Homeಚಳವಳಿಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

- Advertisement -
- Advertisement -

2018ರ ಟ್ವೀಟ್‌ ಒಂದಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು, ಅವರನ್ನು ಇಂದು ಸಂಜೆ 6 ಗಂಟೆಯೊಳಗೆ ಬಿಡುಗಡೆ ಮಾಡಲು ಆದೇಶಿಸಿದೆ.

ಜುಬೇರ್ ರವರ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡುವಾಗ ಷರತ್ತುಗಳನ್ನು ವಿಧಿಸಬೇಕೆಂದು ಉತ್ತರ ಪ್ರದೇಶದ ಸರ್ಕಾರಿ ವಕೀಲರಾದ ಗರಿಮ ಪ್ರಸಾದ್ ಮನವಿ ಮಾಡಿದರು. ಆದರೆ ಜಸ್ಟೀಸ್ ಚಂದ್ರಚೂಡ್‌ರವರು ಅದನ್ನು ಸ್ಪಷ್ಟವಾಗಿ ನಿರಾಕರಿಸಿದರು. ಜಾಮೀನು ಅರ್ಜಿಯ ವಿಚಾರಣೆ ಹೀಗಿತ್ತು.

ಯುಪಿ ಸರ್ಕಾರಿ ವಕೀಲ: ಅರ್ಜಿದಾರರು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಬಾರದೆಂದು ಕೋರ್ಟ್ ಈ ಮುಂಚೆ ಹೇಳಿತ್ತು.

ಜಸ್ಟೀಸ್ ಚಂದ್ರಚೂಡ್: ಇದು ವಕೀಲರು ವಾದ ಮಾಡಬಾರದು ಎಂದು ಹೇಳಿದಂತಿದೆ. ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ನಾವು ಹೇಳುವುದು ಹೇಗೆ?

ಯುಪಿ ಸರ್ಕಾರಿ ವಕೀಲ: ಅವರು ಪತ್ರಕರ್ತರಲ್ಲ.

ಜಸ್ಟೀಸ್ ಚಂದ್ರಚೂಡ್: ಅವರು ಮಾಡುವ ಯಾವುದೇ ಟ್ವೀಟ್ ಕಾನೂನಿಗೆ ವಿರುದ್ಧವಾಗಿದ್ದರೆ, ಅದಕ್ಕೆ ಅವರು ಹೊಣೆಯಾಗಿರುತ್ತಾರೆ. ಒಬ್ಬರು ಮಾತನಾಡದಂತೆ ನೀರಿಕ್ಷಣಾ ಆದೇಶ ಹೊರಡಿಸಲು ಸಾಧ್ಯವಿಲ್ಲ.

ಯುಪಿ ಸರ್ಕಾರಿ ವಕೀಲ: ಅವರು ಸಾಕ್ಷಿಗಳನ್ನು ನಾಶಮಾಡಬಾರದೆಂಬ ಷರತ್ತು ವಿಧಿಸಬೇಕು.

ಜಸ್ಟೀಸ್ ಚಂದ್ರಚೂಡ್: ಎಲ್ಲಾ ಸಾಕ್ಷಿಗಳು ಸಾರ್ವಜನಿಕ ಡೊಮೈನ್‌ನಲ್ಲಿವೆ. ಅವರು ಮತ್ತೆ ಟ್ವೀಟ್ ಮಾಡಬಾರದೆಂದು ನಾವು ಹೇಳಲು ಸಾಧ್ಯವಿಲ್ಲ.

ಆನಂತರ ಜಸ್ಟೀಸ್ ಸೂರ್ಯಕಾಂತ್ ಮತ್ತು ಎ.ಎಸ್ ಬೋಪಣ್ಣರವರಿದ್ದ ಪೀಠವು ಜುಬೇರ್‌ರನ್ನು ಸಂಜೆ 6 ಗಂಟೆಯೊಳಗೆ ತಿಹಾರ್ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಅವರ ವಿರುದ್ಧ ದಾಖಲಾಗಿರುವ 7 ಎಫ್‌ಐಆರ್‌ಗಳನ್ನು ಒಂದೇ ಆಗಿ ಜೋಡಿಸಿದ್ದು, ಉತ್ತರ ಪ್ರದೇಶದಿಂದ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದೆ. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ಎಸ್‌ಐಟಿಯನ್ನು ರದ್ದುಗೊಳಿಸಿದೆ. ಮುಂದಕ್ಕೂ ಯಾವುದೇ ಎಫ್‌ಐಆರ್ ದಾಖಲಾದರೂ ಅದನ್ನು ದೆಹಲಿ ಪೊಲೀಸರು ಈಗಿರುವ ಎಫ್‌ಐಆರ್‌ನೊಂದಿಗೆ ಜೋಡಿಸಿ ವಿಚಾರಣೆ ನಡೆಸಬೇಕು, ಇದೇ ಜಾಮೀನನ್ನು ಅನ್ವಯಿಸಬೇಕು ಎಂದು ಪೀಠ ಹೇಳಿದೆ. ಅರ್ಜಿದಾರರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಪಡಿಸಿವಂತೆ ಕೋರಿ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಬಹುದೆಂದು ಸಹ ಹೇಳಿದೆ.

ಇದನ್ನೂ ಓದಿ: ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...