Homeಕರ್ನಾಟಕಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

- Advertisement -
- Advertisement -

“ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯ ಮಾಡುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ’ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನನ್ನ ಅಧ್ಯಕ್ಷತೆಯಲ್ಲೇ ಆಗಿದೆ. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲೇ ಮಂಡಿಸುವುದಾಗಿ ಭರವಸೆ ಕೊಟ್ಟಿದ್ದೇವೆ. ನಾನು ಹಾಗೂ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ.ತಿಮ್ಮಾಪೂರ್‌ ಅವರು ಮುಖ್ಯಮಂತ್ರಿಯವರಲ್ಲಿ ಒತ್ತಾಯ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಬೇಕು ಅಂತ ಹೇಳುತ್ತೇವೆ. ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ನಾವು ಮಾತಾಡಿಲ್ಲ ಅಂದರೆ ಅಲ್ಲಿ ನಾವು ಯಾಕಿರಬೇಕು?” ಎಂದು ಪ್ರಶ್ನಿಸಿದ್ದಾರೆ.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, “ನಾನು ಮುಖ್ಯಮಂತ್ರಿ ಯಾಕೆ ಆಗಬಾರದು?” ಎಂದು ಕೇಳಿದ್ದಾರೆ.

“ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ” ಎಂದಿದ್ದಾರೆ.

ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು. ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದು ಪರಮೇಶ್ವರ್‌ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದಿರುವ ಅವರು​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ಹೇಳಿದ್ದಾರೆ.

ನಮ್ಮನ್ನು ಒಡೆದು ಆಳುವ ನೀತಿ ಒಪ್ಪುವುದು ಬೇಡ ಎಂದು ನಾವು ಇಬ್ಬರೂ ನಿರ್ಧಾರ ಮಾಡಿದೆವು. ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ತೆಗೆದುಕೊಂಡೆವು. ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ನಡೆಸಿದೆವು. ನಾವೆಲ್ಲರೂ ಐಕ್ಯತೆಯಿಂದ ಇರಬೇಕು ಎಂದು ಸಂದೇಶ ಹೋಯಿತು, ಆ ಸಂದೇಶ ಆದಮೇಲೆ ಎಸ್‌ಸಿ ಎಸ್ಟಿ ಒಂದಾಗಿದ್ದಾರೆ ಅಂತಾ ಮಾತಾಡೋಕೆ ಶುರು ಮಾಡಿದರು. ನಮ್ಮಲ್ಲಿ ಎಡ – ಬಲ ಇರಬಾರದು ಅನ್ನೋ ಪಾತ್ರದಲ್ಲಿ ಮುನಿಯಪ್ಪ ಪ್ರಮುಖರಾಗಿದ್ದಾರೆ ಎಂದು ಹೊಗಳಿದ್ದಾರೆ.

2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಸೇರಿದಂತೆ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...