Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...