Homeಮುಖಪುಟಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

ಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

- Advertisement -
- Advertisement -

ಲಾಕ್‌ಡೌನ್‌ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಿದ ಅಥವಾ ಪೂರ್ಣ ಸಂಬಳ ನೀಡದ ಉದ್ಯೋಗದಾತ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳಿಗೆ ಪೂರ್ಣ ವೇತನವನ್ನು ನೀಡುವಂತೆ ಮತ್ತು ಕೆಲಸದಿಂದ ತೆಗೆಯಬಾರದೆಂದು ಉದ್ಯೋಗದಾತರಿಗೆ ಕೇಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರದ ಮಾರ್ಚ್ 29 ರಂದು ಆದೇಶಿಸಿತ್ತು. ಕೇಂದ್ರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಮೇಲಿನ ವಿಚಾರಣೆ ನಡೆಸಿದ ಸುಪ್ರೀಂ ತೀರ್ಪನ್ನು ಜೂನ್ 12 ಕ್ಕೆ ಕಾಯ್ದಿರಿಸಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿನ 54 ದಿನಗಳವರೆಗೆ ಸಂಬಳಕ್ಕಾಗಿ ಏನು ಮಾಡಬೇಕೆಂಬುದನ್ನು ಪ್ರಕಟಿಸಲು ಉದ್ಯೋಗದಾತರು ಮತ್ತು ಕಾರ್ಮಿಕರ ನಡುವೆ ಕೆಲವು ಮಾತುಕತೆಗಳು ನಡೆಯಬೇಕಿದೆ ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವೇತನದ ಬಗ್ಗೆ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ‘ಸಂಬಳ ಪಾವತಿಸಲು ಅಸಮರ್ಥತೆ ಹೊಂದಿರುವ ಉದ್ಯೋಗದಾತರು ತಮ್ಮ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದಲ್ಲಿ ಒದಗಿಸುವಂತೆ ನಿರ್ದೇಶಿಸಬೇಕು’ ಎಂದು ಕೇಳಿದೆ.

ಸರ್ಕಾರವು “ನೀಡಲಾಗಿರುವ ಅಧಿಸೂಚನೆಗಳು ಕಾರ್ಮಿಕರ ಜೀವನದಲ್ಲಿ ಮುಖ್ಯ ಪಾತ್ರವಹಿಸಲಿದೆ. ಏಕೆಂದರೆ, ದುಡಿಮೆಯಿಲ್ಲದೆ ಕಾರ್ಮಿಕರು ಜೀವನ ನಿರ್ವಹಿಸುವುದು ಕಷ್ಟವಾಗುತ್ತದೆ.’ ಹಾಗಾಗಿ ಕಾರ್ಮಿಕರ ಸಂಕಷ್ಟಗಳನ್ನು ತಗ್ಗಿಸಲು ಇದು ನೆರವಾಗುತ್ತದೆ. ನ್ಯಾಯದ ಹಿತದೃಷ್ಟಿಯಿಂದ ಅಥವಾ ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಕಡೆಗಣಿಸಲು ಆಗುವುದಿಲ್ಲ” ಎಂದು ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಹೇಳಿದೆ.

ಈ ಸಂದರ್ಭದಲ್ಲಿ, ‘ಈ ವಿಷಯದ ಬಗ್ಗೆ ಅರ್ಹತೆಗಳ ಮೇಲೆ ತೀರ್ಪು ನೀಡಲು ಕೋರ್ಟ್‌ ಒಲವು ತೋರಬೇಕು, ಅರ್ಜಿದಾರರು(ಉದ್ಯೋಗದಾತರು) ವೇತನವನ್ನು ಪಾವತಿಸಲು ಅಸಮರ್ಥರಾಗಿದ್ದಾರೆ ಎಂಬುದಕ್ಕೆ ಪುರಾವೆ ನೀಡಲು ನಿರ್ದೇಶಿಸಬೇಕು. ಮಾರ್ಚ್ 29, 2020 ರ ಆದೇಶದ ಪ್ರಕಾರ ಅವರ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದ ಮುಂದಿಡಬೇಕು” ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಹ್ಯಾಂಡ್ ಟೂಲ್ಸ್ ತಯಾರಕರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್, ಎಸ್.ಕೆ.ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಗೃಹ ಸಚಿವಾಲಯದ (ಎಂಎಚ್‌ಎ) ಮಾರ್ಚ್ 29ರ ಸುತ್ತೋಲೆಯು ಸರ್ವಭಕ್ಷಕ ಆದೇಶವಾಗಿದೆ ಮತ್ತು ಬೃಹತ್‌ ಪ್ರಶ್ನೆಗಳನ್ನು ಒಳಗೊಂಡಿದ್ದು, ಆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.

ಮೇ 15 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ, ಕಂಪೆನಿಗಳು ಮತ್ತು ಉದ್ಯೋಗದಾತರು ರಾಷ್ಟ್ರೀಯ ಲಾಕ್‌ಡೌನ್ ಅವಧಿಯಲ್ಲಿ ನೌಕರರಿಗೆ ಪೂರ್ಣ ವೇತನವನ್ನು ನೀಡುವ ಅಧಿಕೃತ ನಿರ್ದೇಶನವನ್ನು ಉಲ್ಲಂಘಿಸಿರುವವ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸರ್ಕಾರವನ್ನು ನಿರ್ಬಂಧಿಸಿತ್ತು.

ಅಲ್ಲದೆ, ನ್ಯಾಯಮೂರ್ತಿ ಕೌಲ್ ಅವರು ಲಾಭಗಳಿಸದ ಅಥವಾ ಕೆಲಸವನ್ನು ಸ್ಥಗಿತಗೊಳಿಸಿರುವ ಸಣ್ಣ ಕಂಪನಿಗಳು ಇರಬಹುದು. ಅಂತಹ ಕಂಪನಿಗಳು ವೇತನವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಸಹಾಯ ಹಸ್ತ ಚಾಚದ ಹೊರತು ಈ ಘಟಕಗಳು ತಮ್ಮ ಕಾರ್ಮಿಕರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...