Homeಮುಖಪುಟಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ...

ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

- Advertisement -
- Advertisement -

ಇದೇ ಮೊದಲ ಬಾರಿಗೆ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌ (X) ಭಾರತ ಸರಕಾರ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ಭಾರತದಲ್ಲಿ ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದು, ಬಿಜೆಪಿ ಸರಕಾರದ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಂತಾಗಿದೆ.

ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌  (X)ನ ಜಾಗತಿಕ ಸರ್ಕಾರಿ ವ್ಯವಹಾರಗಳ ಪುಟವು( Global Government Affairs page ) ನರೇಂದ್ರ ಮೋದಿ ಸರ್ಕಾರವು ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ, ಇದನ್ನು ಮಾಡಲು ವಿಫಲವಾದರೆ ಅಧಿಕಾರಿಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ ಎಂದು ಹೇಳಿಕೊಂಡಿದೆ.

ಭಾರತೀಯ ಸರ್ಕಾರವು ಎಕ್ಸ್‌ಗೆ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕಲು, ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ, ತಪ್ಪಿದ್ದಲ್ಲಿ ಗಮನಾರ್ಹ ದಂಡಗಳು ಮತ್ತು ಜೈಲುವಾಸ ಸೇರಿದಂತೆ ಶಿಕ್ಷೆಯ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ. ಆದೇಶಗಳ ಅನುಸರಣೆಯ ಭಾಗವಾಗಿ, ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯುತ್ತೇವೆ, ಆದರೆ ನಾವು ಈ ಕ್ರಮಗಳನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು ಎಂದು ಎಕ್ಸ್‌ ಹೇಳಿಕೊಂಡಿದೆ.

ಭಾರತ ಸರ್ಕಾರದ ಆದೇಶಗಳು ಎಕ್ಸ್‌ಗೆ ಕಾನೂನು ನಿರ್ಬಂಧಗಳು ಅಡೆತಡೆಗಳನ್ನು ಉಂಟುಮಾಡುತ್ತವೆ ಎಂದು ಅದು ಹೇಳಿದೆ. ಪಾರದರ್ಶಕತೆಗಾಗಿ ನಿರ್ಬಂಧಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ ಇದು ಹೊಣೆಗಾರಿಕೆಯ ಕೊರತೆ ಮತ್ತು ಅನಿಯಂತ್ರಿತ ನಿರ್ಧಾರಕ್ಕೆ ಕಾರಣವಾಗಬಹುದು ಎಂದು ಎಕ್ಸ್‌  ಹೇಳಿದೆ.

ನಮ್ಮ ನಿಲುವಿಗೆ ಅನುಗುಣವಾಗಿ, ಭಾರತ ಸರ್ಕಾರದ ಆದೇಶಗಳನ್ನು ಪ್ರಶ್ನಿಸುವ ರಿಟ್ ಮೇಲ್ಮನವಿಯು ಬಾಕಿ ಉಳಿದಿದೆ. ನಮ್ಮ ನೀತಿಗಳಿಗೆ ಅನುಸಾರವಾಗಿ ಈ ಸೂಚನೆಯನ್ನು ನಾವು ಬಳಕೆದಾರರಿಗೆ ಒದಗಿಸಿದ್ದೇವೆ ಎಂದು ಎಕ್ಸ್‌ ಹೇಳಿಕೊಂಡಿದೆ.

ಈ ಹಿಂದೆ ಟ್ವಿಟರ್‌ ಎಂದು ಕರೆಯಲ್ಪಡುತ್ತಿದ್ದ ಎಕ್ಸ್‌ನ ಮಾಲಿಕತ್ವವನ್ನು ಎಲೋನ್ ಮಸ್ಕ್ ವಹಿಸಿಕೊಂಡ ನಂತರ ಪ್ರತಿಪಕ್ಷದ ನಾಯಕರುಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರಕಾರದ ವಿರುದ್ಧ ಪೋಸ್ಟ್‌ ಹಾಕುವವರನ್ನು ಎಕ್ಸ್‌ ನಿರ್ಬಂಧಿಸುತ್ತದೆ ಎಂಬ ಆರೋಪದ ನಡುವೆ, ಖಾತೆಗಳನ್ನು ತಡೆಹಿಡಿಯುವಂತೆ ಕೇಳುವ ಭಾರತೀಯ ಸರ್ಕಾರದ ಆದೇಶದ ಕುರಿತು ಎಕ್ಸ್ ಅಧಿಕೃತವಾಗಿ ಮಾತನಾಡಿರುವುದು ಇದೇ ಮೊದಲಾಗಿದೆ.

‘ದೆಹಲಿ ಚಲೋ’ ಪ್ರತಿಭಟನೆಗೆ ಮುಂಚಿತವಾಗಿ ರೈತ ಸಂಘಟನೆಗಳು ಮತ್ತು ಒಕ್ಕೂಟಗಳ ಅಧಿಕೃತ ಪುಟಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಎಕ್ಸ್‌ನಲ್ಲಿನ ಹನ್ನೆರಡು ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂಬ ಕಳವಳದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ರೈತರ ಎಕ್ಸ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...