Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...