Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...