Homeಮುಖಪುಟಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ...

ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

- Advertisement -
- Advertisement -

ಇದೇ ಮೊದಲ ಬಾರಿಗೆ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌ (X) ಭಾರತ ಸರಕಾರ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ಭಾರತದಲ್ಲಿ ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದು, ಬಿಜೆಪಿ ಸರಕಾರದ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಂತಾಗಿದೆ.

ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌  (X)ನ ಜಾಗತಿಕ ಸರ್ಕಾರಿ ವ್ಯವಹಾರಗಳ ಪುಟವು( Global Government Affairs page ) ನರೇಂದ್ರ ಮೋದಿ ಸರ್ಕಾರವು ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ, ಇದನ್ನು ಮಾಡಲು ವಿಫಲವಾದರೆ ಅಧಿಕಾರಿಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ ಎಂದು ಹೇಳಿಕೊಂಡಿದೆ.

ಭಾರತೀಯ ಸರ್ಕಾರವು ಎಕ್ಸ್‌ಗೆ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕಲು, ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ, ತಪ್ಪಿದ್ದಲ್ಲಿ ಗಮನಾರ್ಹ ದಂಡಗಳು ಮತ್ತು ಜೈಲುವಾಸ ಸೇರಿದಂತೆ ಶಿಕ್ಷೆಯ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ. ಆದೇಶಗಳ ಅನುಸರಣೆಯ ಭಾಗವಾಗಿ, ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯುತ್ತೇವೆ, ಆದರೆ ನಾವು ಈ ಕ್ರಮಗಳನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು ಎಂದು ಎಕ್ಸ್‌ ಹೇಳಿಕೊಂಡಿದೆ.

ಭಾರತ ಸರ್ಕಾರದ ಆದೇಶಗಳು ಎಕ್ಸ್‌ಗೆ ಕಾನೂನು ನಿರ್ಬಂಧಗಳು ಅಡೆತಡೆಗಳನ್ನು ಉಂಟುಮಾಡುತ್ತವೆ ಎಂದು ಅದು ಹೇಳಿದೆ. ಪಾರದರ್ಶಕತೆಗಾಗಿ ನಿರ್ಬಂಧಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ ಇದು ಹೊಣೆಗಾರಿಕೆಯ ಕೊರತೆ ಮತ್ತು ಅನಿಯಂತ್ರಿತ ನಿರ್ಧಾರಕ್ಕೆ ಕಾರಣವಾಗಬಹುದು ಎಂದು ಎಕ್ಸ್‌  ಹೇಳಿದೆ.

ನಮ್ಮ ನಿಲುವಿಗೆ ಅನುಗುಣವಾಗಿ, ಭಾರತ ಸರ್ಕಾರದ ಆದೇಶಗಳನ್ನು ಪ್ರಶ್ನಿಸುವ ರಿಟ್ ಮೇಲ್ಮನವಿಯು ಬಾಕಿ ಉಳಿದಿದೆ. ನಮ್ಮ ನೀತಿಗಳಿಗೆ ಅನುಸಾರವಾಗಿ ಈ ಸೂಚನೆಯನ್ನು ನಾವು ಬಳಕೆದಾರರಿಗೆ ಒದಗಿಸಿದ್ದೇವೆ ಎಂದು ಎಕ್ಸ್‌ ಹೇಳಿಕೊಂಡಿದೆ.

ಈ ಹಿಂದೆ ಟ್ವಿಟರ್‌ ಎಂದು ಕರೆಯಲ್ಪಡುತ್ತಿದ್ದ ಎಕ್ಸ್‌ನ ಮಾಲಿಕತ್ವವನ್ನು ಎಲೋನ್ ಮಸ್ಕ್ ವಹಿಸಿಕೊಂಡ ನಂತರ ಪ್ರತಿಪಕ್ಷದ ನಾಯಕರುಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರಕಾರದ ವಿರುದ್ಧ ಪೋಸ್ಟ್‌ ಹಾಕುವವರನ್ನು ಎಕ್ಸ್‌ ನಿರ್ಬಂಧಿಸುತ್ತದೆ ಎಂಬ ಆರೋಪದ ನಡುವೆ, ಖಾತೆಗಳನ್ನು ತಡೆಹಿಡಿಯುವಂತೆ ಕೇಳುವ ಭಾರತೀಯ ಸರ್ಕಾರದ ಆದೇಶದ ಕುರಿತು ಎಕ್ಸ್ ಅಧಿಕೃತವಾಗಿ ಮಾತನಾಡಿರುವುದು ಇದೇ ಮೊದಲಾಗಿದೆ.

‘ದೆಹಲಿ ಚಲೋ’ ಪ್ರತಿಭಟನೆಗೆ ಮುಂಚಿತವಾಗಿ ರೈತ ಸಂಘಟನೆಗಳು ಮತ್ತು ಒಕ್ಕೂಟಗಳ ಅಧಿಕೃತ ಪುಟಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಎಕ್ಸ್‌ನಲ್ಲಿನ ಹನ್ನೆರಡು ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂಬ ಕಳವಳದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ರೈತರ ಎಕ್ಸ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...