Homeಕರ್ನಾಟಕಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

- Advertisement -
- Advertisement -

“ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯ ಮಾಡುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ’ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನನ್ನ ಅಧ್ಯಕ್ಷತೆಯಲ್ಲೇ ಆಗಿದೆ. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲೇ ಮಂಡಿಸುವುದಾಗಿ ಭರವಸೆ ಕೊಟ್ಟಿದ್ದೇವೆ. ನಾನು ಹಾಗೂ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ.ತಿಮ್ಮಾಪೂರ್‌ ಅವರು ಮುಖ್ಯಮಂತ್ರಿಯವರಲ್ಲಿ ಒತ್ತಾಯ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಬೇಕು ಅಂತ ಹೇಳುತ್ತೇವೆ. ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ನಾವು ಮಾತಾಡಿಲ್ಲ ಅಂದರೆ ಅಲ್ಲಿ ನಾವು ಯಾಕಿರಬೇಕು?” ಎಂದು ಪ್ರಶ್ನಿಸಿದ್ದಾರೆ.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, “ನಾನು ಮುಖ್ಯಮಂತ್ರಿ ಯಾಕೆ ಆಗಬಾರದು?” ಎಂದು ಕೇಳಿದ್ದಾರೆ.

“ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ” ಎಂದಿದ್ದಾರೆ.

ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು. ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದು ಪರಮೇಶ್ವರ್‌ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದಿರುವ ಅವರು​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ಹೇಳಿದ್ದಾರೆ.

ನಮ್ಮನ್ನು ಒಡೆದು ಆಳುವ ನೀತಿ ಒಪ್ಪುವುದು ಬೇಡ ಎಂದು ನಾವು ಇಬ್ಬರೂ ನಿರ್ಧಾರ ಮಾಡಿದೆವು. ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ತೆಗೆದುಕೊಂಡೆವು. ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ನಡೆಸಿದೆವು. ನಾವೆಲ್ಲರೂ ಐಕ್ಯತೆಯಿಂದ ಇರಬೇಕು ಎಂದು ಸಂದೇಶ ಹೋಯಿತು, ಆ ಸಂದೇಶ ಆದಮೇಲೆ ಎಸ್‌ಸಿ ಎಸ್ಟಿ ಒಂದಾಗಿದ್ದಾರೆ ಅಂತಾ ಮಾತಾಡೋಕೆ ಶುರು ಮಾಡಿದರು. ನಮ್ಮಲ್ಲಿ ಎಡ – ಬಲ ಇರಬಾರದು ಅನ್ನೋ ಪಾತ್ರದಲ್ಲಿ ಮುನಿಯಪ್ಪ ಪ್ರಮುಖರಾಗಿದ್ದಾರೆ ಎಂದು ಹೊಗಳಿದ್ದಾರೆ.

2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಸೇರಿದಂತೆ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...