Homeಕರ್ನಾಟಕಬೆಂಗಳೂರಿಗೆ ನೀರೊಯ್ಯುವ ಮತ್ತೊಂದು ಮಸಲತ್ತು!: ಪ್ರಾಣವಾದರೂ ಕೊಟ್ಟೇವು ಅಘನಾಶಿನಿ ನೀರು ಕೊಡುವುದಿಲ್ಲ!!

ಬೆಂಗಳೂರಿಗೆ ನೀರೊಯ್ಯುವ ಮತ್ತೊಂದು ಮಸಲತ್ತು!: ಪ್ರಾಣವಾದರೂ ಕೊಟ್ಟೇವು ಅಘನಾಶಿನಿ ನೀರು ಕೊಡುವುದಿಲ್ಲ!!

- Advertisement -
- Advertisement -

ಅಘನಾಶಿನಿ ಕೊಳ್ಳ ಕೊತಕೊತ ಕುದಿಯಲು ಶುರುವಾಗಿ ಹೆಚ್ಚುಕಮ್ಮಿ ಒಂದು ತಿಂಗಳೇ ಕಳೆದುಹೋಗಿದೆ. ಅಕ್ಷರಶಃ ಉತ್ತರ ಕನ್ನಡದ ಜೀವ ನದಿಯಾದ ಅಘನಾಶಿನಿಯ ನೀರನ್ನು ಬೆಂಗಳೂರಿಗೆ ಒಯ್ಯುವ ಆಡಳಿತಗಾರರ ಗುಟ್ಟಿನ ಗಂಡಾಗುಂಡಿ ಕಟ್ಟಾಗುತ್ತಿದ್ದಂತೆಯೇ ಕಂಗಾಲುಬಿದ್ದ ಅಘನಾಶಿನಿ ಕಣಿವೆ ಮಂದಿ ತಿರುಗಿಬಿದ್ದಿದ್ದಾರೆ. ಅತ್ತ ಶರಾವತಿ ನೀರು ಬೆಂಗಳೂರಿಗೆ ಸಾಗಿಸಲು ಬಿಡುವುದಿಲ್ಲವೆಂದು ಶರಾವತಿ ಕಣಿವೆಯಲ್ಲಿ ಜನಾಂದೋಲನ ನಡೆಯುತ್ತಿದ್ದ ಹೊತ್ತಿನಲ್ಲೇ ಇತ್ತ ಅಘನಾಶಿನಿ ನದಿ ನೀರಿಗೂ ಕನ್ನ ಹಾಕುವ ಕರಾಮತ್ತಿನ ಸುದ್ದಿ ಅಲ್ಲೋಲಕಲ್ಲೋಲವೇ ಸೃಷ್ಟಿಸಿಬಿಟ್ಟಿತ್ತು. ಈಗ ಕುಮ್ಮಿ ಮನೆಗೆ ಹೋಗಿ ಯಡ್ಡಿಯ ಕೇಸರಿ ದರ್ಬಾರು ಬಂದರೂ ಜನರು ಪ್ರತಿಭಟನೆ ನಿಲ್ಲಿಸಲು ಸಿದ್ಧರಿಲ್ಲ. ಏಕೆಂದರೆ, ಶರಾವತಿ ಮತ್ತು ಅಘನಾಶಿನಿ ನದಿಗಳ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಳಯಾಂತಕ ಪ್ರಾಜೆಕ್ಟಿನ ಮೂಲವಿರುವುದೇ ಯಡ್ಡಿಯ ಪಂಡಿತ ಪಠಾಲಮ್ಮಿನಲ್ಲಿ!!

2010ರಲ್ಲಿ ಆಳ್ವಿಕೆ ನಡೆಸುತ್ತಿದ್ದ ಯಡ್ಡಿ ಸರ್ಕಾರ 2031ರ ಹೊತ್ತಿಗೆ ಬೆಂಗಳೂರು ಎದುರಿಸಬಹುದಾದ ಕುಡಿಯುವ ನೀರಿನ ಅಭಾವ ನೀಗುವ ಪರಿಹಾರಕ ಪ್ಲಾನ್ ಬಗ್ಗೆ ಪರಿಶೀಲಿಸಲು ನಿವೃತ್ತ ಮುಖ್ಯ ಇಂಜಿನಿಯರ್ ತ್ಯಾಗರಾಜ್ ಸಮಿತಿ ರಚಿಸಿತ್ತು. ಈ ಸಮಿತಿ 2012ರಲ್ಲಿ ಶರಾವತಿ ಮತ್ತು ಅಘನಾಶಿನಿ ನೀರು ರಕ್ಕಸ ಪಂಪ್‍ಗಳ ಮೂಲಕ ಬೆಂಗಳೂರಿಗೆ ಲಿಫ್ಟ್ ಮಾಡಲು ಸೂಚಿಸಿತ್ತು. 2014ರಲ್ಲಿ ಈ ಪ್ರಸ್ತಾವನೆ ಸರ್ಕಾರ ಸ್ವೀಕರಿಸಿತಾದರೂ, ಇದೆಲ್ಲ ಅಪ್ರಾಯೋಗಿಕ ಪ್ಲಾಪ್ ಪ್ರಾಜೆಕ್ಟ್ ಆಗುತ್ತದೆಂಬ ಅಭಿಪ್ರಾಯ ಜಲತಜ್ಞರ ವಲಯದಿಂದ ಬಂದಿತ್ತು. ಹಾಗಂತ ಆಗ ಉತ್ತರ ಕನ್ನಡದ ಸಚಿವ, ಸಂಸದ, ಶಾಸಕರ್ಯಾರೂ ಈ “ಜಲಕಂಟಕ”ದ ಬಗ್ಗೆ ತಲೆ ಕೆಡಿಸಿಕೊಳ್ಳದೆ ತಂತಮ್ಮ ಜೀವನೋಪಾಯದ ರಾಜಕೀಯ ಕಸುಬಿನಲ್ಲಿ ನಿರಾತಂಕವಾಗಿ ನಿರತರಾಗಿದ್ದರು!

ಶಿರಸಿಯ ಶಂಕರ ಹೊಂಡದಲ್ಲಿ ಹುಟ್ಟುವ ಅಘನಾಶಿನಿ ನದಿ ಕುಮಟೆಯ ಅರಬ್ಬೀಸಮುದ್ರ ಸೇರುವವರೆಗೆ ಬರೋಬ್ಬರಿ 1800 ಚದರ ಕಿಮೀ ಜಲಾನಯನ ಪ್ರದೇಶ ಸುತ್ತು ಹೊಡೆಯುತ್ತದೆ. ಅಘನಾಶಿನಿಯು ಸುಮಾರು 100-120 ಸಮುದ್ರ ಕಿ.ಮೀ ಹರಿದು ಸಮುದ್ರ ಸೇರುವುದರಿಂದ ವ್ಯರ್ಥವಾಗುತ್ತದೆಂದು ಸರ್ಕಾರಿ ಪ್ರಭೃತಿಗಳು ಲೆಕ್ಕಹಾಕಿದ್ದಾರೆ. ಇದರಲ್ಲಿ ಬರೀ ಐವತ್ತೇ ಟಿಎಂಸಿ ನೀರನ್ನು ಬೆಂಗಳೂರಿಗೆ ತಳ್ಳುವ ಹದಿಮೂರು ಸಾವಿರ ಕೋಟಿ ರೂಪಾಯಿಗಳ ಯೋಜನೆಗೆ ಯೋಚನೆ ಮಾಡಲಾಗಿತ್ತೆಂಬ ಮೋಗಮ್ ಭಾತ್ಮಿಯೊಂದನ್ನು ಸರ್ಕಾರಿ ಸರದಾರರು ತೇಲಿಬಿಟ್ಟಿದ್ದಾರೆ.

ಇದು ಹಸಿಹಸೀ ಸುಳ್ಳು! ಈ ಭರ್ಜರಿ ಯೋಜನೆಯ ಆಳ-ಅಗಲ ನೋಡಿದರೆ ಬಳಕೆಯಾಗೋದು ಬರೀ 50 ಟಿಎಂಸಿ ನೀರೆಂದು ನಂಬೋದು ಸಾಧ್ಯವೇ ಇಲ್ಲ. ಯೋಜನಾ ವರದಿ ಕೈಲಿಡಿದು ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಅಘನಾಶಿನಿಯ 230 ಟಿಎಂಸಿ ನೀರೂ ಸ್ವಾಹಾ ಆಗುತ್ತದೆಂದು ಎಂಥ ಗಾಂಪನಿಗೂ ಅರ್ಥವಾಗುತ್ತದೆ. ಇಷ್ಟಾದರೂ ಪ್ರಾಜೆಕ್ಟ್ ಫಲಪ್ರದವಾಗುತ್ತದೆಂಬುದಕ್ಕೆ ಯಾವ ಖಾತ್ರಿಯೂ ಇಲ್ಲ! ಇದೊಂದು ‘ಎತ್ತಿನಹೊಳೆ”ಯಂಥದ್ದೇ ಬೋಗಸ್ ಯೋಜನೆ ಆಗಬಹುದಷ್ಟೇ.

ಕಠೋರ ವಾಸ್ತವ

ಅಘನಾಶಿನಿ ನದಿಗೆ ಸಿದ್ದಾಪುರದ “ಹೇಮಜಿನಿ” ಎಂಬಲ್ಲಿ ಡ್ಯಾಮ್

ಕಟ್ಟಲಾಗುತ್ತದೆ. ನೀರನ್ನು ಪೈಪುಗಳ ಮೂಲಕ ಸಿದ್ದಾಪುರ, ಸಾಗರ, ಭದ್ರಾವತಿಗೆ ತರಲಾಗುತ್ತದೆ. ಭದ್ರಾವತಿಯ ಭದ್ರಾನದಿಯ ಮೇಲೆ ಮೇಲ್ಗಾಲುವೆ ನಿರ್ಮಿಸಿ ಅಲ್ಲಿಂದ ತರಿಕೆರೆ ಮೂಲಕ ಅಘನಾಶಿನಿ ನೀರನ್ನು ಚಿತ್ರದುರ್ಗದ ವಾಣಿವಿಲಾಸ ಜಲಾಶಯಕ್ಕೆ ತುಂಬಿಸಲಾಗುತ್ತದೆ. ಇದೇ ಪ್ರಕಾರ ತುಮಕೂರು ಜಿಲ್ಲೆಯ ಹಲವು ಡ್ಯಾಮ್‍ಗಳನ್ನು ಭರ್ತಿಮಾಡುತ್ತಾ ಅಂತಿಮವಾಗಿ ಬೆಂಗಳೂರಿನ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಅಘನಾಶಿನಿ ನೀರನ್ನು ಸೇರಿಸುವ ಯೋಜನೆಯಿದು. ಹೇಮಜಿನಿಯಿಂದ ತಿಪ್ಪಗೊಂಡನಹಳ್ಳಿ ಸರೋವರದ ವರೆಗಿನ 500 ಮೀಟರ್ ಎತ್ತರಕ್ಕೆ ಮತ್ತು 350 ಕಿ.ಮೀ ದೂರಕ್ಕೆ ಬೃಹತ್ ಪಂಪ್‍ಗಳ ಮೂಲಕ ನೀರು ತಳ್ಳಲಾಗುತ್ತದೆ.

ಈಗ ಹೇಳಲಾಗಿರುವಂತೆ 13 ಸಾವಿರ ಕೋಟಿಗೆಲ್ಲ ಮುಗಿಯುವ ಯೋಜನೆಯಿದಲ್ಲ. ಬದಲಿಗೆ ಇದರ ಯೋಜನಾ ವೆಚ್ಚ ನೂರಾರು ಸಾವಿರ ಕೋಟಿಗೆ ಹೋಗಿ ನಿಲ್ಲುತ್ತದೆ. ವರ್ಷಪೂರ್ತಿ ಅಘನಾಶಿನಿ ಹರಿಯುತ್ತಾಳಾದರೂ ಬೇಸಿಗೆಯಲ್ಲಿ ಸೊರಗುತ್ತಾಳೆ. ಅಘನಾಶಿನಿ ನೀರಿಂದ ಬೃಹತ್ ಬೆಂಗಳೂರಿನ ನೀರಡಿಕೆ ತಣಿಸಲು ಸಾಧ್ಯವಿಲ್ಲವೆಂದೇ ಹೇಮಜಿನಿಯಲ್ಲಿ ಡ್ಯಾಮ್ ಕಟ್ಟಿ ಮಳೆ ನೀರನ್ನು ಸಂಗ್ರಹಿಸಲು ಯೋಜನಾ ವರದಿಯಲ್ಲಿ ಹೇಳಲಾಗಿದೆ. ಆದರೆ ಡ್ಯಾಮ್‍ಗೆ ಎಷ್ಟು ದೊಡ್ಡ ಜಾಗ ಬೇಕೆಂದು ವರದಿಯಲ್ಲಿ ಬರೆದಿಲ್ಲ.

ಇದನ್ನು ಓದಿ: ಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

ಕಳೆದ 50 ವರ್ಷದಿಂದ ಅಘನಾಶಿನಿ ಕೊಳ್ಳದಲ್ಲಿ ಜಲವಿದ್ಯುತ್ ಯೋಜನೆ ಸ್ಥಾಪಿಸುವ ಹುನ್ನಾರ ನಡೆಯುತ್ತಲೇ ಇದೆ. ಆದರೆ ಅದಿನ್ನು “ಬುದ್ಧಿವಂತ” ಬ್ರಾಹ್ಮಣರಾದಿಯಾಗಿ ಹಿಮ್ಮೆಟ್ಟಿಸುತ್ತಿದೆ. ಈ ಜಲವಿದ್ಯುತ್ ಯೋಜನೆಯಲ್ಲಿ ಕನಸೂರಿಂದ ತ್ಯಾಗಲಿ, ಹೇರೂರು, ಹೆಗ್ಗರಣಿ, ಹಾರ್ಸಿಕಟ್ಟಾ, ಗೋಳಿಮಕ್ಕಿ, ಕವಲಕೊಪ್ಪ, ಬಿದ್ರಡಾನ್, ಬಿಳಿಗಿಯೇ ಮುಂತಾದ ಹಲವು ಹಳ್ಳಿಗಳು, ಸಾವಿರಾರು ಎಕರೆ ಅಡಿಕೆತೋಟ, ಭತ್ತದ ಗದ್ದೆ, ಅಪಾರ ಅರಣ್ಯ ಪ್ರದೇಶ ಮುಳುಗಡೆಯಾಗುತ್ತದೆ. ಆದರೆ ಬೆಂಗಳೂರಿಗೆ ನೀರೊಯ್ಯುವ ಪ್ರಾಜೆಕ್ಟಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ಮುಳುಗಡೆ ಆಗಲಿಕ್ಕಿಲ್ಲ, ಪರಿಸರ ಹಾನಿ ಮಾತ್ರ ದೊಡ್ಡ ಪ್ರಮಾಣದಲ್ಲಿ ಆಗುತ್ತದೆ!

ಅಘನಾಶಿನಿ ನದಿ ಗಂಗಾನದಿಗಿಂತಲೂ ಪ್ರಾಚೀನವಾದುದೆಂಬ ತರ್ಕವಿದೆ. ಭೂ ಇತಿಹಾಸದಲ್ಲಿ ಹಿಮಾಲಯಕ್ಕಿಂತ ಮೊದಲೆ ಸಹ್ಯಾದ್ರಿ ಬೆಟ್ಟಗಳು ಹುಟ್ಟಿದ ದಾಖಲೆಯಿದೆ. ಹಾಗಾಗಿ ಗಂಗೆಗಿಂತಲೂ ಅಘನಾಶಿನಿಯೇ ಹಳೆಯ ನದಿ. ಅಘನಾಶಿನಿ ಶರಾವತಿಯಂತೆಯೂ ಅಲ್ಲ. ಶರಾವತಿ ಹೆಚ್ಚುಕಮ್ಮಿ ನೇರವಾಗಿ ಹರಿಯುತ್ತದೆ. ಅಘನಾಶಿನಿ ಶಿರಸಿಯಿಂದ ಕುಮಟೆ ತಲುಪುವತನಕ ಒಂದು ದೊಡ್ಡ ಗೋಲ ನಿರ್ಮಿಸುತ್ತದೆ. ಅಘನಾಶಿನಿ ಸಿದ್ದಾಪುರ ತಾಲ್ಲೂಕಿನ ಎಲ್ಲ ಅರಣ್ಯ, ತೋಟ, ಗದ್ದೆ ಬಳಸುತ್ತ ಅನೇಕ ಹೊಳೆ-ಹಳ್ಳಗಳನ್ನು ತನ್ನಲ್ಲಿ ಸೇರಿಸಿಕೊಂಡು ಒಂಥರಾ ನಡುಗಡ್ಡೆ ಸೃಷ್ಟಿಸುತ್ತದೆ. ಹೀಗಾಗಿ ಅಘನಾಶಿನಿಗೆ ಒಂದು ಸಣ್ಣ ಒಡ್ಡು ಕಟ್ಟಿದರೂ ಸಾಕು ಸಿದ್ದಾಪುರ ತಾಲ್ಲೂಕಿನ ಎಲ್ಲಾ ಅರಣ್ಯ ಮುಳುಗುತ್ತದೆ. ತೋಟ-ಗದ್ದೆಗಳಲ್ಲಿ ಬಹುಪಾಲು ಜಲ ಸಮಾಧಿಯಾಗುತ್ತದೆ. ಅಘನಾಶಿನಿಗೆ ಒಡ್ಡು ಹಾಕಿದರೆ ಉತ್ತರ ಕನ್ನಡದ ಹೃದಯಕ್ಕೆ ಒಡ್ಡು ಕಟ್ಟಿದಂತೆಯೇ!!

ಜನಾಂದೋಲನಕ್ಕೆ ಕಾವೇರುತ್ತಿದೆ

ಉತ್ತರ ಕನ್ನಡವನ್ನು ಆಪೋಷನ ಪಡೆದು ಬೆಂಗಳೂರಿನ ನೀರಿನ ಸಮಸ್ಯೆ ಪರಿಹರಿಸುವ ಈ ಎಡವಟ್ಟು ಯೋಜನೆ ಮನುಷ್ಯ ನಿರ್ಮಿತ ಊರು, ಮನೆ, ಮಠ, ತೋಟ, ಗದ್ದೆಯನ್ನಷ್ಟೇ ಅಲ್ಲ, ವಿಶಿಷ್ಟ ಜೀವಜಾಲವನ್ನೇ ಧ್ವಂಸ ಮಾಡಲಿದೆ! ಅಘನಾಶಿನಿ ಕೊಳ್ಳದಲ್ಲಿ ನೂರಾರು ನಮೂನೆಯ ಗಿಡ, ಮರ, ಔಷಧಿ ಸಸ್ಯಗಳಿವೆ. ಕೇರಳದ ಸೈಲೆಂಟ್ ವ್ಯಾಲಿಯಲ್ಲಷ್ಟೇ ಕಂಡುಬರುವ ಸಿಂಗಳೀಕ (ಸಿಂಹ ಬಾಲದ ಮಂಗ) ಇಲ್ಲಿದೆ. ಕೋಟ್ಯಾಂತರ ವರ್ಷದ ಮಂಗನ ತಳಿಯಿದು. ಘಟ್ಟದ ಮೇಲಿನ ಮತ್ತು ಕರಾವಳಿಯ ಸಾವಿರಾರು ಮೀನುಗಾರ, ತೋಟಿಗ, ರೈತಾಪಿ, ಕೂಲಿ ಕಾರ್ಮಿಕ ಕುಟುಂಬಗಳಿಗೆಲ್ಲ ಅಘನಾಶಿನಿ ಜೀವನಾಧಾರ ನದಿ! ಮರಾಕಲ್ (ಅಘನಾಶಿನಿ ನದಿ ನೀರು) ಯೋಜನೆಯಿಂದ ಕುಮಟಾ ಮತ್ತು ಹೊನ್ನಾವರದ ಕುಡಿವ ನೀರಿನ ಬವಣೆ ಸ್ವಲ್ಪ ನೀಗಲಾಗಿದೆ. ಈಗಿನ ಪರಿಸ್ಥಿತಿಗೆ ಅಘನಾಶಿನಿ ನೀರು ಸಾಕಾಗುತ್ತಿಲ್ಲ.

ಇದನ್ನು ಓದಿ: ಶರಾವತಿ ನೀರು ಬೆಂಗಳೂರಿಗೆ ವಿರೋಧಿಸಿ ಶಿವಮೊಗ್ಗ ಬಂದ್. ಸಾವಿರಾರು ಜನರು ಭಾಗಿ

ಕಳೆದ ಬೇಸಿಗೆಯಲ್ಲಿ ಅಘನಾಶಿನಿ ನದಿ ಪಾತ್ರದ ನೀರು ಹಿಂದೆಂದೂ ಕಾಣದಷ್ಟು ಕಡಿಮೆಯಾಗಿತ್ತು. ತಿಂಗಳುಗಟ್ಟಲೆ ನದಿ ಪ್ರದೇಶದ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ನದಿ ಹರಿವಿನ ಪ್ರಮಾಣ ಕಡಿಮೆಯಾದಂತೆ ಕುಡಿಯುವ ನೀರಿನ ಮೂಲಗಳು ಬತ್ತುವ ಕ್ಷೇತ್ರ ದುಪ್ಪಟ್ಟಾಗುತ್ತಿದೆ. ಹೀಗಾಗಿ ಮೀನುಗಾರಿಕೆ, ತೋಟಗಾರಿಕೆ, ಕೃಷಿ ಕಸುಬಿಗೆ ತೊಂದರೆಯಾಗುತ್ತಿದೆ. ಅಘನಾಶಿನಿ ಉಳಿಸಿಕೊಳ್ಳದಿದ್ದರೆ ಭವಿಷ್ಯ ಕರಾಳವಾಗಲಿದೆ ಎಂಬ ಆತಂಕ ಜನರನ್ನು ಕಾಡುತ್ತಿದೆ. ಮುಂದಿನ ಪೀಳಿಗೆಗೆ ಈಗಲೇ ಅಘನಾಶಿನಿ ನಿರಾತಂಕವಾಗಿ ಹರಿಯುವಂತೆ ನೋಡಿಕೊಳ್ಳಬೇಕಿದೆ. ಈ ದರ್ದು ಅಘನಾಶಿನಿ ನದಿ ಪಾತ್ರದ ಜನರನ್ನು ಬೀದಿಗಿಳಿಸಿದೆ. ರಸ್ತೆ ತಡೆ, ಪ್ರತಿಭಟನೆ ಗುರಿಗಟ್ಟುತ್ತಿದೆ. ಜೀವವನ್ನಾದರೂ ಕೊಡುತ್ತೇವೆ. ಅಘನಾಶಿನಿ ನೀರಿನ ಒಂದು ಹನಿಯೂ ಬೇರೆಡೆ ಒಯ್ಯಲು ಬಿಡುವುದಿಲ್ಲ ಎಂದು ಜನರು ಕೆಂಡಾಮಂಡಲವಾಗಿ ಹೇಳುತ್ತಿದ್ದಾರೆ.

ಅಘನಾಶಿನಿ ನೀರನ್ನು ದೂರದ ಬೆಂಗಳೂರಿಗೆ ಒಯ್ಯುವ ದುಸ್ಸಾಹಸಕ್ಕೆ ಕೈಹಾಕಿರುವ ಹುಂಬ ಪಂಡಿತರಿಗೆ ಉತ್ತರ ಕನ್ನಡದ ಜನಜೀವನ, ಪರಿಸರದ ಬಗ್ಗೆ ಒಂಚೂರೂ ಅರಿವಿಲ್ಲ. ಜನರ ಸಮಸ್ಯೆಗೆ ಸ್ಪಂದಿಸಬೇಕಾದ ಮಂತ್ರಿ, ಸಂಸದ, ಶಾಸಕರಿಗೆ ಕಿಕ್‍ಬ್ಯಾಕ್ ಚಿಂತೆ. ಈ ಯೋಜನೆಯಿಂದ ಅಘನಾಶಿನಿ ನದಿ ಪ್ರದೇಶದ ಅಂತರ್ಜಲ ಬತ್ತುತ್ತದೆ. ನದಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡ ಲಕ್ಷಾಂತರ ಮಂದಿ ಬೀದಿ ಪಾಲಾಗುತ್ತಾರೆ. ಸ್ಥಳೀಯ ಜನಜೀವನ ನರಕ ಮಾಡಿ ಬೆಂಗಳೂರು ಉದ್ಧಾರ ಮಾಡಿದರೇನು ಬಂತು!? ಬಲಾತ್ಕಾರವಾಗಿ ನದಿಯ ದಿಕ್ಕು ಬದಲಿಸುವುದೇ ಅವೈಜ್ಞಾನಿಕವಷ್ಟೇ ಅಲ್ಲ ಅಕ್ಷಮ್ಯ- ಅನಾಹುತಕರ. ನದಿಯ ನೀರು ನೈಸರ್ಗಿಕ ಹಕ್ಕುದಾರರಿಗೆ ಮಾತ್ರ.
ಈ ಪ್ರಕೃತಿ ನಿಯಮ ಆಳುವ ಖೂಳರಿಗೆ ಅರ್ಥ ಮಾಡಿಸುವವರು ಯಾರು? ಜನರ ಆತಂಕದ ಅಳಲು ಆಳುವವರಿಗೆ ಕೇಳಬಹುದಾ? ಸಂತ್ರಸ್ತರಾಗುವವರು ಕೆರಳುವ ಮೊದಲೆ ಸಂಬಂಧಿಸಿದವರು ಎಚ್ಚೆತ್ತುಕೊಳ್ಳುವರಾ? ಜನರು ತಾಳ್ಮೆ ಕಳೆದುಕೊಂಡಾಗ ಅನಾಹುತವಾದರೆ ಹುಚ್ಚು ಯೋಜನೆ ಪಿತಾಮಹರೇ ಹೊಣೆಗಾರರಾಗಬೇಕಾಗುತ್ತದೆ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...