Homeಮುಖಪುಟಪರಿಷ್ಕೃತ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

ಪರಿಷ್ಕೃತ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ನಾಡಿನ ದಾರ್ಶನಿಕರು, ಸಾಹಿತಿಗಳು, ಮಹಾಪುರುಷರಿಗೆ ಕಿಂಚಿತ್ತು ಅವಮಾನವಾದರೂ ಅದನ್ನು ನಾವು ಖಂಡಿತವಾಗಿ ಸಹಿಸುವುದಿಲ್ಲ, ಅಂತಹ ಪಠ್ಯ ಪುಸ್ತಕ ಜಾರಿಯಾಗಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ, ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿದರು.

“ಪಠ್ಯಪುಸ್ತಕ ಮಕ್ಕಳಲ್ಲಿ ವೈಜ್ಞಾನಿಕತೆ, ವೈಚಾರಿಕತೆಯನ್ನು ಬೆಳೆಸಬೇಕೆ ವಿನಃ ಕೋಮುದ್ವೇಷ ವೈಷಮ್ಯವನ್ನಲ್ಲ. ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂದು ತರಾಟೆಗೆ ತೆಗೆದುಕೊಂಡರು.

ಪಠ್ಯ ಪುಸ್ತಕ ರಚಿಸುವವರು ಅಂಬೇಡ್ಕರ್, ಬಸವಣ್ಣ, ಕುಂವೆಂಪುರವರಿಗೆ ಹಾಗೂ ಹಲವು ಸ್ವಾಮಿಗಳಿಗೆ ಅವಮಾನ ಮಾಡಿದ್ದಾರೆ. ರೋಹಿತ್ ಚಕ್ರತೀರ್ಥನ ಸಮಿತಿಯು ಶಾಲಾ ಪಠ್ಯಪುಸ್ತಕಗಳಲ್ಲಿದ್ದ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಹಾಗೂ ಸಮಾಜ ಸುಧಾರಕರು ಮತ ಪ್ರವರ್ತಕರು ಮುಂತಾದ ಲೇಖಕರ ಕೃತಿಗಳನ್ನು ತಿರುಚಿದ್ದು ಮಾತ್ರವಲ್ಲದೆ ಅವರ ಪರಿಚಯವನ್ನು ಯದ್ವತದ್ವ ಮಾಡಿ, ನಾಡಗೀತೆಗೆ ಹಾಗೂ ರಾಷ್ಟ್ರಕವಿ ಕುವೆಂಪುರವರಿಗೆ ಅಪಮಾನ ಮಾಡಿದ ಈ ಸಮಿತಿಯನ್ನು ಈ ಕೂಡಲೆ ವಜಾಗೊಳಿಸುವಂತೆ ಆಗ್ರಹಿಸಿದರು.

ನಿಜವಾದ ಅರ್ಹತೆಯಿರುವ ಶಿಕ್ಷಣತಜ್ಞರ ಸಮಿತಿಯ ಮೂಲಕ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಗಳನ್ನು ಸರಿಪಡಿಸಬೇಕು ಹಾಗೂ ನಾಡಿನ ಸಂಸ್ಕೃತಿ, ಪರಂಪರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವವಿರುವವರನ್ನು ನೇಮಿಸಬೇಕು. ಅಲ್ಲದೆ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ; ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

ಪಠ್ಯಪುಸ್ತಕ ಪರಿಷ್ಕರಣೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವು ತಲೆತಗ್ಗಿಸಬೇಕಾದ ಪರಿಸ್ಥಿತಿ ಎದುರಾಗಿದೆ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಪಠ್ತಪುಸ್ತಕ ಪರಿಷ್ಕರಣೆ ಮಾಡಿಸಿರುವುದು ನಾಡು-ನುಡಿ ಸಂಸ್ಕೃತಿಗೆ ಮಾಡಿರುವ ದ್ರೋಹ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್, ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್‌.ವಿ ದೇಶಪಾಂಡೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...