Homeಕರ್ನಾಟಕಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

- Advertisement -
- Advertisement -

“ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯ ಮಾಡುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ’ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನನ್ನ ಅಧ್ಯಕ್ಷತೆಯಲ್ಲೇ ಆಗಿದೆ. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲೇ ಮಂಡಿಸುವುದಾಗಿ ಭರವಸೆ ಕೊಟ್ಟಿದ್ದೇವೆ. ನಾನು ಹಾಗೂ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ.ತಿಮ್ಮಾಪೂರ್‌ ಅವರು ಮುಖ್ಯಮಂತ್ರಿಯವರಲ್ಲಿ ಒತ್ತಾಯ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಬೇಕು ಅಂತ ಹೇಳುತ್ತೇವೆ. ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ನಾವು ಮಾತಾಡಿಲ್ಲ ಅಂದರೆ ಅಲ್ಲಿ ನಾವು ಯಾಕಿರಬೇಕು?” ಎಂದು ಪ್ರಶ್ನಿಸಿದ್ದಾರೆ.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, “ನಾನು ಮುಖ್ಯಮಂತ್ರಿ ಯಾಕೆ ಆಗಬಾರದು?” ಎಂದು ಕೇಳಿದ್ದಾರೆ.

“ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ” ಎಂದಿದ್ದಾರೆ.

ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು. ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದು ಪರಮೇಶ್ವರ್‌ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದಿರುವ ಅವರು​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ಹೇಳಿದ್ದಾರೆ.

ನಮ್ಮನ್ನು ಒಡೆದು ಆಳುವ ನೀತಿ ಒಪ್ಪುವುದು ಬೇಡ ಎಂದು ನಾವು ಇಬ್ಬರೂ ನಿರ್ಧಾರ ಮಾಡಿದೆವು. ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ತೆಗೆದುಕೊಂಡೆವು. ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ನಡೆಸಿದೆವು. ನಾವೆಲ್ಲರೂ ಐಕ್ಯತೆಯಿಂದ ಇರಬೇಕು ಎಂದು ಸಂದೇಶ ಹೋಯಿತು, ಆ ಸಂದೇಶ ಆದಮೇಲೆ ಎಸ್‌ಸಿ ಎಸ್ಟಿ ಒಂದಾಗಿದ್ದಾರೆ ಅಂತಾ ಮಾತಾಡೋಕೆ ಶುರು ಮಾಡಿದರು. ನಮ್ಮಲ್ಲಿ ಎಡ – ಬಲ ಇರಬಾರದು ಅನ್ನೋ ಪಾತ್ರದಲ್ಲಿ ಮುನಿಯಪ್ಪ ಪ್ರಮುಖರಾಗಿದ್ದಾರೆ ಎಂದು ಹೊಗಳಿದ್ದಾರೆ.

2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಸೇರಿದಂತೆ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...