Homeಕರ್ನಾಟಕನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ಕಾಂಗ್ರೆಸ್‌ ಬೆಂಬಲದಿಂದ ಪಿಎಂ, ಸಿಎಂ ಆದವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ: ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಾಗ್ದಾಳಿ

- Advertisement -
- Advertisement -

“ನಮ್ಮದು ಗಾಂಧೀಜಿ ಹಿಂದುತ್ವ, ಇತರ ಪಕ್ಷಗಳದ್ದು ಗೋಡ್ಸೆ ಹಿಂದುತ್ವ” ಎಂದು ಮಾಜಿ ಸಚಿವ, ಸಹಕಾರಿ ಕ್ಷೇತ್ರದ ಧುರೀಣ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ರೈತರ ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ಹುನ್ನಾರದ ವಿರುದ್ಧ ಮಧುಗಿರಿ ತಾಲ್ಲೂಕಿನ ಬಂದ್ರೇಹಳ್ಳಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ಹೇಳುತ್ತೇನೆ. ನಾವು ಎಲ್ಲರೂ ಹಿಂದೂಗಳೇ. ನಾವೇನು ಕ್ರಿಶ್ಚಿಯನ್‌, ಪಾರ್ಸಿ ಮತ್ಯಾವುದೋ ಧರ್ಮದವರಲ್ಲ. ಆದರೆ ನಾವು ಪ್ರತಿಪಾದನೆ ಮಾಡುವುದು ಮಹಾತ್ಮ ಗಾಂಧೀಜಿಯವರ ಹಿಂದುತ್ವ. ಬೇರೆ ಪಕ್ಷದವರು ಪ್ರತಿಪಾದನೆ ಮಾಡುವುದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವನ್ನು ನಾವು ವಿರೋಧ ಮಾಡಲೇಬೇಕು. ಗಾಂಧಿಯ ಹಿಂದುತ್ವದ ಜನರು ನಾವಾಗಬೇಕು ಎಂದು ಹೇಳಿದ್ದಾರೆ.

ಗೋಡ್ಸೆ ಹಿಂದುತ್ವವನ್ನು ತೋರಿಸಿ ಹಿಂದೂಗಳೆಲ್ಲ ಒಂದೇ ಎನ್ನುವವರು, ಪರಿಶಿಷ್ಟ ಜಾತಿಯವರನ್ನಾಗಲೀ, ನಮ್ಮೊಂದಿಗಾಗಲೀ ಸಂಬಂಧ ಮಾಡಲಿ ನೋಡೋಣ.  ವೋಟ್‌ಗಾಗಿ ಮಾತ್ರ ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಚೀನಾದವರು ಬಂದು ಇಂಡಿಯಾ ದೇಶದಲ್ಲಿ ಕೂತಿದ್ದಾರಲ್ಲ, 58 ಇಂಚಿನ ಎದೆಯವರು, ದೇಶಭಕ್ತರು ಹೋಗಿ ಅವರನ್ನು ಓಡಿಸಲಿ. ದೇಶಭಕ್ತಿಯನ್ನು ಇಲ್ಲಿ ತೋರಿಸುವುದಲ್ಲ ಎಂದು ಟೀಕಿಸಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಜಾತಿ, ಜಾತಿಗಳನ್ನು ಎತ್ತಿಕಟ್ಟಲಾಗುತ್ತಿದೆ. ಐದು ರಾಜ್ಯಗಳಲ್ಲಿ ಗೆದ್ದಿರಬಹುದು. ಅದು ಬೇರೆ ವಿಚಾರ. ವಿರೋಧ ಪಕ್ಷಗಳ ಲೋಪಗಳೂ ಇದಕ್ಕೆ ಕಾರಣವಾಗಿರುತ್ತವೆ. ಆದರೆ ಈ ದೇಶವನ್ನು, ಜನರನ್ನು ಒಡೆಯುವುದು, ದ್ವೇಶವನ್ನು ಹುಟ್ಟುಹಾಕುವುದು ದೇಶಕ್ಕೆ ಅಪಾಯ ಎಂದು ಎಚ್ಚರಿಸಿದ್ದಾರೆ.

ದೇವೇಗೌಡರನ್ನು ಸೆಕ್ಯುಲರ್‌ ಫ್ಯಾಬ್ರಿಕ್ ಅಂತಾರೆ. ಈ ಪದವನ್ನು ಎಲ್ಲಿಂದ ಹಿಡಿದುಕೊಂಡು ಬಂದರೋ ಗೊತ್ತಿಲ್ಲ. ಸೆಕ್ಯೂಲರ್‌ ಫ್ಯಾಬ್ರಿಕ್ ಅಂದರೆ ಏನಪ್ಪ? ಅಲ್ಲಿ ಹೋಗಿ ಮೋದಿಯನ್ನು ಭೇಟಿ ಮಾಡ್ತಾರೆ, ಇಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಬೆಂಬಲ ಕೊಟ್ಟು ಪಾಸ್ ಮಾಡಿಸುತ್ತಾರೆ. ನಂತರ ಮೌರ್ಯ ಸರ್ಕಲ್‌ನಲ್ಲಿ ಕೂತು ಮಸೂದೆ ವಿರುದ್ಧವಾಗಿ ಧರಣಿ ಮಾಡ್ತಾರೆ. ಈ ರೀತಿಯ ಇಬ್ಬಂದಿ ರಾಜಕಾರಣ ಮಾಡುವುದರಿಂದ ದೇಶಕ್ಕೆ ಅಪಾಯವಿದೆ ಎಂದಿದ್ದಾರೆ.

ಹಾನಗಲ್‌, ಬಸವ ಕಲ್ಯಾಣ, ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಮುಸ್ಲಿಮರಿಗೆ ಟಿಕೆಟ್ ನೀಡಿತು. ರಾಮನಗರದಲ್ಲಿ, ಚೆನ್ನಪಟ್ಟಣದಲ್ಲಿ ಮುಸ್ಲಿಮರು ಹೆಚ್ಚಿದ್ದಾರೆ, ಅಲ್ಲಿ ಜೆಡಿಎಸ್ ಮುಸ್ಲಿಮರಿಗೆ ಟಿಕೆಟ್ ಕೊಡಲಿ. ಕಡಿಮೆ ಸಂಖ್ಯೆಯಲ್ಲಿರುವಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದರೂ ಜನ ಮತ ಹಾಕಲಿಲ್ಲ ಅನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದವರು ಕಾಂಗ್ರೆಸ್‌ ಪಕ್ಷವನ್ನೇ ನಾಶ ಮಾಡುತ್ತೇನೆ ಎನ್ನುತ್ತಾರೆ. 13 ಜನ ಇದ್ದರೆ ಮಾತ್ರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯ. 37 ಜನ ಎಂಎಲ್‌ಎಗಳಿದ್ದರೂ ಕಾಂಗ್ರೆಸ್‌ ಬೆಂಬಲದಿಂದಾಗಿ ಮುಖ್ಯಮಂತ್ರಿಯಾದರು. ಅಧಿಕಾರ ಹೋದ ತಕ್ಷಣ ಕಾಂಗ್ರೆಸ್‌ ಮುಗಿಸುತ್ತೇನೆ ಅಂತಾರೆ. ಇವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ. 274 ಜನ ಎಂಪಿಗಳಿದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ. 16 ಜನ ಸದಸ್ಯರಿದ್ದರೂ ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದರು. ಈಗ ಕಾಂಗ್ರೆಸ್ ಮುಗಿಸುತ್ತೇನೆ ಎಂದರೆ ಇವರಿಗೆ ಉಪಕಾರ ಸ್ಮರಣೆ ಇದೆಯಾ? ಸುಳ್ಳು ಹೇಳಿಕೊಂಡು, ಜಾತಿ ಹೇಳಿಕೊಂಡು ಇರುವವರಿಗೆ ಯಶಸ್ಸು ದೊರಕುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2023ರ ಚುನಾವಣೆಯಲ್ಲಿ ಮತ ಕೇಳಲು ಬಂದಿಲ್ಲ. ಚುನಾವಣೆಯಲ್ಲಿ ಮತ ಕೇಳಿ ಎಂಎಲ್‌ಎ ಆಗಬಹುದು. ಎಂಎಲ್‌ಎ ಎಂದು ಕರೆಸಿಕೊಳ್ಳುವ ಚಟವಿಲ್ಲ. ಜನರ ಹೃದಯದಲ್ಲಿ ಸ್ಥಾನ ಬಯಸುತ್ತೇನೆ. ವಿಧಾನಸಭೆಯಲ್ಲಿ ಅಲ್ಲ. ಎಲ್ಲ ಅಪಪ್ರಚಾರದ ನಡುವೆ 70,000 ಮತದಾರರು ನನಗೆ ಮತ ಹಾಕಿದ್ದೀರಿ. ದುಡ್ಡು ಹಾಗೂ ಜಾತಿ ಮೀರಿ ಬೆಂಬಲ ನೀಡಿದ್ದೀರಿ. ದುಡ್ಡಿದ್ದರೆ ಸಾಕು ಮಧುಗಿರಿಯಲ್ಲಿ ಗೆದ್ದು ಬಿಡ್ತಾರೆ ಎಂಬ ಭಾವನೆ ಹೊರಗಡೆ ಬೆಳೆದುಬಿಟ್ಟಿದೆ. ಇದನ್ನು ಹೋಗಲಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

2008ರಲ್ಲಿ 500 ಮತಗಳ ಅಂತರದಲ್ಲಿ ಸೋಲು ಕಂಡೆ. ಅದಕ್ಕೆ ಕಾರಣಗಳು ಬೇರೆ ಇರಬಹುದು. ಮುಂದಿನ ಚುನಾವಣೆಯಲ್ಲಿ 1,000 ಮತಗಳ ಅಂತರದಲ್ಲಿ ಸೋತೆ. ನನಗೆ ಆಗಲೂ ಬೇಸರವಾಗಲಿಲ್ಲ. 2018 ಸೋತ ಮೇಲೆ ಮತ್ತೆ ಚುನಾವಣೆಯತ್ತ ತಲೆಯೂ ಹಾಕಬಾರದು ಎಂದುಕೊಂಡಿದ್ದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲ ಗೌರವ ತಂದಿರಿ. ನಾವು ಬಿಜೆಪಿಗೆ ಮತ ಹಾಕಿಸಿಲ್ಲ. ಆದರೆ ಜಿ.ಎಸ್‌.ಬಸವರಾಜು ಅವರಿಗೆ ಮತ ಹಾಕಿಸಿದೆವು ಅಷ್ಟೇ. ಯಾಕೆಂದರೆ ಬಸವರಾಜು ಅವರು ಹಳೆಯ ಕಾಂಗ್ರೆಸ್ಸಿಗರು. ಅವರು ಜನಪರವಾಗಿರುತ್ತಾರೆಂದು ಮತ ಹಾಕಿಸಿದ್ದೇವೆ. ಅದರಲ್ಲಿ ಎರಡನೇ ಮಾತಿಲ್ಲ. ಬಸವರಾಜು ಬಿಜೆಪಿಯವರು ಎಂದು ನಾವು ಭಾವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...