Homeಕರ್ನಾಟಕಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

- Advertisement -
- Advertisement -

ಬಿಜೆಪಿ, ಆರೆಸ್ಸೆಸ್ ಸಮಾಜದಲ್ಲಿ ಭಿತ್ತುತ್ತಿರುವ ಕೋಮುವಾದಿ ವಿಚಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಗತಿಪರ ಸಂಘಟನೆಗಳು ಒಕ್ಕೂಟ ರಚಿಸಿಕೊಂಡು ಕಾರ್ಯಮಗ್ನರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಗೌರಿ ಪತ್ರಿಕಾ ಬಳಗ ಬೆಂಗಳೂರಿನ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಪತ್ರಕರ್ತರ ಮೇಲಿನ ದಾಳಿಯನ್ನು ಎದುರಿಸುವ ಕುರಿತ ಚರ್ಚಾಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಪರವಾಗಿ ಕೆಲಸ ಮಾಡುವವರನ್ನು ಬಂಽಸುವ ಪ್ರಕ್ರಿಯೆಯನ್ನು ಮುಂದುವರೆಸುವ ಎಲ್ಲ ಮುನ್ಸೂಚನೆಗಳು ಇವೆ. ಇದನ್ನು ತಡೆಯಬೇಕಾದರೆ ಬಿಜೆಪಿಯ ಜನವಿರೋಧಿ ನಿಲುವುಗಳ ಕುರಿತು ಜನಾಭಿಪ್ರಾಯ ಮೂಡಿಸುವುದೊಂದೆ ನಮಗಿರುವ ಬಹುದೊಡ್ಡ ದಾರಿ ಮಾಡಿಕೊಟ್ಟಿತು ಎಂದರು.

ಆರೆಸ್ಸೆಸ್ ಪ್ರಜಾಪ್ರಭುತ್ವದ ದಾರಿಯನ್ನೇ ಬಳಸಿಕೊಂಡು ಇಡೀ ವ್ಯವಸ್ಥೆಯನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸಂಸತ್‌ನ ಒಳಗೂ ಕೋಮುವಾದಿ ವ್ಯಕ್ತಿಗಳನ್ನು ನುಸುಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು RSSನ ಜನವಿರೋಧಿ ನೀತಿಯನ್ನು ಬಯಲು ಮಾಡಲು ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇದೆ ಎಂದು ಅವರು ಹೇಳಿದರು.

ಇವತ್ತಿನ ರಾಜಕಾರಣಿಗಳು, ನ್ಯಾಯಾಧೀಶರು, ಪೊಲೀಸ್ ವ್ಯವಸ್ಥೆಯು ಪತ್ರಿಕೆ, ದೃಶ್ಯ ಮಾಧ್ಯಮಗಳಿಗಿಂತ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲಿ ಬರುವ ಸುದ್ಧಿಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಹೀಗಾಗಿ ಪ್ರಗತಿಪರವಾಗಿ ಚಿಂತಿಸುವ ಪ್ರತಿಯೊಬ್ಬರು ತಮಗೆ ಗೊತ್ತಿರುವ ಸತ್ಯ ಸಂಗತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಮೂಲಕ ಹೆಚ್ಚು ಜನರಿಗೆ ತಲುಪುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕೋಮು ಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್ ಮಾತನಾಡಿ, ಕೋಮುವಾದಿಗಳು ಮನೆ ಒಳಗೆ ನುಸುಳಿದ್ದಾರೆ. ಮಾಡು ಇಲ್ಲವೆ ಮಡಿ ಎನ್ನುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಒಕ್ಕೂಟವಾಗಿ ಆರೆಸ್ಸೆಸ್ ಚಿಂತನೆಯ ವಿರುದ್ಧ ಜನಾಭಿಪ್ರಾಯ ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಸುನಿಲ್ ಶಿರಸಂಗಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಜೆಪಿ ಸರಕಾರ ಬಂಧಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪತ್ರಕರ್ತರು, ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸುವಂತಹ ಷಡ್ಯಂತ್ರಗಳನ್ನು ರೂಪಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ಇವತ್ತಿನ ಸನ್ನಿವೇಶ ಜನಪರವಾಗಿ ಚಿಂತಿಸುವವರಿಗೆ ತೀರ ಆತಂಕ ಕಾರಿಯಾಗಿದೆ. ಪ್ರಭುತ್ವ ಮಾಡುವ ಜನವಿರೋಧಿ ನೀತಿಗಳನ್ನು ಟೀಕೆ ಮಾಡಿದರೆ ಬಂಧಿಸುವಂತಹ, ಬೆದರಿಕೆ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರರು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕಾದ ಅಗತ್ಯವಿದೆ ಎಂದರು.

ಸಭೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್, ಪ್ರೊ.ನಗರಗೆರೆ ರಮೇಶ್, ಕರ್ನಾಟಕ ಜನಶಕ್ತಿಯ ವಾಸು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಚಂದ್ರು, ಮಾನವ ಹಕ್ಕು ಹೋರಾಟಗಾರ ಮನೋಹರ್, ಪ್ರೊ.ಶಿವರಾಮಯ್ಯ, ಅಂಕಣಕಾರ ನಾರಾಯಣ, ಹುಲಿಕುಂಟೆಮೂರ್ತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...