Homeಮುಖಪುಟರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

- Advertisement -
- Advertisement -

ಕೇಂದ್ರ ಸಚಿವರು ಮತ್ತು ರೈತ ಮುಖಂಡರ ಜತೆಗೆ ಸೋಮವಾರ ನಡೆದ ಸಭೆ ವಿಫಲಾವಾದ ನಂತರವೂ ಕೇಂದ್ರ ಸರ್ಕಾರವು ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಈ ಬೆಳವಣಿಗೆಗಳ ನಡುವೆಯೆ ಪ್ರತಿಭಟನಾ ನಿರತ ರೈತರೊಂದಿಗೆ ಸಂವಾದ ನಡೆಸುವ ಕುರಿತ ತನ್ನ ನಿಲುವನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮಾತನಾಡಿ, ‘ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಾರೆ’ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹುಸಿ ಭರವಸೆಯನ್ನು ಒಪ್ಪದ ರೈತರು, ದೆಹಲಿಗೆ ಹತ್ತಿರದ ರಾಜ್ಯಗಳ ಅನ್ನದಾತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ತಲುಪಿಸಲು ‘ದೆಹಲಿ ಚಲೋ’ ಅಭಿಯಾನವನ್ನು ಆರಂಭಿಸಿದ್ದು, ರಾಷ್ಟ್ರ ರಾಜಧಾನಿ ಸಂಪೂರ್ಣ ಸ್ತಬ್ಧವಾಗಿದೆ.

‘ನಾವು ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಾವು ಯಾವಾಗಲೂ ಮಾತುಕತೆ ಮತ್ತು ಚರ್ಚೆಗಳಿಗೆ ಸಿದ್ಧರಿದ್ದೇವೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡಲು ನಾವು ಸಿದ್ಧರಿದ್ದೇವೆ. ಈ ವಿಷಯ ರಾಜ್ಯ ಸರ್ಕಾರಗಳಿಗೂ ಸಂಬಂಧಿಸಿದ್ದು. ಈ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಇದನ್ನು ಪರಿಹರಿಸುವ ವಿಧಾನವನ್ನು ಕಂಡುಹಿಡಿಯಲು ನಮಗೆ ಸಮಯ ಬೇಕಾಗುತ್ತದೆ’ ಎಂದು ಮುಂಡಾ ಹೇಳಿದರು.

‘ಮಾತುಕತೆಯ ಮೂಲಕ ಮಾತ್ರ ಸಮಸ್ಯೆಗೆ ಪರಿಹಾರವನ್ನು ಸಾಧಿಸಬಹುದು’ ಎಂದು ಸಚಿವರು ಹೇಳುತ್ತಿದ್ದು, ‘ನಾವು ರೈತರೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಅವರಲ್ಲಿ ಒಂದು ವರ್ಗವು ಪರಿಹಾರವನ್ನು ಬಯಸುವುದಿಲ್ಲ’ ಎಂದು ಕೇಂದ್ರ ಕೃಷಿ ಸಚಿವರು ಆರೋಪ ಮಾಡಿದ್ದಾರೆ.

‘ರೈತರೊಂದಿಗೆ ಎರಡು ಸುತ್ತಿನ ಮಾತುಕತೆಗಳು ಅನಿಶ್ಚಿತವಾಗಿವೆ. ಪರಿಹಾರವನ್ನು ತಲುಪಲು ಹೆಚ್ಚಿನ ಚರ್ಚೆ ಅಗತ್ಯ ಮತ್ತು ನಾವು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧ’ ಎಂದು ಹೇಳಿದ್ದಾರೆ.

ಮುಂಡಾ ಅವರು ನಿನ್ನೆ ಚಂಡೀಗಢದಲ್ಲಿ ರೈತ ಮುಖಂಡರನ್ನು ಭೇಟಿಯಾದ ಸರ್ಕಾರದ ನಿಯೋಗದಲ್ಲಿದ್ದರು, ದೆಹಲಿಗೆ ತಮ್ಮ ಮೆರವಣಿಗೆಯನ್ನು ಕೈಬಿಡುವಂತೆ ರೈತರ ಮನವೊಲಿಸಿದರು.

2021 ರಿಂದ ಎರಡನೇ ಸುತ್ತಿನ ಪ್ರತಿಭಟನೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತ ಸದಸ್ಯರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ನವದೆಹಲಿಗೆ ತೆರಳುತ್ತಿದ್ದಾರೆ.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕೆಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ರೈತರಿಗೆ ಪಿಂಚಣಿಯನ್ನೂ ಕೂಡ ಅವರು ಬಯತ್ತಿದ್ದಾರೆ. ಮುಖ್ಯವಾಗಿ, ಲಖಿಂಪುರ ಖೇರಿ ಸಂತ್ರಸ್ತರಿಗೆ “ನ್ಯಾಯ”ಕ್ಕಾಗಿ ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ಪಂಜಾಬ್-ಹರಿಯಾಣ ಗಡಿ ‘ಅಂತಾರಾಷ್ಟ್ರೀಯ ಗಡಿ’ಯಂತಾಗಿದೆ..’: ಕೇಂದ್ರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...