Homeಮುಖಪುಟಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ...

ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

- Advertisement -
- Advertisement -

ಇದೇ ಮೊದಲ ಬಾರಿಗೆ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌ (X) ಭಾರತ ಸರಕಾರ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ಭಾರತದಲ್ಲಿ ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದು, ಬಿಜೆಪಿ ಸರಕಾರದ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಂತಾಗಿದೆ.

ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌  (X)ನ ಜಾಗತಿಕ ಸರ್ಕಾರಿ ವ್ಯವಹಾರಗಳ ಪುಟವು( Global Government Affairs page ) ನರೇಂದ್ರ ಮೋದಿ ಸರ್ಕಾರವು ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ, ಇದನ್ನು ಮಾಡಲು ವಿಫಲವಾದರೆ ಅಧಿಕಾರಿಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ ಎಂದು ಹೇಳಿಕೊಂಡಿದೆ.

ಭಾರತೀಯ ಸರ್ಕಾರವು ಎಕ್ಸ್‌ಗೆ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕಲು, ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ, ತಪ್ಪಿದ್ದಲ್ಲಿ ಗಮನಾರ್ಹ ದಂಡಗಳು ಮತ್ತು ಜೈಲುವಾಸ ಸೇರಿದಂತೆ ಶಿಕ್ಷೆಯ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ. ಆದೇಶಗಳ ಅನುಸರಣೆಯ ಭಾಗವಾಗಿ, ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯುತ್ತೇವೆ, ಆದರೆ ನಾವು ಈ ಕ್ರಮಗಳನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು ಎಂದು ಎಕ್ಸ್‌ ಹೇಳಿಕೊಂಡಿದೆ.

ಭಾರತ ಸರ್ಕಾರದ ಆದೇಶಗಳು ಎಕ್ಸ್‌ಗೆ ಕಾನೂನು ನಿರ್ಬಂಧಗಳು ಅಡೆತಡೆಗಳನ್ನು ಉಂಟುಮಾಡುತ್ತವೆ ಎಂದು ಅದು ಹೇಳಿದೆ. ಪಾರದರ್ಶಕತೆಗಾಗಿ ನಿರ್ಬಂಧಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ ಇದು ಹೊಣೆಗಾರಿಕೆಯ ಕೊರತೆ ಮತ್ತು ಅನಿಯಂತ್ರಿತ ನಿರ್ಧಾರಕ್ಕೆ ಕಾರಣವಾಗಬಹುದು ಎಂದು ಎಕ್ಸ್‌  ಹೇಳಿದೆ.

ನಮ್ಮ ನಿಲುವಿಗೆ ಅನುಗುಣವಾಗಿ, ಭಾರತ ಸರ್ಕಾರದ ಆದೇಶಗಳನ್ನು ಪ್ರಶ್ನಿಸುವ ರಿಟ್ ಮೇಲ್ಮನವಿಯು ಬಾಕಿ ಉಳಿದಿದೆ. ನಮ್ಮ ನೀತಿಗಳಿಗೆ ಅನುಸಾರವಾಗಿ ಈ ಸೂಚನೆಯನ್ನು ನಾವು ಬಳಕೆದಾರರಿಗೆ ಒದಗಿಸಿದ್ದೇವೆ ಎಂದು ಎಕ್ಸ್‌ ಹೇಳಿಕೊಂಡಿದೆ.

ಈ ಹಿಂದೆ ಟ್ವಿಟರ್‌ ಎಂದು ಕರೆಯಲ್ಪಡುತ್ತಿದ್ದ ಎಕ್ಸ್‌ನ ಮಾಲಿಕತ್ವವನ್ನು ಎಲೋನ್ ಮಸ್ಕ್ ವಹಿಸಿಕೊಂಡ ನಂತರ ಪ್ರತಿಪಕ್ಷದ ನಾಯಕರುಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರಕಾರದ ವಿರುದ್ಧ ಪೋಸ್ಟ್‌ ಹಾಕುವವರನ್ನು ಎಕ್ಸ್‌ ನಿರ್ಬಂಧಿಸುತ್ತದೆ ಎಂಬ ಆರೋಪದ ನಡುವೆ, ಖಾತೆಗಳನ್ನು ತಡೆಹಿಡಿಯುವಂತೆ ಕೇಳುವ ಭಾರತೀಯ ಸರ್ಕಾರದ ಆದೇಶದ ಕುರಿತು ಎಕ್ಸ್ ಅಧಿಕೃತವಾಗಿ ಮಾತನಾಡಿರುವುದು ಇದೇ ಮೊದಲಾಗಿದೆ.

‘ದೆಹಲಿ ಚಲೋ’ ಪ್ರತಿಭಟನೆಗೆ ಮುಂಚಿತವಾಗಿ ರೈತ ಸಂಘಟನೆಗಳು ಮತ್ತು ಒಕ್ಕೂಟಗಳ ಅಧಿಕೃತ ಪುಟಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಎಕ್ಸ್‌ನಲ್ಲಿನ ಹನ್ನೆರಡು ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂಬ ಕಳವಳದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ರೈತರ ಎಕ್ಸ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...