Homeಮುಖಪುಟಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

ಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

- Advertisement -
- Advertisement -

ಲಾಕ್‌ಡೌನ್‌ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಿದ ಅಥವಾ ಪೂರ್ಣ ಸಂಬಳ ನೀಡದ ಉದ್ಯೋಗದಾತ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳಿಗೆ ಪೂರ್ಣ ವೇತನವನ್ನು ನೀಡುವಂತೆ ಮತ್ತು ಕೆಲಸದಿಂದ ತೆಗೆಯಬಾರದೆಂದು ಉದ್ಯೋಗದಾತರಿಗೆ ಕೇಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರದ ಮಾರ್ಚ್ 29 ರಂದು ಆದೇಶಿಸಿತ್ತು. ಕೇಂದ್ರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಮೇಲಿನ ವಿಚಾರಣೆ ನಡೆಸಿದ ಸುಪ್ರೀಂ ತೀರ್ಪನ್ನು ಜೂನ್ 12 ಕ್ಕೆ ಕಾಯ್ದಿರಿಸಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿನ 54 ದಿನಗಳವರೆಗೆ ಸಂಬಳಕ್ಕಾಗಿ ಏನು ಮಾಡಬೇಕೆಂಬುದನ್ನು ಪ್ರಕಟಿಸಲು ಉದ್ಯೋಗದಾತರು ಮತ್ತು ಕಾರ್ಮಿಕರ ನಡುವೆ ಕೆಲವು ಮಾತುಕತೆಗಳು ನಡೆಯಬೇಕಿದೆ ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವೇತನದ ಬಗ್ಗೆ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ‘ಸಂಬಳ ಪಾವತಿಸಲು ಅಸಮರ್ಥತೆ ಹೊಂದಿರುವ ಉದ್ಯೋಗದಾತರು ತಮ್ಮ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದಲ್ಲಿ ಒದಗಿಸುವಂತೆ ನಿರ್ದೇಶಿಸಬೇಕು’ ಎಂದು ಕೇಳಿದೆ.

ಸರ್ಕಾರವು “ನೀಡಲಾಗಿರುವ ಅಧಿಸೂಚನೆಗಳು ಕಾರ್ಮಿಕರ ಜೀವನದಲ್ಲಿ ಮುಖ್ಯ ಪಾತ್ರವಹಿಸಲಿದೆ. ಏಕೆಂದರೆ, ದುಡಿಮೆಯಿಲ್ಲದೆ ಕಾರ್ಮಿಕರು ಜೀವನ ನಿರ್ವಹಿಸುವುದು ಕಷ್ಟವಾಗುತ್ತದೆ.’ ಹಾಗಾಗಿ ಕಾರ್ಮಿಕರ ಸಂಕಷ್ಟಗಳನ್ನು ತಗ್ಗಿಸಲು ಇದು ನೆರವಾಗುತ್ತದೆ. ನ್ಯಾಯದ ಹಿತದೃಷ್ಟಿಯಿಂದ ಅಥವಾ ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಕಡೆಗಣಿಸಲು ಆಗುವುದಿಲ್ಲ” ಎಂದು ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಹೇಳಿದೆ.

ಈ ಸಂದರ್ಭದಲ್ಲಿ, ‘ಈ ವಿಷಯದ ಬಗ್ಗೆ ಅರ್ಹತೆಗಳ ಮೇಲೆ ತೀರ್ಪು ನೀಡಲು ಕೋರ್ಟ್‌ ಒಲವು ತೋರಬೇಕು, ಅರ್ಜಿದಾರರು(ಉದ್ಯೋಗದಾತರು) ವೇತನವನ್ನು ಪಾವತಿಸಲು ಅಸಮರ್ಥರಾಗಿದ್ದಾರೆ ಎಂಬುದಕ್ಕೆ ಪುರಾವೆ ನೀಡಲು ನಿರ್ದೇಶಿಸಬೇಕು. ಮಾರ್ಚ್ 29, 2020 ರ ಆದೇಶದ ಪ್ರಕಾರ ಅವರ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದ ಮುಂದಿಡಬೇಕು” ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಹ್ಯಾಂಡ್ ಟೂಲ್ಸ್ ತಯಾರಕರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್, ಎಸ್.ಕೆ.ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಗೃಹ ಸಚಿವಾಲಯದ (ಎಂಎಚ್‌ಎ) ಮಾರ್ಚ್ 29ರ ಸುತ್ತೋಲೆಯು ಸರ್ವಭಕ್ಷಕ ಆದೇಶವಾಗಿದೆ ಮತ್ತು ಬೃಹತ್‌ ಪ್ರಶ್ನೆಗಳನ್ನು ಒಳಗೊಂಡಿದ್ದು, ಆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.

ಮೇ 15 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ, ಕಂಪೆನಿಗಳು ಮತ್ತು ಉದ್ಯೋಗದಾತರು ರಾಷ್ಟ್ರೀಯ ಲಾಕ್‌ಡೌನ್ ಅವಧಿಯಲ್ಲಿ ನೌಕರರಿಗೆ ಪೂರ್ಣ ವೇತನವನ್ನು ನೀಡುವ ಅಧಿಕೃತ ನಿರ್ದೇಶನವನ್ನು ಉಲ್ಲಂಘಿಸಿರುವವ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸರ್ಕಾರವನ್ನು ನಿರ್ಬಂಧಿಸಿತ್ತು.

ಅಲ್ಲದೆ, ನ್ಯಾಯಮೂರ್ತಿ ಕೌಲ್ ಅವರು ಲಾಭಗಳಿಸದ ಅಥವಾ ಕೆಲಸವನ್ನು ಸ್ಥಗಿತಗೊಳಿಸಿರುವ ಸಣ್ಣ ಕಂಪನಿಗಳು ಇರಬಹುದು. ಅಂತಹ ಕಂಪನಿಗಳು ವೇತನವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಸಹಾಯ ಹಸ್ತ ಚಾಚದ ಹೊರತು ಈ ಘಟಕಗಳು ತಮ್ಮ ಕಾರ್ಮಿಕರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...