Homeಮುಖಪುಟಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

ಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

- Advertisement -
- Advertisement -

ಲಾಕ್‌ಡೌನ್‌ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಿದ ಅಥವಾ ಪೂರ್ಣ ಸಂಬಳ ನೀಡದ ಉದ್ಯೋಗದಾತ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳಿಗೆ ಪೂರ್ಣ ವೇತನವನ್ನು ನೀಡುವಂತೆ ಮತ್ತು ಕೆಲಸದಿಂದ ತೆಗೆಯಬಾರದೆಂದು ಉದ್ಯೋಗದಾತರಿಗೆ ಕೇಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರದ ಮಾರ್ಚ್ 29 ರಂದು ಆದೇಶಿಸಿತ್ತು. ಕೇಂದ್ರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಮೇಲಿನ ವಿಚಾರಣೆ ನಡೆಸಿದ ಸುಪ್ರೀಂ ತೀರ್ಪನ್ನು ಜೂನ್ 12 ಕ್ಕೆ ಕಾಯ್ದಿರಿಸಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿನ 54 ದಿನಗಳವರೆಗೆ ಸಂಬಳಕ್ಕಾಗಿ ಏನು ಮಾಡಬೇಕೆಂಬುದನ್ನು ಪ್ರಕಟಿಸಲು ಉದ್ಯೋಗದಾತರು ಮತ್ತು ಕಾರ್ಮಿಕರ ನಡುವೆ ಕೆಲವು ಮಾತುಕತೆಗಳು ನಡೆಯಬೇಕಿದೆ ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವೇತನದ ಬಗ್ಗೆ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ‘ಸಂಬಳ ಪಾವತಿಸಲು ಅಸಮರ್ಥತೆ ಹೊಂದಿರುವ ಉದ್ಯೋಗದಾತರು ತಮ್ಮ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದಲ್ಲಿ ಒದಗಿಸುವಂತೆ ನಿರ್ದೇಶಿಸಬೇಕು’ ಎಂದು ಕೇಳಿದೆ.

ಸರ್ಕಾರವು “ನೀಡಲಾಗಿರುವ ಅಧಿಸೂಚನೆಗಳು ಕಾರ್ಮಿಕರ ಜೀವನದಲ್ಲಿ ಮುಖ್ಯ ಪಾತ್ರವಹಿಸಲಿದೆ. ಏಕೆಂದರೆ, ದುಡಿಮೆಯಿಲ್ಲದೆ ಕಾರ್ಮಿಕರು ಜೀವನ ನಿರ್ವಹಿಸುವುದು ಕಷ್ಟವಾಗುತ್ತದೆ.’ ಹಾಗಾಗಿ ಕಾರ್ಮಿಕರ ಸಂಕಷ್ಟಗಳನ್ನು ತಗ್ಗಿಸಲು ಇದು ನೆರವಾಗುತ್ತದೆ. ನ್ಯಾಯದ ಹಿತದೃಷ್ಟಿಯಿಂದ ಅಥವಾ ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಕಡೆಗಣಿಸಲು ಆಗುವುದಿಲ್ಲ” ಎಂದು ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಹೇಳಿದೆ.

ಈ ಸಂದರ್ಭದಲ್ಲಿ, ‘ಈ ವಿಷಯದ ಬಗ್ಗೆ ಅರ್ಹತೆಗಳ ಮೇಲೆ ತೀರ್ಪು ನೀಡಲು ಕೋರ್ಟ್‌ ಒಲವು ತೋರಬೇಕು, ಅರ್ಜಿದಾರರು(ಉದ್ಯೋಗದಾತರು) ವೇತನವನ್ನು ಪಾವತಿಸಲು ಅಸಮರ್ಥರಾಗಿದ್ದಾರೆ ಎಂಬುದಕ್ಕೆ ಪುರಾವೆ ನೀಡಲು ನಿರ್ದೇಶಿಸಬೇಕು. ಮಾರ್ಚ್ 29, 2020 ರ ಆದೇಶದ ಪ್ರಕಾರ ಅವರ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದ ಮುಂದಿಡಬೇಕು” ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಹ್ಯಾಂಡ್ ಟೂಲ್ಸ್ ತಯಾರಕರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್, ಎಸ್.ಕೆ.ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಗೃಹ ಸಚಿವಾಲಯದ (ಎಂಎಚ್‌ಎ) ಮಾರ್ಚ್ 29ರ ಸುತ್ತೋಲೆಯು ಸರ್ವಭಕ್ಷಕ ಆದೇಶವಾಗಿದೆ ಮತ್ತು ಬೃಹತ್‌ ಪ್ರಶ್ನೆಗಳನ್ನು ಒಳಗೊಂಡಿದ್ದು, ಆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.

ಮೇ 15 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ, ಕಂಪೆನಿಗಳು ಮತ್ತು ಉದ್ಯೋಗದಾತರು ರಾಷ್ಟ್ರೀಯ ಲಾಕ್‌ಡೌನ್ ಅವಧಿಯಲ್ಲಿ ನೌಕರರಿಗೆ ಪೂರ್ಣ ವೇತನವನ್ನು ನೀಡುವ ಅಧಿಕೃತ ನಿರ್ದೇಶನವನ್ನು ಉಲ್ಲಂಘಿಸಿರುವವ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸರ್ಕಾರವನ್ನು ನಿರ್ಬಂಧಿಸಿತ್ತು.

ಅಲ್ಲದೆ, ನ್ಯಾಯಮೂರ್ತಿ ಕೌಲ್ ಅವರು ಲಾಭಗಳಿಸದ ಅಥವಾ ಕೆಲಸವನ್ನು ಸ್ಥಗಿತಗೊಳಿಸಿರುವ ಸಣ್ಣ ಕಂಪನಿಗಳು ಇರಬಹುದು. ಅಂತಹ ಕಂಪನಿಗಳು ವೇತನವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಸಹಾಯ ಹಸ್ತ ಚಾಚದ ಹೊರತು ಈ ಘಟಕಗಳು ತಮ್ಮ ಕಾರ್ಮಿಕರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...