Homeಕರ್ನಾಟಕನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ಕಾಂಗ್ರೆಸ್‌ ಬೆಂಬಲದಿಂದ ಪಿಎಂ, ಸಿಎಂ ಆದವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ: ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಾಗ್ದಾಳಿ

- Advertisement -
- Advertisement -

“ನಮ್ಮದು ಗಾಂಧೀಜಿ ಹಿಂದುತ್ವ, ಇತರ ಪಕ್ಷಗಳದ್ದು ಗೋಡ್ಸೆ ಹಿಂದುತ್ವ” ಎಂದು ಮಾಜಿ ಸಚಿವ, ಸಹಕಾರಿ ಕ್ಷೇತ್ರದ ಧುರೀಣ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ರೈತರ ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ಹುನ್ನಾರದ ವಿರುದ್ಧ ಮಧುಗಿರಿ ತಾಲ್ಲೂಕಿನ ಬಂದ್ರೇಹಳ್ಳಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ಹೇಳುತ್ತೇನೆ. ನಾವು ಎಲ್ಲರೂ ಹಿಂದೂಗಳೇ. ನಾವೇನು ಕ್ರಿಶ್ಚಿಯನ್‌, ಪಾರ್ಸಿ ಮತ್ಯಾವುದೋ ಧರ್ಮದವರಲ್ಲ. ಆದರೆ ನಾವು ಪ್ರತಿಪಾದನೆ ಮಾಡುವುದು ಮಹಾತ್ಮ ಗಾಂಧೀಜಿಯವರ ಹಿಂದುತ್ವ. ಬೇರೆ ಪಕ್ಷದವರು ಪ್ರತಿಪಾದನೆ ಮಾಡುವುದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವನ್ನು ನಾವು ವಿರೋಧ ಮಾಡಲೇಬೇಕು. ಗಾಂಧಿಯ ಹಿಂದುತ್ವದ ಜನರು ನಾವಾಗಬೇಕು ಎಂದು ಹೇಳಿದ್ದಾರೆ.

ಗೋಡ್ಸೆ ಹಿಂದುತ್ವವನ್ನು ತೋರಿಸಿ ಹಿಂದೂಗಳೆಲ್ಲ ಒಂದೇ ಎನ್ನುವವರು, ಪರಿಶಿಷ್ಟ ಜಾತಿಯವರನ್ನಾಗಲೀ, ನಮ್ಮೊಂದಿಗಾಗಲೀ ಸಂಬಂಧ ಮಾಡಲಿ ನೋಡೋಣ.  ವೋಟ್‌ಗಾಗಿ ಮಾತ್ರ ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಚೀನಾದವರು ಬಂದು ಇಂಡಿಯಾ ದೇಶದಲ್ಲಿ ಕೂತಿದ್ದಾರಲ್ಲ, 58 ಇಂಚಿನ ಎದೆಯವರು, ದೇಶಭಕ್ತರು ಹೋಗಿ ಅವರನ್ನು ಓಡಿಸಲಿ. ದೇಶಭಕ್ತಿಯನ್ನು ಇಲ್ಲಿ ತೋರಿಸುವುದಲ್ಲ ಎಂದು ಟೀಕಿಸಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಜಾತಿ, ಜಾತಿಗಳನ್ನು ಎತ್ತಿಕಟ್ಟಲಾಗುತ್ತಿದೆ. ಐದು ರಾಜ್ಯಗಳಲ್ಲಿ ಗೆದ್ದಿರಬಹುದು. ಅದು ಬೇರೆ ವಿಚಾರ. ವಿರೋಧ ಪಕ್ಷಗಳ ಲೋಪಗಳೂ ಇದಕ್ಕೆ ಕಾರಣವಾಗಿರುತ್ತವೆ. ಆದರೆ ಈ ದೇಶವನ್ನು, ಜನರನ್ನು ಒಡೆಯುವುದು, ದ್ವೇಶವನ್ನು ಹುಟ್ಟುಹಾಕುವುದು ದೇಶಕ್ಕೆ ಅಪಾಯ ಎಂದು ಎಚ್ಚರಿಸಿದ್ದಾರೆ.

ದೇವೇಗೌಡರನ್ನು ಸೆಕ್ಯುಲರ್‌ ಫ್ಯಾಬ್ರಿಕ್ ಅಂತಾರೆ. ಈ ಪದವನ್ನು ಎಲ್ಲಿಂದ ಹಿಡಿದುಕೊಂಡು ಬಂದರೋ ಗೊತ್ತಿಲ್ಲ. ಸೆಕ್ಯೂಲರ್‌ ಫ್ಯಾಬ್ರಿಕ್ ಅಂದರೆ ಏನಪ್ಪ? ಅಲ್ಲಿ ಹೋಗಿ ಮೋದಿಯನ್ನು ಭೇಟಿ ಮಾಡ್ತಾರೆ, ಇಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಬೆಂಬಲ ಕೊಟ್ಟು ಪಾಸ್ ಮಾಡಿಸುತ್ತಾರೆ. ನಂತರ ಮೌರ್ಯ ಸರ್ಕಲ್‌ನಲ್ಲಿ ಕೂತು ಮಸೂದೆ ವಿರುದ್ಧವಾಗಿ ಧರಣಿ ಮಾಡ್ತಾರೆ. ಈ ರೀತಿಯ ಇಬ್ಬಂದಿ ರಾಜಕಾರಣ ಮಾಡುವುದರಿಂದ ದೇಶಕ್ಕೆ ಅಪಾಯವಿದೆ ಎಂದಿದ್ದಾರೆ.

ಹಾನಗಲ್‌, ಬಸವ ಕಲ್ಯಾಣ, ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಮುಸ್ಲಿಮರಿಗೆ ಟಿಕೆಟ್ ನೀಡಿತು. ರಾಮನಗರದಲ್ಲಿ, ಚೆನ್ನಪಟ್ಟಣದಲ್ಲಿ ಮುಸ್ಲಿಮರು ಹೆಚ್ಚಿದ್ದಾರೆ, ಅಲ್ಲಿ ಜೆಡಿಎಸ್ ಮುಸ್ಲಿಮರಿಗೆ ಟಿಕೆಟ್ ಕೊಡಲಿ. ಕಡಿಮೆ ಸಂಖ್ಯೆಯಲ್ಲಿರುವಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದರೂ ಜನ ಮತ ಹಾಕಲಿಲ್ಲ ಅನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದವರು ಕಾಂಗ್ರೆಸ್‌ ಪಕ್ಷವನ್ನೇ ನಾಶ ಮಾಡುತ್ತೇನೆ ಎನ್ನುತ್ತಾರೆ. 13 ಜನ ಇದ್ದರೆ ಮಾತ್ರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯ. 37 ಜನ ಎಂಎಲ್‌ಎಗಳಿದ್ದರೂ ಕಾಂಗ್ರೆಸ್‌ ಬೆಂಬಲದಿಂದಾಗಿ ಮುಖ್ಯಮಂತ್ರಿಯಾದರು. ಅಧಿಕಾರ ಹೋದ ತಕ್ಷಣ ಕಾಂಗ್ರೆಸ್‌ ಮುಗಿಸುತ್ತೇನೆ ಅಂತಾರೆ. ಇವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ. 274 ಜನ ಎಂಪಿಗಳಿದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ. 16 ಜನ ಸದಸ್ಯರಿದ್ದರೂ ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದರು. ಈಗ ಕಾಂಗ್ರೆಸ್ ಮುಗಿಸುತ್ತೇನೆ ಎಂದರೆ ಇವರಿಗೆ ಉಪಕಾರ ಸ್ಮರಣೆ ಇದೆಯಾ? ಸುಳ್ಳು ಹೇಳಿಕೊಂಡು, ಜಾತಿ ಹೇಳಿಕೊಂಡು ಇರುವವರಿಗೆ ಯಶಸ್ಸು ದೊರಕುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2023ರ ಚುನಾವಣೆಯಲ್ಲಿ ಮತ ಕೇಳಲು ಬಂದಿಲ್ಲ. ಚುನಾವಣೆಯಲ್ಲಿ ಮತ ಕೇಳಿ ಎಂಎಲ್‌ಎ ಆಗಬಹುದು. ಎಂಎಲ್‌ಎ ಎಂದು ಕರೆಸಿಕೊಳ್ಳುವ ಚಟವಿಲ್ಲ. ಜನರ ಹೃದಯದಲ್ಲಿ ಸ್ಥಾನ ಬಯಸುತ್ತೇನೆ. ವಿಧಾನಸಭೆಯಲ್ಲಿ ಅಲ್ಲ. ಎಲ್ಲ ಅಪಪ್ರಚಾರದ ನಡುವೆ 70,000 ಮತದಾರರು ನನಗೆ ಮತ ಹಾಕಿದ್ದೀರಿ. ದುಡ್ಡು ಹಾಗೂ ಜಾತಿ ಮೀರಿ ಬೆಂಬಲ ನೀಡಿದ್ದೀರಿ. ದುಡ್ಡಿದ್ದರೆ ಸಾಕು ಮಧುಗಿರಿಯಲ್ಲಿ ಗೆದ್ದು ಬಿಡ್ತಾರೆ ಎಂಬ ಭಾವನೆ ಹೊರಗಡೆ ಬೆಳೆದುಬಿಟ್ಟಿದೆ. ಇದನ್ನು ಹೋಗಲಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

2008ರಲ್ಲಿ 500 ಮತಗಳ ಅಂತರದಲ್ಲಿ ಸೋಲು ಕಂಡೆ. ಅದಕ್ಕೆ ಕಾರಣಗಳು ಬೇರೆ ಇರಬಹುದು. ಮುಂದಿನ ಚುನಾವಣೆಯಲ್ಲಿ 1,000 ಮತಗಳ ಅಂತರದಲ್ಲಿ ಸೋತೆ. ನನಗೆ ಆಗಲೂ ಬೇಸರವಾಗಲಿಲ್ಲ. 2018 ಸೋತ ಮೇಲೆ ಮತ್ತೆ ಚುನಾವಣೆಯತ್ತ ತಲೆಯೂ ಹಾಕಬಾರದು ಎಂದುಕೊಂಡಿದ್ದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲ ಗೌರವ ತಂದಿರಿ. ನಾವು ಬಿಜೆಪಿಗೆ ಮತ ಹಾಕಿಸಿಲ್ಲ. ಆದರೆ ಜಿ.ಎಸ್‌.ಬಸವರಾಜು ಅವರಿಗೆ ಮತ ಹಾಕಿಸಿದೆವು ಅಷ್ಟೇ. ಯಾಕೆಂದರೆ ಬಸವರಾಜು ಅವರು ಹಳೆಯ ಕಾಂಗ್ರೆಸ್ಸಿಗರು. ಅವರು ಜನಪರವಾಗಿರುತ್ತಾರೆಂದು ಮತ ಹಾಕಿಸಿದ್ದೇವೆ. ಅದರಲ್ಲಿ ಎರಡನೇ ಮಾತಿಲ್ಲ. ಬಸವರಾಜು ಬಿಜೆಪಿಯವರು ಎಂದು ನಾವು ಭಾವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...