Homeಮುಖಪುಟಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ...

ಮೋದಿ ಸರಕಾರದಿಂದ ನಿರ್ದಿಷ್ಟ ಖಾತೆ, ಪೋಸ್ಟ್‌ಗಳನ್ನು ನಿರ್ಬಂಧಿಸಲು ಸೂಚನೆ: ಇದೇ ಮೊದಲ ಬಾರಿಗೆ ಮಾಹಿತಿ ಬಿಚ್ಚಿಟ್ಟ ಎಕ್ಸ್‌(X)

- Advertisement -
- Advertisement -

ಇದೇ ಮೊದಲ ಬಾರಿಗೆ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌ (X) ಭಾರತ ಸರಕಾರ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ಭಾರತದಲ್ಲಿ ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದು, ಬಿಜೆಪಿ ಸರಕಾರದ ವಿರುದ್ಧದ ಧ್ವನಿಗಳನ್ನು ಹತ್ತಿಕ್ಕಲಾಗುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಮತ್ತೆ ಪುಷ್ಠಿ ಸಿಕ್ಕಂತಾಗಿದೆ.

ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಸಾಮಾಜಿಕ ಮಾದ್ಯಮ ವೇದಿಕೆ ಎಕ್ಸ್‌  (X)ನ ಜಾಗತಿಕ ಸರ್ಕಾರಿ ವ್ಯವಹಾರಗಳ ಪುಟವು( Global Government Affairs page ) ನರೇಂದ್ರ ಮೋದಿ ಸರ್ಕಾರವು ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯಲು ಎಕ್ಸ್‌ಗೆ ಆದೇಶಗಳನ್ನು ಹೊರಡಿಸಿದೆ, ಇದನ್ನು ಮಾಡಲು ವಿಫಲವಾದರೆ ಅಧಿಕಾರಿಗಳಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ ಎಂದು ಹೇಳಿಕೊಂಡಿದೆ.

ಭಾರತೀಯ ಸರ್ಕಾರವು ಎಕ್ಸ್‌ಗೆ ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತೆಗೆದುಹಾಕಲು, ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ, ತಪ್ಪಿದ್ದಲ್ಲಿ ಗಮನಾರ್ಹ ದಂಡಗಳು ಮತ್ತು ಜೈಲುವಾಸ ಸೇರಿದಂತೆ ಶಿಕ್ಷೆಯ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹೇಳಿದೆ. ಆದೇಶಗಳ ಅನುಸರಣೆಯ ಭಾಗವಾಗಿ, ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆಹಿಡಿಯುತ್ತೇವೆ, ಆದರೆ ನಾವು ಈ ಕ್ರಮಗಳನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು ಎಂದು ಎಕ್ಸ್‌ ಹೇಳಿಕೊಂಡಿದೆ.

ಭಾರತ ಸರ್ಕಾರದ ಆದೇಶಗಳು ಎಕ್ಸ್‌ಗೆ ಕಾನೂನು ನಿರ್ಬಂಧಗಳು ಅಡೆತಡೆಗಳನ್ನು ಉಂಟುಮಾಡುತ್ತವೆ ಎಂದು ಅದು ಹೇಳಿದೆ. ಪಾರದರ್ಶಕತೆಗಾಗಿ ನಿರ್ಬಂಧಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಅತ್ಯಗತ್ಯ ಎಂದು ನಾವು ನಂಬುತ್ತೇವೆ. ಇಲ್ಲದಿದ್ದರೆ ಇದು ಹೊಣೆಗಾರಿಕೆಯ ಕೊರತೆ ಮತ್ತು ಅನಿಯಂತ್ರಿತ ನಿರ್ಧಾರಕ್ಕೆ ಕಾರಣವಾಗಬಹುದು ಎಂದು ಎಕ್ಸ್‌  ಹೇಳಿದೆ.

ನಮ್ಮ ನಿಲುವಿಗೆ ಅನುಗುಣವಾಗಿ, ಭಾರತ ಸರ್ಕಾರದ ಆದೇಶಗಳನ್ನು ಪ್ರಶ್ನಿಸುವ ರಿಟ್ ಮೇಲ್ಮನವಿಯು ಬಾಕಿ ಉಳಿದಿದೆ. ನಮ್ಮ ನೀತಿಗಳಿಗೆ ಅನುಸಾರವಾಗಿ ಈ ಸೂಚನೆಯನ್ನು ನಾವು ಬಳಕೆದಾರರಿಗೆ ಒದಗಿಸಿದ್ದೇವೆ ಎಂದು ಎಕ್ಸ್‌ ಹೇಳಿಕೊಂಡಿದೆ.

ಈ ಹಿಂದೆ ಟ್ವಿಟರ್‌ ಎಂದು ಕರೆಯಲ್ಪಡುತ್ತಿದ್ದ ಎಕ್ಸ್‌ನ ಮಾಲಿಕತ್ವವನ್ನು ಎಲೋನ್ ಮಸ್ಕ್ ವಹಿಸಿಕೊಂಡ ನಂತರ ಪ್ರತಿಪಕ್ಷದ ನಾಯಕರುಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರಕಾರದ ವಿರುದ್ಧ ಪೋಸ್ಟ್‌ ಹಾಕುವವರನ್ನು ಎಕ್ಸ್‌ ನಿರ್ಬಂಧಿಸುತ್ತದೆ ಎಂಬ ಆರೋಪದ ನಡುವೆ, ಖಾತೆಗಳನ್ನು ತಡೆಹಿಡಿಯುವಂತೆ ಕೇಳುವ ಭಾರತೀಯ ಸರ್ಕಾರದ ಆದೇಶದ ಕುರಿತು ಎಕ್ಸ್ ಅಧಿಕೃತವಾಗಿ ಮಾತನಾಡಿರುವುದು ಇದೇ ಮೊದಲಾಗಿದೆ.

‘ದೆಹಲಿ ಚಲೋ’ ಪ್ರತಿಭಟನೆಗೆ ಮುಂಚಿತವಾಗಿ ರೈತ ಸಂಘಟನೆಗಳು ಮತ್ತು ಒಕ್ಕೂಟಗಳ ಅಧಿಕೃತ ಪುಟಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಎಕ್ಸ್‌ನಲ್ಲಿನ ಹನ್ನೆರಡು ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ ಎಂಬ ಕಳವಳದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ರೈತರ ಎಕ್ಸ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಲಪಂಥೀಯ ವಿದ್ಯಾರ್ಥಿಗಳ ಸಂಭ್ರಮಾಚರಣೆಗೆ ವಿರೋಧಿಸಿ ಸ್ಟೇಟಸ್‌ ಪೋಸ್ಟ್ ಮಾಡಿದ್ದ IIPS ವಿದ್ಯಾರ್ಥಿಯ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...