ರ ಚುನಾವಣೆಯ ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ “ಸಾವಿರ ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಮುಸಲ್ಮಾನರನ್ನು ಇಂದಿಗೂ ಪರಕೀಯರೆಂದೇ, ಆಕ್ರಮಣಕಾರರೆಂದೇ ಸರ್ಕಾರ ಬಿಂಬಿಸುತ್ತಿದೆ. ಮುಸಲ್ಮಾನರ ಆಡಳಿತವನ್ನು ದಬ್ಬಾಳಿಕೆಯ ಕಾಲವೆಂದೇ ನಂಬಿಸಲಾಗುತ್ತಿದೆ.

ಬಹುಸಂಖ್ಯಾತರ ನಡುವೆ ಬಲ ಸಿದ್ಧಾಂತವು ಮುಸಲ್ಮಾನರ ಬಗ್ಗೆ ಅಸಹನೆ ಬೆಳೆಸಿಕೊಳ್ಳುವಂತಹ ವಾತಾವರಣ ನಿರ್ಮಿಸಿದ್ದು, ಕೋಮುವಾದ ಸೃಷ್ಟಿಸಿದ ದ್ವೇಷಾಸೂಯೆ ಅಪಪ್ರಚಾರಗಳನ್ನು ತೀವ್ರರೀತಿಯಲ್ಲಿ ಮಾಡುತ್ತಿದೆ. ಇಂತಹುದರ ಫಲವಾಗಿಯೆ ಕಾಶ್ಮೀರದ ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ಶಾಸಕನೊಬ್ಬ ಜನರ ಹಿಂಡಿನೊಂದಿಗೆ ಆರೋಪಿಯ ಪರ ಬೀದಿಗಿಳಿದು ಹೋರಾಡುವ ಉದಾಹರಣೆಯನ್ನು ನಾವು ಕಣ್ಣಿಂದ ಕಾಣಬೇಕಾಯ್ತು.

ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಹಿಂಸೆ ಅಪಪ್ರಚಾರದ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಇಷ್ಟಪಡುವ ಆಹಾರ ತಿನ್ನುವಂತಿಲ್ಲ, ಮಾತನಾಡುವ ಸ್ವಾತಂತ್ರ್ಯವಿಲ್ಲ, ಸಮಾನತೆಯೊಂದಿಗೆ ಶಿಕ್ಷಣವಿಲ್ಲ, ಉತ್ತಮ ಉದ್ಯೋಗವಿಲ್ಲ. ಕಷ್ಟಪಟ್ಟು ಬದುಕಬೇಕೆಂದು ಹೊರಟರೆ ನೆಮ್ಮದಿಯ ವಾತಾವರಣವಿಲ್ಲ, ರಕ್ಷಣೆಯೂ ಇಲ್ಲ. ಘನತೆಯ ಬದುಕೊಂದನ್ನ ಬದುಕುವ ಹಾಗೂ ಇಲ್ಲ ಎಂಬಂಥ ಪರಿಸ್ಥಿತಿ ಮುಸಲ್ಮಾನ, ದಲಿತ ಮತ್ತು ಹಿಂದುಳಿದ ಸಮುದಾಯಗಳದ್ದಾಗಿದೆ.

ಹಿಂದೆ ಜರ್ಮನಿಯಲ್ಲಿ ಯಹೂದಿಗಳ ಮೇಲಾದಂತೆಯೆ ಇಂದು ಭಾರತದಲ್ಲಿಯೂ ಅಲ್ಪಸಂಖ್ಯಾತರು, ತಳಸಮುದಾಯಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದ ದಹನ ನಡೆಯುತ್ತಿರುವ ಈ ಹೊತ್ತು ಬಹು ಕಠಿಣವಾದ ಕಾಲ. ಅನ್‌ಅಫಿಶಿಯಲಿ ಎಮರ್ಜೆನ್ಸಿ ಘೋಷಣೆಯಾಗಿರುವ ಕಾಲ.

ಈಗ ಪ್ರಗತಿಪರ ಜಾತ್ಯತೀತವಾದಿಗಳೆಲ್ಲ ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಕಾಪಾಡಲು ಒಂದಾಗಲೇಬೇಕಾದ ಹೊತ್ತು. ಕಷ್ಟಪಟ್ಟು ಸಂಪಾದಿಸಿರುವ ಸ್ವಾತಂತ್ರ್ಯ ಸಂವಿಧಾನ, ಪ್ರಜಾಪ್ರಭುತ್ವ ಎಲ್ಲವೂ ಮಣ್ಣು ಪಾಲಾಗುವುದನ್ನು ತಪ್ಪಿಸಲು ಚಳವಳಿಗಳು ಮನೆಮನಗಳಿಗೆ ತಲುಪಬೇಕಾಗಿದೆ. ಮಾಧ್ಯಮಗಳು ಮಾರಾಟವಾಗಿರುವ ಈ ಕಾಲದಲ್ಲಿ ನಾವೇ ನಮಗೆ ಮಾಧ್ಯಮವಾಗಬೇಕಾಗಿರುವ ಕಾಲವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...