Homeಕರ್ನಾಟಕಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

- Advertisement -
- Advertisement -

“ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯ ಮಾಡುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ’ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನನ್ನ ಅಧ್ಯಕ್ಷತೆಯಲ್ಲೇ ಆಗಿದೆ. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲೇ ಮಂಡಿಸುವುದಾಗಿ ಭರವಸೆ ಕೊಟ್ಟಿದ್ದೇವೆ. ನಾನು ಹಾಗೂ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ.ತಿಮ್ಮಾಪೂರ್‌ ಅವರು ಮುಖ್ಯಮಂತ್ರಿಯವರಲ್ಲಿ ಒತ್ತಾಯ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಬೇಕು ಅಂತ ಹೇಳುತ್ತೇವೆ. ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ನಾವು ಮಾತಾಡಿಲ್ಲ ಅಂದರೆ ಅಲ್ಲಿ ನಾವು ಯಾಕಿರಬೇಕು?” ಎಂದು ಪ್ರಶ್ನಿಸಿದ್ದಾರೆ.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, “ನಾನು ಮುಖ್ಯಮಂತ್ರಿ ಯಾಕೆ ಆಗಬಾರದು?” ಎಂದು ಕೇಳಿದ್ದಾರೆ.

“ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ” ಎಂದಿದ್ದಾರೆ.

ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು. ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದು ಪರಮೇಶ್ವರ್‌ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದಿರುವ ಅವರು​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ಹೇಳಿದ್ದಾರೆ.

ನಮ್ಮನ್ನು ಒಡೆದು ಆಳುವ ನೀತಿ ಒಪ್ಪುವುದು ಬೇಡ ಎಂದು ನಾವು ಇಬ್ಬರೂ ನಿರ್ಧಾರ ಮಾಡಿದೆವು. ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ತೆಗೆದುಕೊಂಡೆವು. ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ನಡೆಸಿದೆವು. ನಾವೆಲ್ಲರೂ ಐಕ್ಯತೆಯಿಂದ ಇರಬೇಕು ಎಂದು ಸಂದೇಶ ಹೋಯಿತು, ಆ ಸಂದೇಶ ಆದಮೇಲೆ ಎಸ್‌ಸಿ ಎಸ್ಟಿ ಒಂದಾಗಿದ್ದಾರೆ ಅಂತಾ ಮಾತಾಡೋಕೆ ಶುರು ಮಾಡಿದರು. ನಮ್ಮಲ್ಲಿ ಎಡ – ಬಲ ಇರಬಾರದು ಅನ್ನೋ ಪಾತ್ರದಲ್ಲಿ ಮುನಿಯಪ್ಪ ಪ್ರಮುಖರಾಗಿದ್ದಾರೆ ಎಂದು ಹೊಗಳಿದ್ದಾರೆ.

2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಸೇರಿದಂತೆ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...