Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...