Homeಕರ್ನಾಟಕಬೆಂಗಳೂರಿಗೆ ನೀರೊಯ್ಯುವ ಮತ್ತೊಂದು ಮಸಲತ್ತು!: ಪ್ರಾಣವಾದರೂ ಕೊಟ್ಟೇವು ಅಘನಾಶಿನಿ ನೀರು ಕೊಡುವುದಿಲ್ಲ!!

ಬೆಂಗಳೂರಿಗೆ ನೀರೊಯ್ಯುವ ಮತ್ತೊಂದು ಮಸಲತ್ತು!: ಪ್ರಾಣವಾದರೂ ಕೊಟ್ಟೇವು ಅಘನಾಶಿನಿ ನೀರು ಕೊಡುವುದಿಲ್ಲ!!

- Advertisement -
- Advertisement -

ಅಘನಾಶಿನಿ ಕೊಳ್ಳ ಕೊತಕೊತ ಕುದಿಯಲು ಶುರುವಾಗಿ ಹೆಚ್ಚುಕಮ್ಮಿ ಒಂದು ತಿಂಗಳೇ ಕಳೆದುಹೋಗಿದೆ. ಅಕ್ಷರಶಃ ಉತ್ತರ ಕನ್ನಡದ ಜೀವ ನದಿಯಾದ ಅಘನಾಶಿನಿಯ ನೀರನ್ನು ಬೆಂಗಳೂರಿಗೆ ಒಯ್ಯುವ ಆಡಳಿತಗಾರರ ಗುಟ್ಟಿನ ಗಂಡಾಗುಂಡಿ ಕಟ್ಟಾಗುತ್ತಿದ್ದಂತೆಯೇ ಕಂಗಾಲುಬಿದ್ದ ಅಘನಾಶಿನಿ ಕಣಿವೆ ಮಂದಿ ತಿರುಗಿಬಿದ್ದಿದ್ದಾರೆ. ಅತ್ತ ಶರಾವತಿ ನೀರು ಬೆಂಗಳೂರಿಗೆ ಸಾಗಿಸಲು ಬಿಡುವುದಿಲ್ಲವೆಂದು ಶರಾವತಿ ಕಣಿವೆಯಲ್ಲಿ ಜನಾಂದೋಲನ ನಡೆಯುತ್ತಿದ್ದ ಹೊತ್ತಿನಲ್ಲೇ ಇತ್ತ ಅಘನಾಶಿನಿ ನದಿ ನೀರಿಗೂ ಕನ್ನ ಹಾಕುವ ಕರಾಮತ್ತಿನ ಸುದ್ದಿ ಅಲ್ಲೋಲಕಲ್ಲೋಲವೇ ಸೃಷ್ಟಿಸಿಬಿಟ್ಟಿತ್ತು. ಈಗ ಕುಮ್ಮಿ ಮನೆಗೆ ಹೋಗಿ ಯಡ್ಡಿಯ ಕೇಸರಿ ದರ್ಬಾರು ಬಂದರೂ ಜನರು ಪ್ರತಿಭಟನೆ ನಿಲ್ಲಿಸಲು ಸಿದ್ಧರಿಲ್ಲ. ಏಕೆಂದರೆ, ಶರಾವತಿ ಮತ್ತು ಅಘನಾಶಿನಿ ನದಿಗಳ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಳಯಾಂತಕ ಪ್ರಾಜೆಕ್ಟಿನ ಮೂಲವಿರುವುದೇ ಯಡ್ಡಿಯ ಪಂಡಿತ ಪಠಾಲಮ್ಮಿನಲ್ಲಿ!!

2010ರಲ್ಲಿ ಆಳ್ವಿಕೆ ನಡೆಸುತ್ತಿದ್ದ ಯಡ್ಡಿ ಸರ್ಕಾರ 2031ರ ಹೊತ್ತಿಗೆ ಬೆಂಗಳೂರು ಎದುರಿಸಬಹುದಾದ ಕುಡಿಯುವ ನೀರಿನ ಅಭಾವ ನೀಗುವ ಪರಿಹಾರಕ ಪ್ಲಾನ್ ಬಗ್ಗೆ ಪರಿಶೀಲಿಸಲು ನಿವೃತ್ತ ಮುಖ್ಯ ಇಂಜಿನಿಯರ್ ತ್ಯಾಗರಾಜ್ ಸಮಿತಿ ರಚಿಸಿತ್ತು. ಈ ಸಮಿತಿ 2012ರಲ್ಲಿ ಶರಾವತಿ ಮತ್ತು ಅಘನಾಶಿನಿ ನೀರು ರಕ್ಕಸ ಪಂಪ್‍ಗಳ ಮೂಲಕ ಬೆಂಗಳೂರಿಗೆ ಲಿಫ್ಟ್ ಮಾಡಲು ಸೂಚಿಸಿತ್ತು. 2014ರಲ್ಲಿ ಈ ಪ್ರಸ್ತಾವನೆ ಸರ್ಕಾರ ಸ್ವೀಕರಿಸಿತಾದರೂ, ಇದೆಲ್ಲ ಅಪ್ರಾಯೋಗಿಕ ಪ್ಲಾಪ್ ಪ್ರಾಜೆಕ್ಟ್ ಆಗುತ್ತದೆಂಬ ಅಭಿಪ್ರಾಯ ಜಲತಜ್ಞರ ವಲಯದಿಂದ ಬಂದಿತ್ತು. ಹಾಗಂತ ಆಗ ಉತ್ತರ ಕನ್ನಡದ ಸಚಿವ, ಸಂಸದ, ಶಾಸಕರ್ಯಾರೂ ಈ “ಜಲಕಂಟಕ”ದ ಬಗ್ಗೆ ತಲೆ ಕೆಡಿಸಿಕೊಳ್ಳದೆ ತಂತಮ್ಮ ಜೀವನೋಪಾಯದ ರಾಜಕೀಯ ಕಸುಬಿನಲ್ಲಿ ನಿರಾತಂಕವಾಗಿ ನಿರತರಾಗಿದ್ದರು!

ಶಿರಸಿಯ ಶಂಕರ ಹೊಂಡದಲ್ಲಿ ಹುಟ್ಟುವ ಅಘನಾಶಿನಿ ನದಿ ಕುಮಟೆಯ ಅರಬ್ಬೀಸಮುದ್ರ ಸೇರುವವರೆಗೆ ಬರೋಬ್ಬರಿ 1800 ಚದರ ಕಿಮೀ ಜಲಾನಯನ ಪ್ರದೇಶ ಸುತ್ತು ಹೊಡೆಯುತ್ತದೆ. ಅಘನಾಶಿನಿಯು ಸುಮಾರು 100-120 ಸಮುದ್ರ ಕಿ.ಮೀ ಹರಿದು ಸಮುದ್ರ ಸೇರುವುದರಿಂದ ವ್ಯರ್ಥವಾಗುತ್ತದೆಂದು ಸರ್ಕಾರಿ ಪ್ರಭೃತಿಗಳು ಲೆಕ್ಕಹಾಕಿದ್ದಾರೆ. ಇದರಲ್ಲಿ ಬರೀ ಐವತ್ತೇ ಟಿಎಂಸಿ ನೀರನ್ನು ಬೆಂಗಳೂರಿಗೆ ತಳ್ಳುವ ಹದಿಮೂರು ಸಾವಿರ ಕೋಟಿ ರೂಪಾಯಿಗಳ ಯೋಜನೆಗೆ ಯೋಚನೆ ಮಾಡಲಾಗಿತ್ತೆಂಬ ಮೋಗಮ್ ಭಾತ್ಮಿಯೊಂದನ್ನು ಸರ್ಕಾರಿ ಸರದಾರರು ತೇಲಿಬಿಟ್ಟಿದ್ದಾರೆ.

ಇದು ಹಸಿಹಸೀ ಸುಳ್ಳು! ಈ ಭರ್ಜರಿ ಯೋಜನೆಯ ಆಳ-ಅಗಲ ನೋಡಿದರೆ ಬಳಕೆಯಾಗೋದು ಬರೀ 50 ಟಿಎಂಸಿ ನೀರೆಂದು ನಂಬೋದು ಸಾಧ್ಯವೇ ಇಲ್ಲ. ಯೋಜನಾ ವರದಿ ಕೈಲಿಡಿದು ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಅಘನಾಶಿನಿಯ 230 ಟಿಎಂಸಿ ನೀರೂ ಸ್ವಾಹಾ ಆಗುತ್ತದೆಂದು ಎಂಥ ಗಾಂಪನಿಗೂ ಅರ್ಥವಾಗುತ್ತದೆ. ಇಷ್ಟಾದರೂ ಪ್ರಾಜೆಕ್ಟ್ ಫಲಪ್ರದವಾಗುತ್ತದೆಂಬುದಕ್ಕೆ ಯಾವ ಖಾತ್ರಿಯೂ ಇಲ್ಲ! ಇದೊಂದು ‘ಎತ್ತಿನಹೊಳೆ”ಯಂಥದ್ದೇ ಬೋಗಸ್ ಯೋಜನೆ ಆಗಬಹುದಷ್ಟೇ.

ಕಠೋರ ವಾಸ್ತವ

ಅಘನಾಶಿನಿ ನದಿಗೆ ಸಿದ್ದಾಪುರದ “ಹೇಮಜಿನಿ” ಎಂಬಲ್ಲಿ ಡ್ಯಾಮ್

ಕಟ್ಟಲಾಗುತ್ತದೆ. ನೀರನ್ನು ಪೈಪುಗಳ ಮೂಲಕ ಸಿದ್ದಾಪುರ, ಸಾಗರ, ಭದ್ರಾವತಿಗೆ ತರಲಾಗುತ್ತದೆ. ಭದ್ರಾವತಿಯ ಭದ್ರಾನದಿಯ ಮೇಲೆ ಮೇಲ್ಗಾಲುವೆ ನಿರ್ಮಿಸಿ ಅಲ್ಲಿಂದ ತರಿಕೆರೆ ಮೂಲಕ ಅಘನಾಶಿನಿ ನೀರನ್ನು ಚಿತ್ರದುರ್ಗದ ವಾಣಿವಿಲಾಸ ಜಲಾಶಯಕ್ಕೆ ತುಂಬಿಸಲಾಗುತ್ತದೆ. ಇದೇ ಪ್ರಕಾರ ತುಮಕೂರು ಜಿಲ್ಲೆಯ ಹಲವು ಡ್ಯಾಮ್‍ಗಳನ್ನು ಭರ್ತಿಮಾಡುತ್ತಾ ಅಂತಿಮವಾಗಿ ಬೆಂಗಳೂರಿನ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಅಘನಾಶಿನಿ ನೀರನ್ನು ಸೇರಿಸುವ ಯೋಜನೆಯಿದು. ಹೇಮಜಿನಿಯಿಂದ ತಿಪ್ಪಗೊಂಡನಹಳ್ಳಿ ಸರೋವರದ ವರೆಗಿನ 500 ಮೀಟರ್ ಎತ್ತರಕ್ಕೆ ಮತ್ತು 350 ಕಿ.ಮೀ ದೂರಕ್ಕೆ ಬೃಹತ್ ಪಂಪ್‍ಗಳ ಮೂಲಕ ನೀರು ತಳ್ಳಲಾಗುತ್ತದೆ.

ಈಗ ಹೇಳಲಾಗಿರುವಂತೆ 13 ಸಾವಿರ ಕೋಟಿಗೆಲ್ಲ ಮುಗಿಯುವ ಯೋಜನೆಯಿದಲ್ಲ. ಬದಲಿಗೆ ಇದರ ಯೋಜನಾ ವೆಚ್ಚ ನೂರಾರು ಸಾವಿರ ಕೋಟಿಗೆ ಹೋಗಿ ನಿಲ್ಲುತ್ತದೆ. ವರ್ಷಪೂರ್ತಿ ಅಘನಾಶಿನಿ ಹರಿಯುತ್ತಾಳಾದರೂ ಬೇಸಿಗೆಯಲ್ಲಿ ಸೊರಗುತ್ತಾಳೆ. ಅಘನಾಶಿನಿ ನೀರಿಂದ ಬೃಹತ್ ಬೆಂಗಳೂರಿನ ನೀರಡಿಕೆ ತಣಿಸಲು ಸಾಧ್ಯವಿಲ್ಲವೆಂದೇ ಹೇಮಜಿನಿಯಲ್ಲಿ ಡ್ಯಾಮ್ ಕಟ್ಟಿ ಮಳೆ ನೀರನ್ನು ಸಂಗ್ರಹಿಸಲು ಯೋಜನಾ ವರದಿಯಲ್ಲಿ ಹೇಳಲಾಗಿದೆ. ಆದರೆ ಡ್ಯಾಮ್‍ಗೆ ಎಷ್ಟು ದೊಡ್ಡ ಜಾಗ ಬೇಕೆಂದು ವರದಿಯಲ್ಲಿ ಬರೆದಿಲ್ಲ.

ಇದನ್ನು ಓದಿ: ಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

ಕಳೆದ 50 ವರ್ಷದಿಂದ ಅಘನಾಶಿನಿ ಕೊಳ್ಳದಲ್ಲಿ ಜಲವಿದ್ಯುತ್ ಯೋಜನೆ ಸ್ಥಾಪಿಸುವ ಹುನ್ನಾರ ನಡೆಯುತ್ತಲೇ ಇದೆ. ಆದರೆ ಅದಿನ್ನು “ಬುದ್ಧಿವಂತ” ಬ್ರಾಹ್ಮಣರಾದಿಯಾಗಿ ಹಿಮ್ಮೆಟ್ಟಿಸುತ್ತಿದೆ. ಈ ಜಲವಿದ್ಯುತ್ ಯೋಜನೆಯಲ್ಲಿ ಕನಸೂರಿಂದ ತ್ಯಾಗಲಿ, ಹೇರೂರು, ಹೆಗ್ಗರಣಿ, ಹಾರ್ಸಿಕಟ್ಟಾ, ಗೋಳಿಮಕ್ಕಿ, ಕವಲಕೊಪ್ಪ, ಬಿದ್ರಡಾನ್, ಬಿಳಿಗಿಯೇ ಮುಂತಾದ ಹಲವು ಹಳ್ಳಿಗಳು, ಸಾವಿರಾರು ಎಕರೆ ಅಡಿಕೆತೋಟ, ಭತ್ತದ ಗದ್ದೆ, ಅಪಾರ ಅರಣ್ಯ ಪ್ರದೇಶ ಮುಳುಗಡೆಯಾಗುತ್ತದೆ. ಆದರೆ ಬೆಂಗಳೂರಿಗೆ ನೀರೊಯ್ಯುವ ಪ್ರಾಜೆಕ್ಟಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ಮುಳುಗಡೆ ಆಗಲಿಕ್ಕಿಲ್ಲ, ಪರಿಸರ ಹಾನಿ ಮಾತ್ರ ದೊಡ್ಡ ಪ್ರಮಾಣದಲ್ಲಿ ಆಗುತ್ತದೆ!

ಅಘನಾಶಿನಿ ನದಿ ಗಂಗಾನದಿಗಿಂತಲೂ ಪ್ರಾಚೀನವಾದುದೆಂಬ ತರ್ಕವಿದೆ. ಭೂ ಇತಿಹಾಸದಲ್ಲಿ ಹಿಮಾಲಯಕ್ಕಿಂತ ಮೊದಲೆ ಸಹ್ಯಾದ್ರಿ ಬೆಟ್ಟಗಳು ಹುಟ್ಟಿದ ದಾಖಲೆಯಿದೆ. ಹಾಗಾಗಿ ಗಂಗೆಗಿಂತಲೂ ಅಘನಾಶಿನಿಯೇ ಹಳೆಯ ನದಿ. ಅಘನಾಶಿನಿ ಶರಾವತಿಯಂತೆಯೂ ಅಲ್ಲ. ಶರಾವತಿ ಹೆಚ್ಚುಕಮ್ಮಿ ನೇರವಾಗಿ ಹರಿಯುತ್ತದೆ. ಅಘನಾಶಿನಿ ಶಿರಸಿಯಿಂದ ಕುಮಟೆ ತಲುಪುವತನಕ ಒಂದು ದೊಡ್ಡ ಗೋಲ ನಿರ್ಮಿಸುತ್ತದೆ. ಅಘನಾಶಿನಿ ಸಿದ್ದಾಪುರ ತಾಲ್ಲೂಕಿನ ಎಲ್ಲ ಅರಣ್ಯ, ತೋಟ, ಗದ್ದೆ ಬಳಸುತ್ತ ಅನೇಕ ಹೊಳೆ-ಹಳ್ಳಗಳನ್ನು ತನ್ನಲ್ಲಿ ಸೇರಿಸಿಕೊಂಡು ಒಂಥರಾ ನಡುಗಡ್ಡೆ ಸೃಷ್ಟಿಸುತ್ತದೆ. ಹೀಗಾಗಿ ಅಘನಾಶಿನಿಗೆ ಒಂದು ಸಣ್ಣ ಒಡ್ಡು ಕಟ್ಟಿದರೂ ಸಾಕು ಸಿದ್ದಾಪುರ ತಾಲ್ಲೂಕಿನ ಎಲ್ಲಾ ಅರಣ್ಯ ಮುಳುಗುತ್ತದೆ. ತೋಟ-ಗದ್ದೆಗಳಲ್ಲಿ ಬಹುಪಾಲು ಜಲ ಸಮಾಧಿಯಾಗುತ್ತದೆ. ಅಘನಾಶಿನಿಗೆ ಒಡ್ಡು ಹಾಕಿದರೆ ಉತ್ತರ ಕನ್ನಡದ ಹೃದಯಕ್ಕೆ ಒಡ್ಡು ಕಟ್ಟಿದಂತೆಯೇ!!

ಜನಾಂದೋಲನಕ್ಕೆ ಕಾವೇರುತ್ತಿದೆ

ಉತ್ತರ ಕನ್ನಡವನ್ನು ಆಪೋಷನ ಪಡೆದು ಬೆಂಗಳೂರಿನ ನೀರಿನ ಸಮಸ್ಯೆ ಪರಿಹರಿಸುವ ಈ ಎಡವಟ್ಟು ಯೋಜನೆ ಮನುಷ್ಯ ನಿರ್ಮಿತ ಊರು, ಮನೆ, ಮಠ, ತೋಟ, ಗದ್ದೆಯನ್ನಷ್ಟೇ ಅಲ್ಲ, ವಿಶಿಷ್ಟ ಜೀವಜಾಲವನ್ನೇ ಧ್ವಂಸ ಮಾಡಲಿದೆ! ಅಘನಾಶಿನಿ ಕೊಳ್ಳದಲ್ಲಿ ನೂರಾರು ನಮೂನೆಯ ಗಿಡ, ಮರ, ಔಷಧಿ ಸಸ್ಯಗಳಿವೆ. ಕೇರಳದ ಸೈಲೆಂಟ್ ವ್ಯಾಲಿಯಲ್ಲಷ್ಟೇ ಕಂಡುಬರುವ ಸಿಂಗಳೀಕ (ಸಿಂಹ ಬಾಲದ ಮಂಗ) ಇಲ್ಲಿದೆ. ಕೋಟ್ಯಾಂತರ ವರ್ಷದ ಮಂಗನ ತಳಿಯಿದು. ಘಟ್ಟದ ಮೇಲಿನ ಮತ್ತು ಕರಾವಳಿಯ ಸಾವಿರಾರು ಮೀನುಗಾರ, ತೋಟಿಗ, ರೈತಾಪಿ, ಕೂಲಿ ಕಾರ್ಮಿಕ ಕುಟುಂಬಗಳಿಗೆಲ್ಲ ಅಘನಾಶಿನಿ ಜೀವನಾಧಾರ ನದಿ! ಮರಾಕಲ್ (ಅಘನಾಶಿನಿ ನದಿ ನೀರು) ಯೋಜನೆಯಿಂದ ಕುಮಟಾ ಮತ್ತು ಹೊನ್ನಾವರದ ಕುಡಿವ ನೀರಿನ ಬವಣೆ ಸ್ವಲ್ಪ ನೀಗಲಾಗಿದೆ. ಈಗಿನ ಪರಿಸ್ಥಿತಿಗೆ ಅಘನಾಶಿನಿ ನೀರು ಸಾಕಾಗುತ್ತಿಲ್ಲ.

ಇದನ್ನು ಓದಿ: ಶರಾವತಿ ನೀರು ಬೆಂಗಳೂರಿಗೆ ವಿರೋಧಿಸಿ ಶಿವಮೊಗ್ಗ ಬಂದ್. ಸಾವಿರಾರು ಜನರು ಭಾಗಿ

ಕಳೆದ ಬೇಸಿಗೆಯಲ್ಲಿ ಅಘನಾಶಿನಿ ನದಿ ಪಾತ್ರದ ನೀರು ಹಿಂದೆಂದೂ ಕಾಣದಷ್ಟು ಕಡಿಮೆಯಾಗಿತ್ತು. ತಿಂಗಳುಗಟ್ಟಲೆ ನದಿ ಪ್ರದೇಶದ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ನದಿ ಹರಿವಿನ ಪ್ರಮಾಣ ಕಡಿಮೆಯಾದಂತೆ ಕುಡಿಯುವ ನೀರಿನ ಮೂಲಗಳು ಬತ್ತುವ ಕ್ಷೇತ್ರ ದುಪ್ಪಟ್ಟಾಗುತ್ತಿದೆ. ಹೀಗಾಗಿ ಮೀನುಗಾರಿಕೆ, ತೋಟಗಾರಿಕೆ, ಕೃಷಿ ಕಸುಬಿಗೆ ತೊಂದರೆಯಾಗುತ್ತಿದೆ. ಅಘನಾಶಿನಿ ಉಳಿಸಿಕೊಳ್ಳದಿದ್ದರೆ ಭವಿಷ್ಯ ಕರಾಳವಾಗಲಿದೆ ಎಂಬ ಆತಂಕ ಜನರನ್ನು ಕಾಡುತ್ತಿದೆ. ಮುಂದಿನ ಪೀಳಿಗೆಗೆ ಈಗಲೇ ಅಘನಾಶಿನಿ ನಿರಾತಂಕವಾಗಿ ಹರಿಯುವಂತೆ ನೋಡಿಕೊಳ್ಳಬೇಕಿದೆ. ಈ ದರ್ದು ಅಘನಾಶಿನಿ ನದಿ ಪಾತ್ರದ ಜನರನ್ನು ಬೀದಿಗಿಳಿಸಿದೆ. ರಸ್ತೆ ತಡೆ, ಪ್ರತಿಭಟನೆ ಗುರಿಗಟ್ಟುತ್ತಿದೆ. ಜೀವವನ್ನಾದರೂ ಕೊಡುತ್ತೇವೆ. ಅಘನಾಶಿನಿ ನೀರಿನ ಒಂದು ಹನಿಯೂ ಬೇರೆಡೆ ಒಯ್ಯಲು ಬಿಡುವುದಿಲ್ಲ ಎಂದು ಜನರು ಕೆಂಡಾಮಂಡಲವಾಗಿ ಹೇಳುತ್ತಿದ್ದಾರೆ.

ಅಘನಾಶಿನಿ ನೀರನ್ನು ದೂರದ ಬೆಂಗಳೂರಿಗೆ ಒಯ್ಯುವ ದುಸ್ಸಾಹಸಕ್ಕೆ ಕೈಹಾಕಿರುವ ಹುಂಬ ಪಂಡಿತರಿಗೆ ಉತ್ತರ ಕನ್ನಡದ ಜನಜೀವನ, ಪರಿಸರದ ಬಗ್ಗೆ ಒಂಚೂರೂ ಅರಿವಿಲ್ಲ. ಜನರ ಸಮಸ್ಯೆಗೆ ಸ್ಪಂದಿಸಬೇಕಾದ ಮಂತ್ರಿ, ಸಂಸದ, ಶಾಸಕರಿಗೆ ಕಿಕ್‍ಬ್ಯಾಕ್ ಚಿಂತೆ. ಈ ಯೋಜನೆಯಿಂದ ಅಘನಾಶಿನಿ ನದಿ ಪ್ರದೇಶದ ಅಂತರ್ಜಲ ಬತ್ತುತ್ತದೆ. ನದಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡ ಲಕ್ಷಾಂತರ ಮಂದಿ ಬೀದಿ ಪಾಲಾಗುತ್ತಾರೆ. ಸ್ಥಳೀಯ ಜನಜೀವನ ನರಕ ಮಾಡಿ ಬೆಂಗಳೂರು ಉದ್ಧಾರ ಮಾಡಿದರೇನು ಬಂತು!? ಬಲಾತ್ಕಾರವಾಗಿ ನದಿಯ ದಿಕ್ಕು ಬದಲಿಸುವುದೇ ಅವೈಜ್ಞಾನಿಕವಷ್ಟೇ ಅಲ್ಲ ಅಕ್ಷಮ್ಯ- ಅನಾಹುತಕರ. ನದಿಯ ನೀರು ನೈಸರ್ಗಿಕ ಹಕ್ಕುದಾರರಿಗೆ ಮಾತ್ರ.
ಈ ಪ್ರಕೃತಿ ನಿಯಮ ಆಳುವ ಖೂಳರಿಗೆ ಅರ್ಥ ಮಾಡಿಸುವವರು ಯಾರು? ಜನರ ಆತಂಕದ ಅಳಲು ಆಳುವವರಿಗೆ ಕೇಳಬಹುದಾ? ಸಂತ್ರಸ್ತರಾಗುವವರು ಕೆರಳುವ ಮೊದಲೆ ಸಂಬಂಧಿಸಿದವರು ಎಚ್ಚೆತ್ತುಕೊಳ್ಳುವರಾ? ಜನರು ತಾಳ್ಮೆ ಕಳೆದುಕೊಂಡಾಗ ಅನಾಹುತವಾದರೆ ಹುಚ್ಚು ಯೋಜನೆ ಪಿತಾಮಹರೇ ಹೊಣೆಗಾರರಾಗಬೇಕಾಗುತ್ತದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...