Homeಕರ್ನಾಟಕನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ನಮ್ಮದು ಗಾಂಧೀಜಿ ಹಿಂದುತ್ವ, ಅವರದ್ದು ಗೋಡ್ಸೆ ಹಿಂದುತ್ವ: ಕೆ.ಎನ್.ರಾಜಣ್ಣ

ಕಾಂಗ್ರೆಸ್‌ ಬೆಂಬಲದಿಂದ ಪಿಎಂ, ಸಿಎಂ ಆದವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ: ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಾಗ್ದಾಳಿ

- Advertisement -
- Advertisement -

“ನಮ್ಮದು ಗಾಂಧೀಜಿ ಹಿಂದುತ್ವ, ಇತರ ಪಕ್ಷಗಳದ್ದು ಗೋಡ್ಸೆ ಹಿಂದುತ್ವ” ಎಂದು ಮಾಜಿ ಸಚಿವ, ಸಹಕಾರಿ ಕ್ಷೇತ್ರದ ಧುರೀಣ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ರೈತರ ಬಗರ್‌ ಹುಕುಂ ಸಾಗುವಳಿ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳುವ ಅರಣ್ಯ ಇಲಾಖೆ ಹಾಗೂ ಸರ್ಕಾರದ ಹುನ್ನಾರದ ವಿರುದ್ಧ ಮಧುಗಿರಿ ತಾಲ್ಲೂಕಿನ ಬಂದ್ರೇಹಳ್ಳಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ದಾರೆ.

ಹಿಂದುತ್ವದ ಬಗ್ಗೆ ಮಾತನಾಡುವವರಿಗೆ ಹೇಳುತ್ತೇನೆ. ನಾವು ಎಲ್ಲರೂ ಹಿಂದೂಗಳೇ. ನಾವೇನು ಕ್ರಿಶ್ಚಿಯನ್‌, ಪಾರ್ಸಿ ಮತ್ಯಾವುದೋ ಧರ್ಮದವರಲ್ಲ. ಆದರೆ ನಾವು ಪ್ರತಿಪಾದನೆ ಮಾಡುವುದು ಮಹಾತ್ಮ ಗಾಂಧೀಜಿಯವರ ಹಿಂದುತ್ವ. ಬೇರೆ ಪಕ್ಷದವರು ಪ್ರತಿಪಾದನೆ ಮಾಡುವುದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವನ್ನು ನಾವು ವಿರೋಧ ಮಾಡಲೇಬೇಕು. ಗಾಂಧಿಯ ಹಿಂದುತ್ವದ ಜನರು ನಾವಾಗಬೇಕು ಎಂದು ಹೇಳಿದ್ದಾರೆ.

ಗೋಡ್ಸೆ ಹಿಂದುತ್ವವನ್ನು ತೋರಿಸಿ ಹಿಂದೂಗಳೆಲ್ಲ ಒಂದೇ ಎನ್ನುವವರು, ಪರಿಶಿಷ್ಟ ಜಾತಿಯವರನ್ನಾಗಲೀ, ನಮ್ಮೊಂದಿಗಾಗಲೀ ಸಂಬಂಧ ಮಾಡಲಿ ನೋಡೋಣ.  ವೋಟ್‌ಗಾಗಿ ಮಾತ್ರ ದೇಶಭಕ್ತರು ಎಂದು ಹೇಳಿಕೊಳ್ಳುತ್ತಾರೆ. ಚೀನಾದವರು ಬಂದು ಇಂಡಿಯಾ ದೇಶದಲ್ಲಿ ಕೂತಿದ್ದಾರಲ್ಲ, 58 ಇಂಚಿನ ಎದೆಯವರು, ದೇಶಭಕ್ತರು ಹೋಗಿ ಅವರನ್ನು ಓಡಿಸಲಿ. ದೇಶಭಕ್ತಿಯನ್ನು ಇಲ್ಲಿ ತೋರಿಸುವುದಲ್ಲ ಎಂದು ಟೀಕಿಸಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಜಾತಿ, ಜಾತಿಗಳನ್ನು ಎತ್ತಿಕಟ್ಟಲಾಗುತ್ತಿದೆ. ಐದು ರಾಜ್ಯಗಳಲ್ಲಿ ಗೆದ್ದಿರಬಹುದು. ಅದು ಬೇರೆ ವಿಚಾರ. ವಿರೋಧ ಪಕ್ಷಗಳ ಲೋಪಗಳೂ ಇದಕ್ಕೆ ಕಾರಣವಾಗಿರುತ್ತವೆ. ಆದರೆ ಈ ದೇಶವನ್ನು, ಜನರನ್ನು ಒಡೆಯುವುದು, ದ್ವೇಶವನ್ನು ಹುಟ್ಟುಹಾಕುವುದು ದೇಶಕ್ಕೆ ಅಪಾಯ ಎಂದು ಎಚ್ಚರಿಸಿದ್ದಾರೆ.

ದೇವೇಗೌಡರನ್ನು ಸೆಕ್ಯುಲರ್‌ ಫ್ಯಾಬ್ರಿಕ್ ಅಂತಾರೆ. ಈ ಪದವನ್ನು ಎಲ್ಲಿಂದ ಹಿಡಿದುಕೊಂಡು ಬಂದರೋ ಗೊತ್ತಿಲ್ಲ. ಸೆಕ್ಯೂಲರ್‌ ಫ್ಯಾಬ್ರಿಕ್ ಅಂದರೆ ಏನಪ್ಪ? ಅಲ್ಲಿ ಹೋಗಿ ಮೋದಿಯನ್ನು ಭೇಟಿ ಮಾಡ್ತಾರೆ, ಇಲ್ಲಿ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಬೆಂಬಲ ಕೊಟ್ಟು ಪಾಸ್ ಮಾಡಿಸುತ್ತಾರೆ. ನಂತರ ಮೌರ್ಯ ಸರ್ಕಲ್‌ನಲ್ಲಿ ಕೂತು ಮಸೂದೆ ವಿರುದ್ಧವಾಗಿ ಧರಣಿ ಮಾಡ್ತಾರೆ. ಈ ರೀತಿಯ ಇಬ್ಬಂದಿ ರಾಜಕಾರಣ ಮಾಡುವುದರಿಂದ ದೇಶಕ್ಕೆ ಅಪಾಯವಿದೆ ಎಂದಿದ್ದಾರೆ.

ಹಾನಗಲ್‌, ಬಸವ ಕಲ್ಯಾಣ, ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಮುಸ್ಲಿಮರಿಗೆ ಟಿಕೆಟ್ ನೀಡಿತು. ರಾಮನಗರದಲ್ಲಿ, ಚೆನ್ನಪಟ್ಟಣದಲ್ಲಿ ಮುಸ್ಲಿಮರು ಹೆಚ್ಚಿದ್ದಾರೆ, ಅಲ್ಲಿ ಜೆಡಿಎಸ್ ಮುಸ್ಲಿಮರಿಗೆ ಟಿಕೆಟ್ ಕೊಡಲಿ. ಕಡಿಮೆ ಸಂಖ್ಯೆಯಲ್ಲಿರುವಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದ್ದರೂ ಜನ ಮತ ಹಾಕಲಿಲ್ಲ ಅನ್ನುತ್ತಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದವರು ಕಾಂಗ್ರೆಸ್‌ ಪಕ್ಷವನ್ನೇ ನಾಶ ಮಾಡುತ್ತೇನೆ ಎನ್ನುತ್ತಾರೆ. 13 ಜನ ಇದ್ದರೆ ಮಾತ್ರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯ. 37 ಜನ ಎಂಎಲ್‌ಎಗಳಿದ್ದರೂ ಕಾಂಗ್ರೆಸ್‌ ಬೆಂಬಲದಿಂದಾಗಿ ಮುಖ್ಯಮಂತ್ರಿಯಾದರು. ಅಧಿಕಾರ ಹೋದ ತಕ್ಷಣ ಕಾಂಗ್ರೆಸ್‌ ಮುಗಿಸುತ್ತೇನೆ ಅಂತಾರೆ. ಇವರಿಗೆ ಉಪಕಾರ ಸ್ಮರಣೆ ಇದೆಯಾ? ಇವರಿಗೆ ಲಾಟರಿ ಪ್ರಧಾನಿ, ಲಾಟರಿ ಮುಖ್ಯಮಂತ್ರಿ ಎಂದು ಹೇಳುತ್ತೇನೆ. 274 ಜನ ಎಂಪಿಗಳಿದ್ದರೆ ಮಾತ್ರ ಪ್ರಧಾನಿಯಾಗಲು ಸಾಧ್ಯ. 16 ಜನ ಸದಸ್ಯರಿದ್ದರೂ ಕಾಂಗ್ರೆಸ್‌ ಬೆಂಬಲದಿಂದ ಪ್ರಧಾನಿಯಾದರು. ಈಗ ಕಾಂಗ್ರೆಸ್ ಮುಗಿಸುತ್ತೇನೆ ಎಂದರೆ ಇವರಿಗೆ ಉಪಕಾರ ಸ್ಮರಣೆ ಇದೆಯಾ? ಸುಳ್ಳು ಹೇಳಿಕೊಂಡು, ಜಾತಿ ಹೇಳಿಕೊಂಡು ಇರುವವರಿಗೆ ಯಶಸ್ಸು ದೊರಕುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2023ರ ಚುನಾವಣೆಯಲ್ಲಿ ಮತ ಕೇಳಲು ಬಂದಿಲ್ಲ. ಚುನಾವಣೆಯಲ್ಲಿ ಮತ ಕೇಳಿ ಎಂಎಲ್‌ಎ ಆಗಬಹುದು. ಎಂಎಲ್‌ಎ ಎಂದು ಕರೆಸಿಕೊಳ್ಳುವ ಚಟವಿಲ್ಲ. ಜನರ ಹೃದಯದಲ್ಲಿ ಸ್ಥಾನ ಬಯಸುತ್ತೇನೆ. ವಿಧಾನಸಭೆಯಲ್ಲಿ ಅಲ್ಲ. ಎಲ್ಲ ಅಪಪ್ರಚಾರದ ನಡುವೆ 70,000 ಮತದಾರರು ನನಗೆ ಮತ ಹಾಕಿದ್ದೀರಿ. ದುಡ್ಡು ಹಾಗೂ ಜಾತಿ ಮೀರಿ ಬೆಂಬಲ ನೀಡಿದ್ದೀರಿ. ದುಡ್ಡಿದ್ದರೆ ಸಾಕು ಮಧುಗಿರಿಯಲ್ಲಿ ಗೆದ್ದು ಬಿಡ್ತಾರೆ ಎಂಬ ಭಾವನೆ ಹೊರಗಡೆ ಬೆಳೆದುಬಿಟ್ಟಿದೆ. ಇದನ್ನು ಹೋಗಲಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

2008ರಲ್ಲಿ 500 ಮತಗಳ ಅಂತರದಲ್ಲಿ ಸೋಲು ಕಂಡೆ. ಅದಕ್ಕೆ ಕಾರಣಗಳು ಬೇರೆ ಇರಬಹುದು. ಮುಂದಿನ ಚುನಾವಣೆಯಲ್ಲಿ 1,000 ಮತಗಳ ಅಂತರದಲ್ಲಿ ಸೋತೆ. ನನಗೆ ಆಗಲೂ ಬೇಸರವಾಗಲಿಲ್ಲ. 2018 ಸೋತ ಮೇಲೆ ಮತ್ತೆ ಚುನಾವಣೆಯತ್ತ ತಲೆಯೂ ಹಾಕಬಾರದು ಎಂದುಕೊಂಡಿದ್ದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲ ಗೌರವ ತಂದಿರಿ. ನಾವು ಬಿಜೆಪಿಗೆ ಮತ ಹಾಕಿಸಿಲ್ಲ. ಆದರೆ ಜಿ.ಎಸ್‌.ಬಸವರಾಜು ಅವರಿಗೆ ಮತ ಹಾಕಿಸಿದೆವು ಅಷ್ಟೇ. ಯಾಕೆಂದರೆ ಬಸವರಾಜು ಅವರು ಹಳೆಯ ಕಾಂಗ್ರೆಸ್ಸಿಗರು. ಅವರು ಜನಪರವಾಗಿರುತ್ತಾರೆಂದು ಮತ ಹಾಕಿಸಿದ್ದೇವೆ. ಅದರಲ್ಲಿ ಎರಡನೇ ಮಾತಿಲ್ಲ. ಬಸವರಾಜು ಬಿಜೆಪಿಯವರು ಎಂದು ನಾವು ಭಾವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್ ವಿವಾದದ ಸುತ್ತ ದ್ವೇಷದ ಹುತ್ತ; ಹಿಂದುತ್ವದಲ್ಲಿ ಬಿರುಕು ಮತ್ತು ನಂಜಿನ ನೀರಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....