Homeಎಕಾನಮಿನರೇಂದ್ರ ಮೋದಿ ಸರ್ಕಾರವನ್ನು ಬಹಿರಂಗವಾಗಿ ಟೀಕಿಸಲು ಸಾಧ್ಯವಾಗುತ್ತಿಲ್ಲ: ಅಮಿತ್‌ ಶಾ ಎದುರೆ ರಾಹುಲ್‌ ಬಜಾಜ್‌ ಹೇಳಿಕೆ

ನರೇಂದ್ರ ಮೋದಿ ಸರ್ಕಾರವನ್ನು ಬಹಿರಂಗವಾಗಿ ಟೀಕಿಸಲು ಸಾಧ್ಯವಾಗುತ್ತಿಲ್ಲ: ಅಮಿತ್‌ ಶಾ ಎದುರೆ ರಾಹುಲ್‌ ಬಜಾಜ್‌ ಹೇಳಿಕೆ

- Advertisement -
- Advertisement -

ಜನರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಾತನಾಡಲು ಭಯಭೀತರಾಗಿದ್ದಾರೆ. ಜನರ ಟೀಕೆಗಳನ್ನು ಸರ್ಕಾರ ಆರೋಗ್ಯಕರ ರೀತಿಯಲ್ಲಿ ಸ್ವೀಕರಿಸುತ್ತದೆ ಎಂಬ ಭರವಸೆಯಿಲ್ಲ ಎಂದು ಕೈಗಾರಿಕೋದ್ಯಮಿ ರಾಹುಲ್‌ ಬಜಾಜ್‌ ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಎಕಾನಾಮಿಕ್ಸ್‌ ಟೈಮ್ಸ್‌ ಪ್ರಶಸ್ತಿ-2019ರ ಪ್ರದಾನ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಗೃಹ ಸಚಿವ ಅಮಿತ್ ಶಾ ವೇದಿಕೆಯಲ್ಲಿರುವಾಗಲೇ ರಾಹುಲ್‌ ಬಜಾಜ್‌ ಮೇಲಿನ ಹೇಳಿಕೆ ನೀಡಿದ್ದಾರೆ.

ಹಿಂದಿನ ಮನಮೋಹನ್‌ ಸಿಂಗ್‌ ಸರ್ಕಾರದ ಅವಧಿಯಲ್ಲಿ ಯಾರನ್ನು ಬೇಕಾದರೂ ಟೀಕಿಸುವ ಸ್ವಾತಂತ್ಯ್ರವಿತ್ತು. ಆದರೆ ಈಗಿನ ಸಂದರ್ಭದಲ್ಲಿ ಬಹಿರಂಗವಾಗಿ ಮೋದಿ ಸರ್ಕಾರವನ್ನು ಟೀಕಿಸುವ ಪರಿಸ್ಥಿತಿಯಿಲ್ಲ ಎಂದಿದ್ದಾರೆ.

ಯುಪಿಎ 2ರ ಅವಧಿಯಲ್ಲಿ ಯಾರನ್ನು ಬೇಕಾದರೂ ನಾವು ಟೀಕಿಸಬಹುದಿತ್ತು. ನೀವು ಒಳ್ಳೆಯ ಕೆಲಸವನ್ನೇ ಮಾಡುತ್ತಿದ್ದೀರಿ ಆದರೆ ಬಹಿರಂಗವಾಗಿ ನಿಮ್ಮನ್ನು ಟೀಕಿಸಲು ಸಾಧ್ಯವಿಲ್ಲ. ನೀವದನ್ನು ಪ್ರಶಂಸಿಸುತ್ತೀರಿ ಎಂಬ ಭರವಸೆಯಿಲ್ಲ. ನಾನು ಹೇಳುತ್ತಿರುವುದು ಬಹುಶಃ ತಪ್ಪಿರಬಹುದು ಆದರೆ ಎಲ್ಲರೂ ರೀತಿ ಭಾವಿಸಿದ್ದಾರೆ ಎಂದು ರಾಹುಲ್‌ ಬಜಾಜ್‌ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಮತ್ತು ಗೃಹ ಸಚಿವ ಅಮಿತ್‌ ಶಾ, ಯಾರೂ ಭಯಪಡುವ ಅಗತ್ಯವಿಲ್ಲ. ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಸಿ ಎಂದಿದ್ದಾರೆ.

ಆನಂತರ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್‌ ವಿಷಯ ಪ್ರಸ್ತಾಪಿಸಿದ ರಾಹುಲ್‌ ಬಜಾಜ್‌, ಸಂಸತ್ತಿನಲ್ಲಿ ಗೋಡ್ಸೆಯನ್ನು ದೇಶಭಕ್ತ ಎಂದ ಪ್ರಗ್ಯಾ ಬಿಜೆಪಿ ಬೆಂಬಲದಿಂದ ಗೆದ್ದು ಬಂದಿದ್ದಾರೆ. ಗಾಂಧಿಯನ್ನು ಗೋಡ್ಸೆ ಕೊಂದಿದ್ದರೆ ಬಗ್ಗೆ ಯಾರಿಗಾದರೂ ಸಂಶಯವಿದೆಯೇ? ನನಗಂತೂ ಗೊತ್ತಿಲ್ಲ ಎಂದಿದ್ದಾರೆ.

ಕಳೆದ ಮೇ ತಿಂಗಳಿನಲ್ಲಿಯೇ ಆಕೆ ಇದೇ ರೀತಿಯಾಗಿ ಗಾಂಧಿ ಕೊಂದ ಗೋಡ್ಸೆಯನ್ನು ದೇಶಭಕ್ತ ಎಂದಿದ್ದರು. ಆಗ ಆಕೆಯನ್ನು ಕ್ಷಮಿಸಲು ಪ್ರಧಾನಿ ನರೇಂದ್ರ ಮೋದಿಯವರು ತುಂಬಾ ಕಷ್ಟವಾಗಿತ್ತು ಎಂದು ಹೇಳಿದ್ದರು. ಆದರೂ ಆಕೆಯನ್ನು ಆನಂತರ ರಕ್ಷಣಾ ಸಲಹಾ ಸಮಿತಿಗೆ  ತೆಗೆದುಕೊಂಡರು ಎಂದು ರಾಹುಲ್‌ ಬಜಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ ಪ್ರಗ್ಯಾ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ಮಹಮೋಹನ್‌ ಸಿಂಗ್‌ರವರು ಆರ್ಥಿಕ ಸ್ಥಿತಿಗತಿಯ ಕುರಿತು ಮಾತನಾಡಿದರೆ ಭಯ ಮತ್ತು ಕಿರುಕುಳ ನೀಡುವ ವಾತವಾರಣ ಸೃಷ್ಠಿಯಾಗಿದೆ ಎಂದು ಹೇಳಿದ ನಂತರ ರಾಹುಲ್‌ ಬಜಾಜ್‌ರವರು ಮಾತನಾಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ಕೃಪೆ: ದಿ ಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...