Homeಚಳವಳಿಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

- Advertisement -
- Advertisement -

2018ರ ಟ್ವೀಟ್‌ ಒಂದಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು, ಅವರನ್ನು ಇಂದು ಸಂಜೆ 6 ಗಂಟೆಯೊಳಗೆ ಬಿಡುಗಡೆ ಮಾಡಲು ಆದೇಶಿಸಿದೆ.

ಜುಬೇರ್ ರವರ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡುವಾಗ ಷರತ್ತುಗಳನ್ನು ವಿಧಿಸಬೇಕೆಂದು ಉತ್ತರ ಪ್ರದೇಶದ ಸರ್ಕಾರಿ ವಕೀಲರಾದ ಗರಿಮ ಪ್ರಸಾದ್ ಮನವಿ ಮಾಡಿದರು. ಆದರೆ ಜಸ್ಟೀಸ್ ಚಂದ್ರಚೂಡ್‌ರವರು ಅದನ್ನು ಸ್ಪಷ್ಟವಾಗಿ ನಿರಾಕರಿಸಿದರು. ಜಾಮೀನು ಅರ್ಜಿಯ ವಿಚಾರಣೆ ಹೀಗಿತ್ತು.

ಯುಪಿ ಸರ್ಕಾರಿ ವಕೀಲ: ಅರ್ಜಿದಾರರು ಟ್ವಿಟರ್‌ನಲ್ಲಿ ಪೋಸ್ಟ್ ಹಾಕಬಾರದೆಂದು ಕೋರ್ಟ್ ಈ ಮುಂಚೆ ಹೇಳಿತ್ತು.

ಜಸ್ಟೀಸ್ ಚಂದ್ರಚೂಡ್: ಇದು ವಕೀಲರು ವಾದ ಮಾಡಬಾರದು ಎಂದು ಹೇಳಿದಂತಿದೆ. ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ನಾವು ಹೇಳುವುದು ಹೇಗೆ?

ಯುಪಿ ಸರ್ಕಾರಿ ವಕೀಲ: ಅವರು ಪತ್ರಕರ್ತರಲ್ಲ.

ಜಸ್ಟೀಸ್ ಚಂದ್ರಚೂಡ್: ಅವರು ಮಾಡುವ ಯಾವುದೇ ಟ್ವೀಟ್ ಕಾನೂನಿಗೆ ವಿರುದ್ಧವಾಗಿದ್ದರೆ, ಅದಕ್ಕೆ ಅವರು ಹೊಣೆಯಾಗಿರುತ್ತಾರೆ. ಒಬ್ಬರು ಮಾತನಾಡದಂತೆ ನೀರಿಕ್ಷಣಾ ಆದೇಶ ಹೊರಡಿಸಲು ಸಾಧ್ಯವಿಲ್ಲ.

ಯುಪಿ ಸರ್ಕಾರಿ ವಕೀಲ: ಅವರು ಸಾಕ್ಷಿಗಳನ್ನು ನಾಶಮಾಡಬಾರದೆಂಬ ಷರತ್ತು ವಿಧಿಸಬೇಕು.

ಜಸ್ಟೀಸ್ ಚಂದ್ರಚೂಡ್: ಎಲ್ಲಾ ಸಾಕ್ಷಿಗಳು ಸಾರ್ವಜನಿಕ ಡೊಮೈನ್‌ನಲ್ಲಿವೆ. ಅವರು ಮತ್ತೆ ಟ್ವೀಟ್ ಮಾಡಬಾರದೆಂದು ನಾವು ಹೇಳಲು ಸಾಧ್ಯವಿಲ್ಲ.

ಆನಂತರ ಜಸ್ಟೀಸ್ ಸೂರ್ಯಕಾಂತ್ ಮತ್ತು ಎ.ಎಸ್ ಬೋಪಣ್ಣರವರಿದ್ದ ಪೀಠವು ಜುಬೇರ್‌ರನ್ನು ಸಂಜೆ 6 ಗಂಟೆಯೊಳಗೆ ತಿಹಾರ್ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಅವರ ವಿರುದ್ಧ ದಾಖಲಾಗಿರುವ 7 ಎಫ್‌ಐಆರ್‌ಗಳನ್ನು ಒಂದೇ ಆಗಿ ಜೋಡಿಸಿದ್ದು, ಉತ್ತರ ಪ್ರದೇಶದಿಂದ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದೆ. ಅಲ್ಲದೆ ಉತ್ತರ ಪ್ರದೇಶ ಸರ್ಕಾರ ನೇಮಿಸಿದ್ದ ಎಸ್‌ಐಟಿಯನ್ನು ರದ್ದುಗೊಳಿಸಿದೆ. ಮುಂದಕ್ಕೂ ಯಾವುದೇ ಎಫ್‌ಐಆರ್ ದಾಖಲಾದರೂ ಅದನ್ನು ದೆಹಲಿ ಪೊಲೀಸರು ಈಗಿರುವ ಎಫ್‌ಐಆರ್‌ನೊಂದಿಗೆ ಜೋಡಿಸಿ ವಿಚಾರಣೆ ನಡೆಸಬೇಕು, ಇದೇ ಜಾಮೀನನ್ನು ಅನ್ವಯಿಸಬೇಕು ಎಂದು ಪೀಠ ಹೇಳಿದೆ. ಅರ್ಜಿದಾರರು ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಪಡಿಸಿವಂತೆ ಕೋರಿ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಬಹುದೆಂದು ಸಹ ಹೇಳಿದೆ.

ಇದನ್ನೂ ಓದಿ: ಖ್ಯಾತ ಫ್ಯಾಕ್ಟ್‌ಚೆಕ್ಕರ್‌‌ ಮೊಹಮ್ಮದ್‌ ಜುಬೇ‌ರ್‌ಗೆ ಜಾಮೀನು: ಸಂಜೆ 6 ಗಂಟೆಯೊಳಗೆ ಬಿಡುಗಡೆಗೆ ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...