Homeಮುಖಪುಟರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

- Advertisement -
- Advertisement -

ಕೇಂದ್ರ ಸಚಿವರು ಮತ್ತು ರೈತ ಮುಖಂಡರ ಜತೆಗೆ ಸೋಮವಾರ ನಡೆದ ಸಭೆ ವಿಫಲಾವಾದ ನಂತರವೂ ಕೇಂದ್ರ ಸರ್ಕಾರವು ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಈ ಬೆಳವಣಿಗೆಗಳ ನಡುವೆಯೆ ಪ್ರತಿಭಟನಾ ನಿರತ ರೈತರೊಂದಿಗೆ ಸಂವಾದ ನಡೆಸುವ ಕುರಿತ ತನ್ನ ನಿಲುವನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮಾತನಾಡಿ, ‘ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಾರೆ’ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹುಸಿ ಭರವಸೆಯನ್ನು ಒಪ್ಪದ ರೈತರು, ದೆಹಲಿಗೆ ಹತ್ತಿರದ ರಾಜ್ಯಗಳ ಅನ್ನದಾತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ತಲುಪಿಸಲು ‘ದೆಹಲಿ ಚಲೋ’ ಅಭಿಯಾನವನ್ನು ಆರಂಭಿಸಿದ್ದು, ರಾಷ್ಟ್ರ ರಾಜಧಾನಿ ಸಂಪೂರ್ಣ ಸ್ತಬ್ಧವಾಗಿದೆ.

‘ನಾವು ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಾವು ಯಾವಾಗಲೂ ಮಾತುಕತೆ ಮತ್ತು ಚರ್ಚೆಗಳಿಗೆ ಸಿದ್ಧರಿದ್ದೇವೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡಲು ನಾವು ಸಿದ್ಧರಿದ್ದೇವೆ. ಈ ವಿಷಯ ರಾಜ್ಯ ಸರ್ಕಾರಗಳಿಗೂ ಸಂಬಂಧಿಸಿದ್ದು. ಈ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಇದನ್ನು ಪರಿಹರಿಸುವ ವಿಧಾನವನ್ನು ಕಂಡುಹಿಡಿಯಲು ನಮಗೆ ಸಮಯ ಬೇಕಾಗುತ್ತದೆ’ ಎಂದು ಮುಂಡಾ ಹೇಳಿದರು.

‘ಮಾತುಕತೆಯ ಮೂಲಕ ಮಾತ್ರ ಸಮಸ್ಯೆಗೆ ಪರಿಹಾರವನ್ನು ಸಾಧಿಸಬಹುದು’ ಎಂದು ಸಚಿವರು ಹೇಳುತ್ತಿದ್ದು, ‘ನಾವು ರೈತರೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಅವರಲ್ಲಿ ಒಂದು ವರ್ಗವು ಪರಿಹಾರವನ್ನು ಬಯಸುವುದಿಲ್ಲ’ ಎಂದು ಕೇಂದ್ರ ಕೃಷಿ ಸಚಿವರು ಆರೋಪ ಮಾಡಿದ್ದಾರೆ.

‘ರೈತರೊಂದಿಗೆ ಎರಡು ಸುತ್ತಿನ ಮಾತುಕತೆಗಳು ಅನಿಶ್ಚಿತವಾಗಿವೆ. ಪರಿಹಾರವನ್ನು ತಲುಪಲು ಹೆಚ್ಚಿನ ಚರ್ಚೆ ಅಗತ್ಯ ಮತ್ತು ನಾವು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧ’ ಎಂದು ಹೇಳಿದ್ದಾರೆ.

ಮುಂಡಾ ಅವರು ನಿನ್ನೆ ಚಂಡೀಗಢದಲ್ಲಿ ರೈತ ಮುಖಂಡರನ್ನು ಭೇಟಿಯಾದ ಸರ್ಕಾರದ ನಿಯೋಗದಲ್ಲಿದ್ದರು, ದೆಹಲಿಗೆ ತಮ್ಮ ಮೆರವಣಿಗೆಯನ್ನು ಕೈಬಿಡುವಂತೆ ರೈತರ ಮನವೊಲಿಸಿದರು.

2021 ರಿಂದ ಎರಡನೇ ಸುತ್ತಿನ ಪ್ರತಿಭಟನೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತ ಸದಸ್ಯರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ನವದೆಹಲಿಗೆ ತೆರಳುತ್ತಿದ್ದಾರೆ.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕೆಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ರೈತರಿಗೆ ಪಿಂಚಣಿಯನ್ನೂ ಕೂಡ ಅವರು ಬಯತ್ತಿದ್ದಾರೆ. ಮುಖ್ಯವಾಗಿ, ಲಖಿಂಪುರ ಖೇರಿ ಸಂತ್ರಸ್ತರಿಗೆ “ನ್ಯಾಯ”ಕ್ಕಾಗಿ ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ಪಂಜಾಬ್-ಹರಿಯಾಣ ಗಡಿ ‘ಅಂತಾರಾಷ್ಟ್ರೀಯ ಗಡಿ’ಯಂತಾಗಿದೆ..’: ಕೇಂದ್ರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...