Homeಚಳವಳಿನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

ನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಜ್ಮಾ ನಜೀರ್ ಚಿಕ್ಕನೇರಳೆ ಬೆಂಗಳೂರಿನಲ್ಲಿ ಎಲ್ಲರಿಗೂ ಪರಿಚಯವಾಗಿದ್ದು, ಸಾಮಾಜಿಕ ಹೋರಾಟ ಮತ್ತು ಕಾರ್ಯಕ್ರಮಗಳಲ್ಲಿ ಚುರುಕಾಗಿ ಓಡಾಡುವ ಚಿನಕುರಳಿಯಾಗಿ. ವೈದ್ಯಕೀಯ ವಿದ್ಯಾರ್ಥಿನಿಯಾದ ನಜ್ಮಾ ರೇಡಿಯೋ ಜಾಕಿಯಾಗಿ, ಕಂಠದಾನ ಕಲಾವಿದೆಯಾಗಿಯೂ ಕೆಲಸ ಮಾಡುತ್ತಾರೆ. ಆಕೆಯ ಪಿವೋಟ್ ಪದ್ಯಗಳು ಕೃತಿ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ.

ಮೊನ್ನೆ ನನ್ನ ಶಾಲಾದಿನಗಳ ಜೂನಿಯರ್ ಒಬ್ಬ ವಾಟ್ಸಾಪಿನಲ್ಲಿ ದನ ರಕ್ಷಣೆಯ ಬಗ್ಗೆ ಮೆಸೇಜೊಂದನ್ನ ಕಳುಹಿಸಿದ್ದ. ದನದ ಮಾಂಸ ತಿನ್ನುವವರೆಲ್ಲ ದೇಶದ್ರೋಹಿಗಳು ಎಂದು ನೇರವಾಗಿಯೆ ಬರೆದ ಮೆಸೇಜದು. ಇಂತಹುದ್ದೆ ಸ್ವರೂಪದ ಫ್ಯಾಸಿಸ್ಟ್ ಸಮರ್ಥನೆಯ ಮೆಸೇಜುಗಳನ್ನು ಕಳುಹಿಸಿದ್ದ ಹುಡುಗ ನಮ್ಮ ಮನೆಯಲ್ಲೆ ಅಡ್ಡಾಡಿಕೊಂಡು, ತಿಂದುಂಡುಕೊಂಡು ನಮ್ಮೊಟ್ಟಿಗೆಯೆ ಬೆಳೆದವನು. ಡಿಪ್ಲೊಮಾ ಮುಗಿಸಿ ಬೆಂಗಳೂರಿನ ಕಾರ್ಖಾನೆಯೊಂದರ ನೌಕರನಾಗಿದ್ದ ಆತನನ್ನು ಆರ್ಥಿಕ ಕುಸಿತದ ಕಾರಣ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಕೆಲಸದಿಂದ ತೆಗೆದಿದ್ದಾರೆ. ಕೆಲಸವಿಲ್ಲದ ಕಾರಣ ವಾಟ್ಸಾಪ್ ಯೂನಿವರ್ಸಿಟಿಯ ವಿದ್ಯಾರ್ಥಿಯಾಗಿ ಬಲ ಭಜನೆಯಲ್ಲಿ ಪ್ರತಿದಿನ ಮಿಂದೇಳುತ್ತಿದ್ದಾನೆ.

ಬಲಪಂಥೀಯ ಮೇನಿಯಾ ಈ ಮಟ್ಟಿಗೆ ಮಕ್ಕಳಿಂದ ಮುದಿಯರವರೆಗು ಹರಡಲು ಇವರು ಬಳಸಿಕೊಂಡ ಮುಖ್ಯವಾದ ಅಸ್ತ್ರ ‘ಧರ್ಮ’. ಭಾರತವಷ್ಟೆ ಅಲ್ಲ ಯುನೈಟೆಡ್ ಸ್ಟೇಟ್ಸ್‌ನ ಡೊನಾಲ್ಡ್ ಟ್ರಂಪ್‍ನಿಂದ ಹಿಡಿದು ಇಟಲಿಯ ಮ್ಯಾಟಿಯೊ ಸಾಲ್ವಿನಿ ಮತ್ತು ಬ್ರೆಜಿಲ್‍ನ ಜೈರ್ ಬೋಲ್ಸನಾರೊರವರೆಗೂ ಬಲಪಂಥೀಯವಾದಿಗಳು ಧರ್ಮ, ಏಕಸಂಸ್ಕೃತಿ, ಹುಸಿ ದೇಶಪ್ರೇಮದ ಸಿದ್ಧಾಂತಗಳನ್ನೆ ಪ್ರತಿಪಾದಿಸುತ್ತ ಜನರನ್ನು ಎಮೋಶನಲ್ ಬ್ಲಾಕ್‌ಮೇಲ್ ಮಾಡುತ್ತಲೆ ಎಂದಿಗಿಂತಲೂ ಉತ್ತಮವಾಗಿ ಚುನಾವಣಾ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೆ ಚಾಲಾಕಿತನದಿಂದ ಅಧಿಕಾರ ಪಡೆಯುತ್ತಿದ್ದಾರೆ. ಇಂತಹ ಈ ಸಂದರ್ಭದಲ್ಲಿ ಪ್ರಸಕ್ತ ಸರ್ಕಾರದ ಸ್ತುತಿಗೀತೆ ಹಾಡುತ್ತ ಕುಳಿತರೆ ಮಾತ್ರ ನೀವು ದೇಶದಲ್ಲಿ ಬದುಕಲು ಅರ್ಹ, ಒಂದೇ ಒಂದು ಮಾತು ತುಟಿಕ್‍ಪಿಟಿಕ್ ಎಂದರು ಸೆಕ್ಷನ್ ಮೇಲೆ ಸೆಕ್ಷನ್ ಹಾಕಿ ನಿಮ್ಮ ಅಭಿವ್ಯಕ್ತಿಯ ದಮನವನ್ನು ಮಾಡಲಾಗುತ್ತಿದೆ. ಹೆಚ್ಚು ಮಾತನಾಡಿದರೆ ಪ್ರಾಣ ತೆಗೆಯಲು ಸಿದ್ಧವಾಗಿ ಕುಂತಿದೆ ಬಲಪಂಥಿಯ ಫ್ಯಾಸಿಸ್ಟ್ ಶಕ್ತಿಗಳು.

ಗೋಲ್ವಾಲ್ಕರ್ ಮೊಘಲ್ ಆಳ್ವಿಕೆಯನ್ನು ಮುಸ್ಲಿಮ್ ಆಳ್ವಿಕೆಯೆಂದು ಪ್ರತಿಪಾದಿಸಿದ್ದ ಸಿದ್ಧಾಂತದ ಕಾಪಿ-ಪೇಸ್ಟ್ ಪ್ರಸಕ್ತ ಸರ್ಕಾರದ ಸಿದ್ಧಾಂತ. 2014ರ ಚುನಾವಣೆಯ ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ “ಸಾವಿರ ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಮುಸಲ್ಮಾನರನ್ನು ಇಂದಿಗೂ ಪರಕೀಯರೆಂದೇ, ಆಕ್ರಮಣಕಾರರೆಂದೇ ಸರ್ಕಾರ ಬಿಂಬಿಸುತ್ತಿದೆ. ಮುಸಲ್ಮಾನರ ಆಡಳಿತವನ್ನು ದಬ್ಬಾಳಿಕೆಯ ಕಾಲವೆಂದೇ ನಂಬಿಸಲಾಗುತ್ತಿದೆ.

ಬಹುಸಂಖ್ಯಾತರ ನಡುವೆ ಬಲ ಸಿದ್ಧಾಂತವು ಮುಸಲ್ಮಾನರ ಬಗ್ಗೆ ಅಸಹನೆ ಬೆಳೆಸಿಕೊಳ್ಳುವಂತಹ ವಾತಾವರಣ ನಿರ್ಮಿಸಿದ್ದು, ಕೋಮುವಾದ ಸೃಷ್ಟಿಸಿದ ದ್ವೇಷಾಸೂಯೆ ಅಪಪ್ರಚಾರಗಳನ್ನು ತೀವ್ರರೀತಿಯಲ್ಲಿ ಮಾಡುತ್ತಿದೆ. ಇಂತಹುದರ ಫಲವಾಗಿಯೆ ಕಾಶ್ಮೀರದ ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ಶಾಸಕನೊಬ್ಬ ಜನರ ಹಿಂಡಿನೊಂದಿಗೆ ಆರೋಪಿಯ ಪರ ಬೀದಿಗಿಳಿದು ಹೋರಾಡುವ ಉದಾಹರಣೆಯನ್ನು ನಾವು ಕಣ್ಣಿಂದ ಕಾಣಬೇಕಾಯ್ತು.

ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಹಿಂಸೆ ಅಪಪ್ರಚಾರದ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಇಷ್ಟಪಡುವ ಆಹಾರ ತಿನ್ನುವಂತಿಲ್ಲ, ಮಾತನಾಡುವ ಸ್ವಾತಂತ್ರ್ಯವಿಲ್ಲ, ಸಮಾನತೆಯೊಂದಿಗೆ ಶಿಕ್ಷಣವಿಲ್ಲ, ಉತ್ತಮ ಉದ್ಯೋಗವಿಲ್ಲ. ಕಷ್ಟಪಟ್ಟು ಬದುಕಬೇಕೆಂದು ಹೊರಟರೆ ನೆಮ್ಮದಿಯ ವಾತಾವರಣವಿಲ್ಲ, ರಕ್ಷಣೆಯೂ ಇಲ್ಲ. ಘನತೆಯ ಬದುಕೊಂದನ್ನ ಬದುಕುವ ಹಾಗೂ ಇಲ್ಲ ಎಂಬಂಥ ಪರಿಸ್ಥಿತಿ ಮುಸಲ್ಮಾನ, ದಲಿತ ಮತ್ತು ಹಿಂದುಳಿದ ಸಮುದಾಯಗಳದ್ದಾಗಿದೆ.

ಹಿಂದೆ ಜರ್ಮನಿಯಲ್ಲಿ ಯಹೂದಿಗಳ ಮೇಲಾದಂತೆಯೆ ಇಂದು ಭಾರತದಲ್ಲಿಯೂ ಅಲ್ಪಸಂಖ್ಯಾತರು, ತಳಸಮುದಾಯಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದ ದಹನ ನಡೆಯುತ್ತಿರುವ ಈ ಹೊತ್ತು ಬಹು ಕಠಿಣವಾದ ಕಾಲ. ಅನ್‌ಅಫಿಶಿಯಲಿ ಎಮರ್ಜೆನ್ಸಿ ಘೋಷಣೆಯಾಗಿರುವ ಕಾಲ.

ಈಗ ಪ್ರಗತಿಪರ ಜಾತ್ಯತೀತವಾದಿಗಳೆಲ್ಲ ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಕಾಪಾಡಲು ಒಂದಾಗಲೇಬೇಕಾದ ಹೊತ್ತು. ಕಷ್ಟಪಟ್ಟು ಸಂಪಾದಿಸಿರುವ ಸ್ವಾತಂತ್ರ್ಯ ಸಂವಿಧಾನ, ಪ್ರಜಾಪ್ರಭುತ್ವ ಎಲ್ಲವೂ ಮಣ್ಣು ಪಾಲಾಗುವುದನ್ನು ತಪ್ಪಿಸಲು ಚಳವಳಿಗಳು ಮನೆಮನಗಳಿಗೆ ತಲುಪಬೇಕಾಗಿದೆ. ಮಾಧ್ಯಮಗಳು ಮಾರಾಟವಾಗಿರುವ ಈ ಕಾಲದಲ್ಲಿ ನಾವೇ ನಮಗೆ ಮಾಧ್ಯಮವಾಗಬೇಕಾಗಿರುವ ಕಾಲವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...