Homeಮುಖಪುಟರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ಇದೆ, ಚರ್ಚೆಗೆ ಸಿದ್ಧರಿದ್ದೇವೆ: ಸಚಿವ ಅರ್ಜುನ್ ಮುಂಡಾ

- Advertisement -
- Advertisement -

ಕೇಂದ್ರ ಸಚಿವರು ಮತ್ತು ರೈತ ಮುಖಂಡರ ಜತೆಗೆ ಸೋಮವಾರ ನಡೆದ ಸಭೆ ವಿಫಲಾವಾದ ನಂತರವೂ ಕೇಂದ್ರ ಸರ್ಕಾರವು ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಈ ಬೆಳವಣಿಗೆಗಳ ನಡುವೆಯೆ ಪ್ರತಿಭಟನಾ ನಿರತ ರೈತರೊಂದಿಗೆ ಸಂವಾದ ನಡೆಸುವ ಕುರಿತ ತನ್ನ ನಿಲುವನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮಾತನಾಡಿ, ‘ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಾರೆ’ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹುಸಿ ಭರವಸೆಯನ್ನು ಒಪ್ಪದ ರೈತರು, ದೆಹಲಿಗೆ ಹತ್ತಿರದ ರಾಜ್ಯಗಳ ಅನ್ನದಾತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ತಲುಪಿಸಲು ‘ದೆಹಲಿ ಚಲೋ’ ಅಭಿಯಾನವನ್ನು ಆರಂಭಿಸಿದ್ದು, ರಾಷ್ಟ್ರ ರಾಜಧಾನಿ ಸಂಪೂರ್ಣ ಸ್ತಬ್ಧವಾಗಿದೆ.

‘ನಾವು ರೈತರ ಹಿತಾಸಕ್ತಿಗಳ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಾವು ಯಾವಾಗಲೂ ಮಾತುಕತೆ ಮತ್ತು ಚರ್ಚೆಗಳಿಗೆ ಸಿದ್ಧರಿದ್ದೇವೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿರುವ ಎಲ್ಲವನ್ನೂ ಮಾಡಲು ನಾವು ಸಿದ್ಧರಿದ್ದೇವೆ. ಈ ವಿಷಯ ರಾಜ್ಯ ಸರ್ಕಾರಗಳಿಗೂ ಸಂಬಂಧಿಸಿದ್ದು. ಈ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಇದನ್ನು ಪರಿಹರಿಸುವ ವಿಧಾನವನ್ನು ಕಂಡುಹಿಡಿಯಲು ನಮಗೆ ಸಮಯ ಬೇಕಾಗುತ್ತದೆ’ ಎಂದು ಮುಂಡಾ ಹೇಳಿದರು.

‘ಮಾತುಕತೆಯ ಮೂಲಕ ಮಾತ್ರ ಸಮಸ್ಯೆಗೆ ಪರಿಹಾರವನ್ನು ಸಾಧಿಸಬಹುದು’ ಎಂದು ಸಚಿವರು ಹೇಳುತ್ತಿದ್ದು, ‘ನಾವು ರೈತರೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಅವರಲ್ಲಿ ಒಂದು ವರ್ಗವು ಪರಿಹಾರವನ್ನು ಬಯಸುವುದಿಲ್ಲ’ ಎಂದು ಕೇಂದ್ರ ಕೃಷಿ ಸಚಿವರು ಆರೋಪ ಮಾಡಿದ್ದಾರೆ.

‘ರೈತರೊಂದಿಗೆ ಎರಡು ಸುತ್ತಿನ ಮಾತುಕತೆಗಳು ಅನಿಶ್ಚಿತವಾಗಿವೆ. ಪರಿಹಾರವನ್ನು ತಲುಪಲು ಹೆಚ್ಚಿನ ಚರ್ಚೆ ಅಗತ್ಯ ಮತ್ತು ನಾವು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧ’ ಎಂದು ಹೇಳಿದ್ದಾರೆ.

ಮುಂಡಾ ಅವರು ನಿನ್ನೆ ಚಂಡೀಗಢದಲ್ಲಿ ರೈತ ಮುಖಂಡರನ್ನು ಭೇಟಿಯಾದ ಸರ್ಕಾರದ ನಿಯೋಗದಲ್ಲಿದ್ದರು, ದೆಹಲಿಗೆ ತಮ್ಮ ಮೆರವಣಿಗೆಯನ್ನು ಕೈಬಿಡುವಂತೆ ರೈತರ ಮನವೊಲಿಸಿದರು.

2021 ರಿಂದ ಎರಡನೇ ಸುತ್ತಿನ ಪ್ರತಿಭಟನೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತ ಸದಸ್ಯರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲು ನವದೆಹಲಿಗೆ ತೆರಳುತ್ತಿದ್ದಾರೆ.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಬೇಕೆಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಮತ್ತು ರೈತರಿಗೆ ಪಿಂಚಣಿಯನ್ನೂ ಕೂಡ ಅವರು ಬಯತ್ತಿದ್ದಾರೆ. ಮುಖ್ಯವಾಗಿ, ಲಖಿಂಪುರ ಖೇರಿ ಸಂತ್ರಸ್ತರಿಗೆ “ನ್ಯಾಯ”ಕ್ಕಾಗಿ ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ಪಂಜಾಬ್-ಹರಿಯಾಣ ಗಡಿ ‘ಅಂತಾರಾಷ್ಟ್ರೀಯ ಗಡಿ’ಯಂತಾಗಿದೆ..’: ಕೇಂದ್ರದ ವಿರುದ್ಧ ರೈತರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...