Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...