Homeಕರ್ನಾಟಕಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವು ಸುಮ್ಮನೇ ಕೂರಲು ಸಾಧ್ಯವಿಲ್ಲ

- Advertisement -
- Advertisement -

ಕಳೆದ ಆರು ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಮಹಿಷಾ ದಸರಾವನ್ನು ಈ ಬಾರಿ ಅಕ್ಟೋಬರ್‌ 15 ರಂದು ಮಾಡುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್. ನಾಗೇಂದ್ರ ಅವರಿಗೆ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ಮೈಸೂರಲ್ಲಿ ನಡೆದ ಪ್ರತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಹೋರಾಟಗಾರರು ಸವಾಲು ಹಾಕಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಹೇಶ್ ಚಂದ್ರಗುರು “ಮೈಸೂರು ದಸರಾಗಿಂತ ಆಚರಣೆ ಮಾಡಬೇಕಾಗಿರುವುದು ಮಹಿಷಾ ದಸರಾ. ಇದನ್ನು ವಿರೋಧಿಸುವವರು ಕಂತ್ರಿಗಳು, ಸಂವಿಧಾನ ವಿರೋಧಿಗಳು, ಮೂಲ ನಿವಾಸಿಗಳ ವಿರೋಧಿಗಳು ಹಾಗೂ ಪ್ರಜಾಪ್ರಭುತ್ವ ವಿರೋಧಿಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮಹಿಷಾ ದಸರಾ,’ ಮರೆತ ಇತಿಹಾಸದ ಮರುಶೋಧ: ಡಾ.ಎಚ್.ಡಿ ಉಮಾಶಂಕರ್‌

ನಾವು ಎಲ್ಲರೂ ಮರೆತಿರುವ ಚರಿತ್ರೆಯನ್ನು ನೆನಪಿಸಿಕೊಳ್ಳಲು ಈ ಮಹಿಷ ದಸರಾ ಆಚರಿಸುತ್ತಿದ್ದೇವೆ. ನಾವು ದೇಶದ ಮೂಲ ನಿವಾಸಿಗಳು. ಇಂದು ನಮ್ಮನ್ನು ಆಳುತ್ತಿರುವವರು ಮೂಲ ನಿವಾಸಿಗಳ ವಿರೋಧಿಗಳು. ಸರ್ಕಾರ ಮಹಿಷ ದಸರಾ ಆಚರಣೆಗೆ ಅಡ್ಡಿ ಮಾಡಬಾರದು ಎಂದು ಕೈ ಮುಗಿದು ಬೇಡುವುದಿಲ್ಲ, ಆದರೆ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಪ್ರೊ. ಮಹೇಶ್ ಚಂದ್ರಗುರು ಹೇಳಿದ್ದಾರೆ.

ನಿಜದನಿ ದಿನಪತ್ರಿಕೆಯ ಸಂಪಾದಕ ಹಾಗೂ ಕರ್ನಾಟಕ ದಲಿತ ವೆಲ್ಫೇರ್‌ ಅಧ್ಯಕ್ಷರೂ ಆಗಿರುವ ಶಾಂತರಾಜು ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ನಾವು ಮಹಿಷಾ ದಸರವನ್ನು 2016 ರಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ, ಯಾವುದೆ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಸಂಸದ ಪ್ರತಾಪ್ ಸಿಂಹ ಅವರಿಂದಾಗಿ ದಿಡೀರನೆ ಗೊಂದಲ ಉಂಟಾಯಿತು. ಈ ಗೊಂದಲದ ನಡುವೆಯು ನಾವು ಆಚರಣೆ ಮಾಡಿದ್ದೇವೆ. ಅದಲ್ಲದೆ ಈ ಗೊಂದಲದ ನಂತರ ತೆಗೆದುಕೊಂಡ ತೀರ್ಮಾನದಂತೆ ಪ್ರತಿ ತಿಂಗಳು ಅಮವಾಸ್ಯೆಯ ಹಿಂದಿನ ದಿನ ಮಹಿಷಾನಿಗೆ ಪುಷ್ಪಾರ್ಚಣೆ ಮಾಡಿಕೊಂಡು ಬರುತ್ತಿದ್ದೇವೆ” ಎಂದು ಹೇಳಿದರು.

“ಮಹಿಷಾ ಸಾಮಾಜಿಕವಾಗಿ ಸಮಾನತೆಗೋಸ್ಕರ ಹೋರಾಟ ಮಾಡಿದ ವ್ಯಕ್ತಿಯಾಗಿದ್ದಾನೆ. ಆದ್ದರಿಂದಲೇ ಮೈಸೂರಿಗೆ ಮಹಿಷಾ ಮಂಡಲ, ಮಹಿಷಾಪುರ ಮುಂತಾದ ಹೆಸರು ಬಂದಿದೆ. ಮನುವಾದಿಗಳು ಸಾಮಾಜಿಕ ಸಮಾನತೆಗೆ ಹೋರಾಟ ಮಾಡಿದವರನ್ನು ರಾಕ್ಷಸರು ಎಂದು ಕರೆಯುತ್ತಾರೆ. ಇವತ್ತಿಗೂ ತಮಿಳುನಾಡಿನಿಂದ ಪ್ರತಿವರ್ಷ ಒಂದು ಗುಂಪು ಬಂದು ಮಹಿಷಾನಿಗೆ ಪೂಜೆ ಮಾಡಿ ಊಟ ಮಾಡಿಕೊಂಡು ಹೋಗುತ್ತಾರೆ, ಇವೆಲ್ಲವು ಗೊತ್ತಿರುವಂತಹ ವಿಚಾರ. ಪ್ರತಿ ವರ್ಷದಂತೆ ನಾವು ಈ ಬಾರಿಯು ಅಕ್ಟೋಬರ್ 15 ರಂದು ಮಹಿಷಾ ದಸರಾ ಆಚರಿಸುತ್ತೇವೆ” ಎಂದು ಶಾಂತರಾಜು ಹೇಳಿದ್ದಾರೆ.


ಇದನ್ನೂ ಓದಿ: ಮೂಲನಿವಾಸಿಗಳ ’ಮಹಿಷ ದಸರಾ’ದ ಇತಿಹಾಸ- ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...