Homeಕರ್ನಾಟಕಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

- Advertisement -
- Advertisement -

ಬಿಜೆಪಿ, ಆರೆಸ್ಸೆಸ್ ಸಮಾಜದಲ್ಲಿ ಭಿತ್ತುತ್ತಿರುವ ಕೋಮುವಾದಿ ವಿಚಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಗತಿಪರ ಸಂಘಟನೆಗಳು ಒಕ್ಕೂಟ ರಚಿಸಿಕೊಂಡು ಕಾರ್ಯಮಗ್ನರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಗೌರಿ ಪತ್ರಿಕಾ ಬಳಗ ಬೆಂಗಳೂರಿನ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಪತ್ರಕರ್ತರ ಮೇಲಿನ ದಾಳಿಯನ್ನು ಎದುರಿಸುವ ಕುರಿತ ಚರ್ಚಾಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಪರವಾಗಿ ಕೆಲಸ ಮಾಡುವವರನ್ನು ಬಂಽಸುವ ಪ್ರಕ್ರಿಯೆಯನ್ನು ಮುಂದುವರೆಸುವ ಎಲ್ಲ ಮುನ್ಸೂಚನೆಗಳು ಇವೆ. ಇದನ್ನು ತಡೆಯಬೇಕಾದರೆ ಬಿಜೆಪಿಯ ಜನವಿರೋಧಿ ನಿಲುವುಗಳ ಕುರಿತು ಜನಾಭಿಪ್ರಾಯ ಮೂಡಿಸುವುದೊಂದೆ ನಮಗಿರುವ ಬಹುದೊಡ್ಡ ದಾರಿ ಮಾಡಿಕೊಟ್ಟಿತು ಎಂದರು.

ಆರೆಸ್ಸೆಸ್ ಪ್ರಜಾಪ್ರಭುತ್ವದ ದಾರಿಯನ್ನೇ ಬಳಸಿಕೊಂಡು ಇಡೀ ವ್ಯವಸ್ಥೆಯನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸಂಸತ್‌ನ ಒಳಗೂ ಕೋಮುವಾದಿ ವ್ಯಕ್ತಿಗಳನ್ನು ನುಸುಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು RSSನ ಜನವಿರೋಧಿ ನೀತಿಯನ್ನು ಬಯಲು ಮಾಡಲು ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇದೆ ಎಂದು ಅವರು ಹೇಳಿದರು.

ಇವತ್ತಿನ ರಾಜಕಾರಣಿಗಳು, ನ್ಯಾಯಾಧೀಶರು, ಪೊಲೀಸ್ ವ್ಯವಸ್ಥೆಯು ಪತ್ರಿಕೆ, ದೃಶ್ಯ ಮಾಧ್ಯಮಗಳಿಗಿಂತ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲಿ ಬರುವ ಸುದ್ಧಿಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಹೀಗಾಗಿ ಪ್ರಗತಿಪರವಾಗಿ ಚಿಂತಿಸುವ ಪ್ರತಿಯೊಬ್ಬರು ತಮಗೆ ಗೊತ್ತಿರುವ ಸತ್ಯ ಸಂಗತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಮೂಲಕ ಹೆಚ್ಚು ಜನರಿಗೆ ತಲುಪುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕೋಮು ಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್ ಮಾತನಾಡಿ, ಕೋಮುವಾದಿಗಳು ಮನೆ ಒಳಗೆ ನುಸುಳಿದ್ದಾರೆ. ಮಾಡು ಇಲ್ಲವೆ ಮಡಿ ಎನ್ನುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಒಕ್ಕೂಟವಾಗಿ ಆರೆಸ್ಸೆಸ್ ಚಿಂತನೆಯ ವಿರುದ್ಧ ಜನಾಭಿಪ್ರಾಯ ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಸುನಿಲ್ ಶಿರಸಂಗಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಜೆಪಿ ಸರಕಾರ ಬಂಧಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪತ್ರಕರ್ತರು, ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸುವಂತಹ ಷಡ್ಯಂತ್ರಗಳನ್ನು ರೂಪಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ಇವತ್ತಿನ ಸನ್ನಿವೇಶ ಜನಪರವಾಗಿ ಚಿಂತಿಸುವವರಿಗೆ ತೀರ ಆತಂಕ ಕಾರಿಯಾಗಿದೆ. ಪ್ರಭುತ್ವ ಮಾಡುವ ಜನವಿರೋಧಿ ನೀತಿಗಳನ್ನು ಟೀಕೆ ಮಾಡಿದರೆ ಬಂಧಿಸುವಂತಹ, ಬೆದರಿಕೆ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರರು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕಾದ ಅಗತ್ಯವಿದೆ ಎಂದರು.

ಸಭೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್, ಪ್ರೊ.ನಗರಗೆರೆ ರಮೇಶ್, ಕರ್ನಾಟಕ ಜನಶಕ್ತಿಯ ವಾಸು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಚಂದ್ರು, ಮಾನವ ಹಕ್ಕು ಹೋರಾಟಗಾರ ಮನೋಹರ್, ಪ್ರೊ.ಶಿವರಾಮಯ್ಯ, ಅಂಕಣಕಾರ ನಾರಾಯಣ, ಹುಲಿಕುಂಟೆಮೂರ್ತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...