Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...