Homeಮುಖಪುಟ'70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ': ಅಸ್ಸಾಂ ಸಿಎಂ...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ಸುಮಾರು 70 ಲಕ್ಷ ‘ಬಂಗಾಳಿ ಮುಸ್ಲಿಮರ’ನ್ನು ಭಾರತದಿಂದ ಹೊರಹಾಕುವುದು ‘ಮಾನವೀಯವಾಗಿ ಸಾಧ್ಯವಿಲ್ಲ’. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಈ 70 ಲಕ್ಷ ಬಂಗಾಳಿ ಮುಸ್ಲಿಮರನ್ನು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರು ಎಂದು ಸಿಎಂ ಶರ್ಮಾ, ಅವರ ಸರ್ಕಾರ ಮತ್ತು ಹಿಂದುತ್ವ ಸಂಘಟನೆಗಳು ಹೇಳುತ್ತಿವೆ. ಅವರನ್ನು ಒಂದು ರೀತಿ ಅವಹೇಳನಕಾರಿಯಾಗಿ ‘ಮಿಯಾ ಮುಸ್ಲಿಮರು’ ಎಂಬ ಪದ ಬಳಸಿ ಕರೆಯಲಾಗುತ್ತಿದೆ.

ಶುಕ್ರವಾರ (ಮಾ.13) ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಆಜ್‌ತಕ್ ಸುದ್ದಿವಾಹಿನಿ ನಿರೂಪಕಿ ಅಂಜನಾ ಓಂ ಕಶ್ಯಪ್ ನೇತೃತ್ವದಲ್ಲಿ ‘ಪಂಚಾಯತ್ ಆಜ್‌ತಕ್’ ಎಂಬ ಕಾರ್ಯಕ್ರಮ ಆಯೋಜಿಸಿತ್ತು. ಅದರಲ್ಲಿ ಮಾತನಾಡಿದ ಸಿಎಂ ಶರ್ಮಾ, “ನಾವು 70 ಲಕ್ಷ ಜನರನ್ನು ಓಡಿಸಲು ಸಾಧ್ಯವಿಲ್ಲ. 70 ಲಕ್ಷ ಜನರನ್ನು ಕರೆದೊಯ್ಯುವ ರೈಲು ಭಾರತದಲ್ಲಿ ಇಲ್ಲ. ಅದು ಮಾನವೀಯವಾಗಿ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಹಾಗಾಗಿ, ಆ 70 ಲಕ್ಷ ಜನರು ಅಸ್ಸಾಂನಲ್ಲಿ ಅಥವಾ ಭಾರತದಲ್ಲಿ ವಾಸಿಸಲು ಸಾಧ್ಯವಿಲ್ಲದಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ. ಈ ಮೂಲಕ ಅವರೇ ದೇಶ ಬಿಡುವಂತೆ ಮಾಡುತ್ತೇವೆ ಎಂದಿದ್ದಾರೆ.

ಮುಸ್ಲಿಂ ಆಟೋ ಚಾಲಕರಿಗೆ 5 ರೂಪಾಯಿ ಬದಲು 4 ರೂಪಾಯಿ ಕೊಡಿ ಎಂಬ ಈ ಹಿಂದಿನ ತನ್ನ ವಿವಾದಾತ್ಮಕ ಹೇಳಿಕೆಯನ್ನು ನೆನಪಿಸಿದ ಶರ್ಮಾ, “ನಾನು ಯಾರಿಗೂ ಥಳಿಸಲು ಅಥವಾ ದಾಳಿ ಮಾಡಲು ಹೇಳಿಲ್ಲ. ಅವರಿಗೆ (ಬಂಗಾಳಿ ಮುಸ್ಲಿಮರು) ಉಸಿರುಗಟ್ಟುವಂತೆ ವಾತಾವರಣ ಸೃಷ್ಟಿಸಿ ಎಂಬುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

“ಕಾನೂನು ಕೈಗೆತ್ತಿಕೊಳ್ಳಬೇಡಿ, ಯಾರಿಗೂ ದೈಹಿಕವಾಗಿ ಹಾನಿ ಮಾಡಬೇಡಿ. ನಾನು ಎಂದಿಗೂ ಯಾರನ್ನೂ ಕೊಲ್ಲಿ ಎಂದು ಹೇಳಿಲ್ಲ, ಅದಕ್ಕೆ ಅವಕಾಶವಿಲ್ಲ. ಆದರೆ ಅವರು (ಬಂಗಾಳಿ ಮುಸ್ಲಿಮರು) ಅವರಾಗಿಯೇ ದೇಶ ಬಿಟ್ಟು ಹೋಗಬೇಕೆಂದು ಭಾವಿಸುವ ಮಟ್ಟಿಗೆ ಅವರಿಗೆ ತೊಂದರೆ ಕೊಡಿ” ಎಂದು ಎಂದಿದ್ದೇನೆ ಎಂದು ತನ್ನ ಮುಸ್ಲಿಂ ದ್ವೇಷದ ಹೇಳಿಕೆಯನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದಾರೆ.

ಗುಂಡಿಕ್ಕುವ ವಿಡಿಯೋ ರಿಪೋಸ್ಟ್ ಮಾಡುತ್ತೇವೆ

ಸಿಎಂ ಶರ್ಮಾ ಮುಸ್ಲಿಮರನ್ನು ಗುರಿಯಾಗಿಸಿ ಗುಂಡಿಕ್ಕಿದಂತೆ ತೋರಿಸುವ ಎಐ ವಿಡಿಯೋವನ್ನು ಇತ್ತೀಚೆಗೆ ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್ ಮಾಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ, ಅದನ್ನು ಡಿಲೀಟ್ ಮಾಡಿತ್ತು.

ಆ ವಿಡಿಯೋ ವಿರುದ್ದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್‌ಗೆ ಹೋಗಿ ಎಂದಿತ್ತು. ಹಾಗಾಗಿ, ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಿಎಂ ಶರ್ಮಾಗೆ ನೋಟಿಸ್ ಜಾರಿ ಮಾಡಿದೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಎಐ ಸೃಷ್ಟಿತ ಚಿತ್ರಗಳನ್ನು ಬಳಸಲಾಗಿತ್ತು.

ಈ ವಿಡಿಯೋ ಕುರಿತು ‘ಪಂಚಾಯತ್‌ ಆಜ್‌ತಕ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಶರ್ಮಾ, “ಆ ವಿಡಿಯೋ ಸರಿಯಾಗಿತ್ತು. ಆದರೆ, ಅದರಲ್ಲಿ ಗುರಿಯಾಗಿಸಿದ ಮುಸ್ಲಿಮರು ‘ಬಾಂಗ್ಲಾದೇಶದವರು’ ಎಂದು ಉಲ್ಲೇಖಿಸಬೇಕಿತ್ತು ಎಂದಿದ್ದಾರೆ.

ದಾಖಲೆರಹಿತ ವಲಸಿಗರಿಗೂ ಕೂಡ ಕಾನೂನುಬದ್ಧವಾಗಿ ಗುಂಡಿಕ್ಕಲು ಸಾಧ್ಯವಿಲ್ಲ ಎಂದು ನಿರೂಪಕರು ಹೇಳಿದಾಗ, ವಿಡಿಯೋದಲ್ಲಿ ಗುಂಡಿಕ್ಕಿದಂತೆ ತೋರಿಸಿರುವುದು ಸಾಂಕೇತಿಕ ಎಂದು ಸಿಎಂ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.

ಬಾಂಗ್ಲಾದೇಶಿಯರು ಅಸ್ಸಾಂಗೆ ನುಸುಳುವುದನ್ನು ತಡೆಯಲು, ಅಸ್ಸಾಂ ಮುಖ್ಯಮಂತ್ರಿ ಅವರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿರುವ ವ್ಯಕ್ತಿಗಳು ಬಾಂಗ್ಲಾದೇಶಿಯರು ಎಂದು ಉಲ್ಲೇಖಿಸದಿರುವುದು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ತಪ್ಪು. ಹಾಗಾಗಿ, ಅದನ್ನು ಡಿಲೀಟ್ ಮಾಡಿದ್ದೇವೆ. ಕರೆಕ್ಷನ್ ಮಾಡಿ ಮತ್ತೆ ಅದೇ ವಿಡಿಯೋವನ್ನು ಪೋಸ್ಟ್ ಮಾಡುತ್ತೇವೆ. ಬಿಜೆಪಿ ರಾಜ್ಯ ಘಕಟದ ಖಾತೆಗಿಂತ ತನ್ನ ವೈಯಕ್ತಿಕ ಖಾತೆಯಲ್ಲಿ ಪೋಸ್ಟ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ‘ಮಿಯಾ’ ಎಂಬ ಪದವನ್ನು ಸಾಮಾನ್ಯವಾಗಿ ಬಂಗಾಳಿ ಮೂಲದ ಮುಸ್ಲಿಮರನ್ನು ಹೀಯಾಳಿಸಲು ಅವಮಾನಕಾರಿ ಪದವಾಗಿ ಬಳಸಲಾಗುತ್ತದೆ. ಇವರಲ್ಲಿ ಅನೇಕರು ಬಾಂಗ್ಲಾದೇಶದಿಂದ ಬಂದ ದಾಖಲೆ ರಹಿತ ವಲಸಿಗರು ಎಂದು ಆರೋಪಿಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿರುವ ಸಿಎಂ ಶರ್ಮಾ ಬಂಗಾಳಿ ಮುಸ್ಲಿಮರನ್ನು ಗುರಿಯಾಗಿಸಿ ಇತರ ಅನೇಕ ದ್ವೇಷದ ಹೇಳಿಕೆಗಳನ್ನು ನೀಡಿದ್ದಾರೆ. “ಅವರಿಗೆ (ಬಂಗಾಳಿ ಮುಸ್ಲಿಮರಿಗೆ) ತೊಂದರೆ ಕೊಡುವುದೇ ನಮ್ಮ ಕೆಲಸ” ಎಂದು ಹೇಳಿಕೊಂಡಿದ್ದಾರೆ. ಮತದಾರರ ಪಟ್ಟಿಯಿಂದ ಬಂಗಾಳಿ ಮುಸ್ಲಿಮರ ಹೆಸರುಗಳನ್ನು ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...