Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...