Homeಚಳವಳಿನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

ನಮಗೆ ನಾವೇ ಮಾಧ್ಯಮವಾಗಬೇಕಾದ ಹೊತ್ತಿದು : ನಜ್ಮಾ ನಜೀರ್

- Advertisement -
- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ನಜ್ಮಾ ನಜೀರ್ ಚಿಕ್ಕನೇರಳೆ ಬೆಂಗಳೂರಿನಲ್ಲಿ ಎಲ್ಲರಿಗೂ ಪರಿಚಯವಾಗಿದ್ದು, ಸಾಮಾಜಿಕ ಹೋರಾಟ ಮತ್ತು ಕಾರ್ಯಕ್ರಮಗಳಲ್ಲಿ ಚುರುಕಾಗಿ ಓಡಾಡುವ ಚಿನಕುರಳಿಯಾಗಿ. ವೈದ್ಯಕೀಯ ವಿದ್ಯಾರ್ಥಿನಿಯಾದ ನಜ್ಮಾ ರೇಡಿಯೋ ಜಾಕಿಯಾಗಿ, ಕಂಠದಾನ ಕಲಾವಿದೆಯಾಗಿಯೂ ಕೆಲಸ ಮಾಡುತ್ತಾರೆ. ಆಕೆಯ ಪಿವೋಟ್ ಪದ್ಯಗಳು ಕೃತಿ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ.

ಮೊನ್ನೆ ನನ್ನ ಶಾಲಾದಿನಗಳ ಜೂನಿಯರ್ ಒಬ್ಬ ವಾಟ್ಸಾಪಿನಲ್ಲಿ ದನ ರಕ್ಷಣೆಯ ಬಗ್ಗೆ ಮೆಸೇಜೊಂದನ್ನ ಕಳುಹಿಸಿದ್ದ. ದನದ ಮಾಂಸ ತಿನ್ನುವವರೆಲ್ಲ ದೇಶದ್ರೋಹಿಗಳು ಎಂದು ನೇರವಾಗಿಯೆ ಬರೆದ ಮೆಸೇಜದು. ಇಂತಹುದ್ದೆ ಸ್ವರೂಪದ ಫ್ಯಾಸಿಸ್ಟ್ ಸಮರ್ಥನೆಯ ಮೆಸೇಜುಗಳನ್ನು ಕಳುಹಿಸಿದ್ದ ಹುಡುಗ ನಮ್ಮ ಮನೆಯಲ್ಲೆ ಅಡ್ಡಾಡಿಕೊಂಡು, ತಿಂದುಂಡುಕೊಂಡು ನಮ್ಮೊಟ್ಟಿಗೆಯೆ ಬೆಳೆದವನು. ಡಿಪ್ಲೊಮಾ ಮುಗಿಸಿ ಬೆಂಗಳೂರಿನ ಕಾರ್ಖಾನೆಯೊಂದರ ನೌಕರನಾಗಿದ್ದ ಆತನನ್ನು ಆರ್ಥಿಕ ಕುಸಿತದ ಕಾರಣ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಕೆಲಸದಿಂದ ತೆಗೆದಿದ್ದಾರೆ. ಕೆಲಸವಿಲ್ಲದ ಕಾರಣ ವಾಟ್ಸಾಪ್ ಯೂನಿವರ್ಸಿಟಿಯ ವಿದ್ಯಾರ್ಥಿಯಾಗಿ ಬಲ ಭಜನೆಯಲ್ಲಿ ಪ್ರತಿದಿನ ಮಿಂದೇಳುತ್ತಿದ್ದಾನೆ.

ಬಲಪಂಥೀಯ ಮೇನಿಯಾ ಈ ಮಟ್ಟಿಗೆ ಮಕ್ಕಳಿಂದ ಮುದಿಯರವರೆಗು ಹರಡಲು ಇವರು ಬಳಸಿಕೊಂಡ ಮುಖ್ಯವಾದ ಅಸ್ತ್ರ ‘ಧರ್ಮ’. ಭಾರತವಷ್ಟೆ ಅಲ್ಲ ಯುನೈಟೆಡ್ ಸ್ಟೇಟ್ಸ್‌ನ ಡೊನಾಲ್ಡ್ ಟ್ರಂಪ್‍ನಿಂದ ಹಿಡಿದು ಇಟಲಿಯ ಮ್ಯಾಟಿಯೊ ಸಾಲ್ವಿನಿ ಮತ್ತು ಬ್ರೆಜಿಲ್‍ನ ಜೈರ್ ಬೋಲ್ಸನಾರೊರವರೆಗೂ ಬಲಪಂಥೀಯವಾದಿಗಳು ಧರ್ಮ, ಏಕಸಂಸ್ಕೃತಿ, ಹುಸಿ ದೇಶಪ್ರೇಮದ ಸಿದ್ಧಾಂತಗಳನ್ನೆ ಪ್ರತಿಪಾದಿಸುತ್ತ ಜನರನ್ನು ಎಮೋಶನಲ್ ಬ್ಲಾಕ್‌ಮೇಲ್ ಮಾಡುತ್ತಲೆ ಎಂದಿಗಿಂತಲೂ ಉತ್ತಮವಾಗಿ ಚುನಾವಣಾ ದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅಷ್ಟೆ ಚಾಲಾಕಿತನದಿಂದ ಅಧಿಕಾರ ಪಡೆಯುತ್ತಿದ್ದಾರೆ. ಇಂತಹ ಈ ಸಂದರ್ಭದಲ್ಲಿ ಪ್ರಸಕ್ತ ಸರ್ಕಾರದ ಸ್ತುತಿಗೀತೆ ಹಾಡುತ್ತ ಕುಳಿತರೆ ಮಾತ್ರ ನೀವು ದೇಶದಲ್ಲಿ ಬದುಕಲು ಅರ್ಹ, ಒಂದೇ ಒಂದು ಮಾತು ತುಟಿಕ್‍ಪಿಟಿಕ್ ಎಂದರು ಸೆಕ್ಷನ್ ಮೇಲೆ ಸೆಕ್ಷನ್ ಹಾಕಿ ನಿಮ್ಮ ಅಭಿವ್ಯಕ್ತಿಯ ದಮನವನ್ನು ಮಾಡಲಾಗುತ್ತಿದೆ. ಹೆಚ್ಚು ಮಾತನಾಡಿದರೆ ಪ್ರಾಣ ತೆಗೆಯಲು ಸಿದ್ಧವಾಗಿ ಕುಂತಿದೆ ಬಲಪಂಥಿಯ ಫ್ಯಾಸಿಸ್ಟ್ ಶಕ್ತಿಗಳು.

ಗೋಲ್ವಾಲ್ಕರ್ ಮೊಘಲ್ ಆಳ್ವಿಕೆಯನ್ನು ಮುಸ್ಲಿಮ್ ಆಳ್ವಿಕೆಯೆಂದು ಪ್ರತಿಪಾದಿಸಿದ್ದ ಸಿದ್ಧಾಂತದ ಕಾಪಿ-ಪೇಸ್ಟ್ ಪ್ರಸಕ್ತ ಸರ್ಕಾರದ ಸಿದ್ಧಾಂತ. 2014ರ ಚುನಾವಣೆಯ ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ “ಸಾವಿರ ವರ್ಷಗಳ ಗುಲಾಮಗಿರಿಯಿಂದ ಭಾರತವನ್ನು ಸ್ವತಂತ್ರಗೊಳಿಸಿದ್ದೇನೆ” ಎಂದು ಹೇಳಿಕೆ ನೀಡಿದ್ದರು. ಮುಸಲ್ಮಾನರನ್ನು ಇಂದಿಗೂ ಪರಕೀಯರೆಂದೇ, ಆಕ್ರಮಣಕಾರರೆಂದೇ ಸರ್ಕಾರ ಬಿಂಬಿಸುತ್ತಿದೆ. ಮುಸಲ್ಮಾನರ ಆಡಳಿತವನ್ನು ದಬ್ಬಾಳಿಕೆಯ ಕಾಲವೆಂದೇ ನಂಬಿಸಲಾಗುತ್ತಿದೆ.

ಬಹುಸಂಖ್ಯಾತರ ನಡುವೆ ಬಲ ಸಿದ್ಧಾಂತವು ಮುಸಲ್ಮಾನರ ಬಗ್ಗೆ ಅಸಹನೆ ಬೆಳೆಸಿಕೊಳ್ಳುವಂತಹ ವಾತಾವರಣ ನಿರ್ಮಿಸಿದ್ದು, ಕೋಮುವಾದ ಸೃಷ್ಟಿಸಿದ ದ್ವೇಷಾಸೂಯೆ ಅಪಪ್ರಚಾರಗಳನ್ನು ತೀವ್ರರೀತಿಯಲ್ಲಿ ಮಾಡುತ್ತಿದೆ. ಇಂತಹುದರ ಫಲವಾಗಿಯೆ ಕಾಶ್ಮೀರದ ಆಸಿಫಾ ಅತ್ಯಾಚಾರ ಪ್ರಕರಣದಲ್ಲಿ ಶಾಸಕನೊಬ್ಬ ಜನರ ಹಿಂಡಿನೊಂದಿಗೆ ಆರೋಪಿಯ ಪರ ಬೀದಿಗಿಳಿದು ಹೋರಾಡುವ ಉದಾಹರಣೆಯನ್ನು ನಾವು ಕಣ್ಣಿಂದ ಕಾಣಬೇಕಾಯ್ತು.

ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಹಿಂಸೆ ಅಪಪ್ರಚಾರದ ನಾನಾ ಸ್ವರೂಪಗಳು ಪ್ರಕಟವಾಗುತ್ತಿವೆ. ಇಷ್ಟಪಡುವ ಆಹಾರ ತಿನ್ನುವಂತಿಲ್ಲ, ಮಾತನಾಡುವ ಸ್ವಾತಂತ್ರ್ಯವಿಲ್ಲ, ಸಮಾನತೆಯೊಂದಿಗೆ ಶಿಕ್ಷಣವಿಲ್ಲ, ಉತ್ತಮ ಉದ್ಯೋಗವಿಲ್ಲ. ಕಷ್ಟಪಟ್ಟು ಬದುಕಬೇಕೆಂದು ಹೊರಟರೆ ನೆಮ್ಮದಿಯ ವಾತಾವರಣವಿಲ್ಲ, ರಕ್ಷಣೆಯೂ ಇಲ್ಲ. ಘನತೆಯ ಬದುಕೊಂದನ್ನ ಬದುಕುವ ಹಾಗೂ ಇಲ್ಲ ಎಂಬಂಥ ಪರಿಸ್ಥಿತಿ ಮುಸಲ್ಮಾನ, ದಲಿತ ಮತ್ತು ಹಿಂದುಳಿದ ಸಮುದಾಯಗಳದ್ದಾಗಿದೆ.

ಹಿಂದೆ ಜರ್ಮನಿಯಲ್ಲಿ ಯಹೂದಿಗಳ ಮೇಲಾದಂತೆಯೆ ಇಂದು ಭಾರತದಲ್ಲಿಯೂ ಅಲ್ಪಸಂಖ್ಯಾತರು, ತಳಸಮುದಾಯಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಪ್ರಜಾಪ್ರಭುತ್ವ, ಸಂವಿಧಾನದ ದಹನ ನಡೆಯುತ್ತಿರುವ ಈ ಹೊತ್ತು ಬಹು ಕಠಿಣವಾದ ಕಾಲ. ಅನ್‌ಅಫಿಶಿಯಲಿ ಎಮರ್ಜೆನ್ಸಿ ಘೋಷಣೆಯಾಗಿರುವ ಕಾಲ.

ಈಗ ಪ್ರಗತಿಪರ ಜಾತ್ಯತೀತವಾದಿಗಳೆಲ್ಲ ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ದೇಶವನ್ನು ಕಾಪಾಡಲು ಒಂದಾಗಲೇಬೇಕಾದ ಹೊತ್ತು. ಕಷ್ಟಪಟ್ಟು ಸಂಪಾದಿಸಿರುವ ಸ್ವಾತಂತ್ರ್ಯ ಸಂವಿಧಾನ, ಪ್ರಜಾಪ್ರಭುತ್ವ ಎಲ್ಲವೂ ಮಣ್ಣು ಪಾಲಾಗುವುದನ್ನು ತಪ್ಪಿಸಲು ಚಳವಳಿಗಳು ಮನೆಮನಗಳಿಗೆ ತಲುಪಬೇಕಾಗಿದೆ. ಮಾಧ್ಯಮಗಳು ಮಾರಾಟವಾಗಿರುವ ಈ ಕಾಲದಲ್ಲಿ ನಾವೇ ನಮಗೆ ಮಾಧ್ಯಮವಾಗಬೇಕಾಗಿರುವ ಕಾಲವೂ ಹೌದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...