Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...