Homeಕರ್ನಾಟಕ'ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ': ಕರ್ನಾಟಕದಲ್ಲಿ ಎನ್‌ಇಪಿ ಸ್ಥಗಿತ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

‘ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ’: ಕರ್ನಾಟಕದಲ್ಲಿ ಎನ್‌ಇಪಿ ಸ್ಥಗಿತ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನುಷ್ಠಾನ ಸ್ಥಗಿತಗೊಳಿಸಿದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 2023ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ಮಂಗಳವಾರ (ಆಗಸ್ಟ್ 12) ವಜಾಗೊಳಿಸಿದೆ.

ಅರ್ಜಿದಾರರು ಯಾವುದೇ ಮೂಲಭೂತ/ಶಾಸನಬದ್ಧ ಹಕ್ಕುಗಳ ಉಲ್ಲಂಘನೆಯನ್ನು ಉಲ್ಲೇಖಿಸಿದ ಅಥವಾ ಸಾಬೀತಪಡಿಸದ ಹೊರತು, ನೀತಿ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಎನ್‌ಇಪಿ ಜಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ ವಕೀಲ ಗಿರೀಶ್‌ ಭಾರದ್ವಾಜ್‌ ಹಾಗೂ ಆರ್‌.ಆನಂದ ಮೂರ್ತಿ ಪಿಐಎಲ್ ಸಲ್ಲಿಸಿದ್ದರು.

“ನಾವು ಸರ್ಕಾರಕ್ಕೆ ನಿರ್ದಿಷ್ಟ ನೀತಿಯನ್ನು ಅನುಸರಿಸಲು ಅಥವಾ ಅನುಸರಿಸದಂತೆ ನಿರ್ದೇಶಿಸಲು ಹೇಗೆ ಸಾಧ್ಯ? ಯಾವ ಕಾನೂನಿನ ಅಡಿಯಲ್ಲಿ ನಾವು ಅವರನ್ನು (ರಾಜ್ಯ ಸರ್ಕಾರ) ನೀತಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸಲು ಒತ್ತಾಯಿಸಬಹುದು?” ಎಂದು ನ್ಯಾಯಾಧೀಶರು ವಿಚಾರಣೆಯ ಸಮಯದಲ್ಲಿ ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಅಕ್ಟೋಬರ್ 11, 2023ರಂದು ಎನ್‌ಇಪಿ ಅನುಷ್ಠಾನವನ್ನು ಹಿಂತೆಗೆದುಕೊಂಡಿತ್ತು ಮತ್ತು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ತಜ್ಞರ ಸಮಿತಿಯನ್ನು ರಚಿಸಿತ್ತು.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಅರುಣಾ ಶ್ಯಾಮ್, “ಒಂದು ರಾಷ್ಟ್ರ, ಒಂದು ಶಿಕ್ಷಣ’ ಇರಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಹಿಂದಿನ ಉದ್ದೇಶವಾಗಿದೆ” ಎಂದು ಒತ್ತಿ ಹೇಳಿದ್ದರು.

“ಎನ್‌ಇಪಿಯಿಂದ ದೇಶದಾದ್ಯಂತ ಒಂದೇ ರೀತಿಯ ಶಿಕ್ಷಣ ವ್ಯವಸ್ಥೆ ಇರುತ್ತದೆ. ಪ್ರದೇಶವಾರು ಭಿನ್ನತೆ ಇರುವುದಿಲ್ಲ. ಈ ಹಿಂದೆ ಜಾರಿಗೆ ತಂದಿದ್ದ ಮತ್ತು ಈಗ ಜಾರಿಗೆ ತರಲು ಮುಂದಾಗಿರುವ ಶಿಕ್ಷಣ ನೀತಿಯಿಂದ ಸಮಸ್ಯೆಗಳಿವೆ” ಎಂದಿದ್ದರು.

“ಕೇಂದ್ರ ಸರ್ಕಾರವು ಎನ್ಇಪಿ ಜಾರಿಗೊಳಿಸಲು ಹೆಚ್ಚಿನ ಹಣವನ್ನು ಒದಗಿಸಿದೆ. ಈಗ ಅದನ್ನು ಸ್ಥಗಿತಗೊಳಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತದೆ” ಎಂದು ಅರುಣ್ ಶ್ಯಾಮ್ ಹೇಳಿದ್ದರು.

Courtesy : livelaw.in

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಆ.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್:  ಒಳಮೀಸಲಾತಿ ಹೋರಾಟಗಾರರ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...