HomeಮುಖಪುಟNEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

NEP ಯ ತ್ರಿಭಾಷಾ ಸೂತ್ರ ಅಳವಡಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ

"ಹಳೆಯ ದಬ್ಬಾಳಿಕೆಯ ಮನುಸ್ಮೃತಿಯನ್ನು ಎನ್‌ಇಪಿ ಮೂಲಕ ಹೊಸದಾಗಿ ಹೇರಲಾಗುತ್ತಿದೆ" ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -
- Advertisement -

ನೂತನ ಶಿಕ್ಷಣ ನೀತಿ (NEP) 2020 ರಲ್ಲಿನ ತ್ರಿಭಾಷಾ ಸೂತ್ರವು “ನೋವಿನ ಮತ್ತು ದುಃಖಕರವಾಗಿದೆ” ವಿಷಯವಾಗಿದೆ. ಅದನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಘೋಷಿಸಿದ್ದಾರೆ.

ದಿವಂಗತ ಮುಖ್ಯಮಂತ್ರಿಗಳಾದ ಅನ್ನಾ ದುರೈ, ಎಂಜಿಆರ್ ಮತ್ತು ಜಯಲಲಿತಾ ಅವರು ಹಿಂದಿ ಹೇರಿಕೆಯ ವಿರುದ್ಧವಿದ್ದರು ಎಂಬುದನ್ನು ಉಲ್ಲೇಖಿಸಿರುವ ಅವರು, ತ್ರಿಭಾಷಾ ನೀತಿಯನ್ನು ಮರುಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಎನ್‌ಇಪಿಯಲ್ಲಿನ ತ್ರಿಭಾಷಾ ಸೂತ್ರವು ನೋವಿನ ಮತ್ತು ದುಃಖಕರ ವಿಷಯವಾಗಿದೆ. ಅದನ್ನು ಮರುಪರಿಶೀಲಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡುತ್ತೇನೆ ಎಂದು ಪಳನಿಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

1965 ರಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ವಿದ್ಯಾರ್ಥಿಗಳು ನಡೆಸಿದ ಹಿಂದಿ ವಿರೋಧಿ ಆಂದೋಲನವನ್ನು ಸಚಿವರು ಉಲ್ಲೇಖಿಸಿದ್ದಾರೆ.

ತ್ರಿಭಾಷಾ ನೀತಿಯಲ್ಲಿ ಯಾವ ಭಾಷೆ ಬೋಧಿಸಬೇಕೆಂದು ನಿರ್ಧರಿಸುವ ಅಧಿಕಾರವನ್ನು ರಾಜ್ಯಗಳಿಗೆ  ಬಿಟ್ಟರೂ ಸಹ ಇದನ್ನು ಹಿಂದಿ ಹೇರುವ ಕೇಂದ್ರದ ಮೌನ ಪ್ರಯತ್ನವೆಂದು ತಮಿಳುನಾಡಿನ ರಾಜಕೀಯ ಪಕ್ಷಗಳು ಆರೋಪಿಸಿವೆ.

ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮಿಳು ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರಿಗೆ ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಎನ್‌ಇಪಿ ಅನುಷ್ಠಾನಗೊಳಿಸುವಲ್ಲಿ ಮಾಜಿ ಕೇಂದ್ರ ಸಚಿವರ ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದೇನೆ ನಿಶಾಂಕ್ ಪೋಖ್ರಿಯಾಲ್ ಹೇಳಿದ್ದಾರೆ.

ಎಂ.ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ತಮಿಳುನಾಡಿನ ಅನೇಕ ವಿರೋಧ ಪಕ್ಷಗಳು ಎನ್‌ಇಪಿಯನ್ನು ವಿರೋಧಿಸಿವೆ. ಎನ್‌ಇಪಿ ಮರುಪರಿಶೀಲನೆಗಾಗಿ ಒತ್ತಾಯಿಸಿವೆ.

ಹೊಸ ಶಿಕ್ಷಣ ನೀತಿಯು ಹಿಂದಿ ಮತ್ತು ಸಂಸ್ಕೃತವನ್ನು ಹೇರುವ ಪ್ರಯತ್ನವಾಗಿದೆ ಎಂದು ಡಿಎಂಕೆ ಆರೋಪಿಸಿದೆ. ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸುವ ಮೂಲಕ ಅದರ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದೆ.

“ಹಳೆಯ ದಬ್ಬಾಳಿಕೆಯ ಮನುಸ್ಮೃತಿಯನ್ನು ಎನ್‌ಇಪಿ ಮೂಲಕ ಹೊಸದಾಗಿ ಹೇರಲಾಗುತ್ತಿದೆ” ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.


ಇದನ್ನೂ ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...