Homeಕರ್ನಾಟಕಯಾವ ಕೇಸ್‌ಗೂ ಬಗ್ಗಲ್ಲ, ಜನರ ಪರವಾಗಿ ಹೋರಾಟ ಮಾಡ್ತಿವಿ: ಡಿ.ಕೆ ಶಿವಕುಮಾರ್

ಯಾವ ಕೇಸ್‌ಗೂ ಬಗ್ಗಲ್ಲ, ಜನರ ಪರವಾಗಿ ಹೋರಾಟ ಮಾಡ್ತಿವಿ: ಡಿ.ಕೆ ಶಿವಕುಮಾರ್

ಇದು ಕಾಂಗ್ರೆಸ್ ಹೋರಾಟವಲ್ಲ, ದೇಶದ ರೈತರು, ಕಾರ್ಮಿಕರು, ದಿನಗೂಲಿ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದ ಜನರ ಬದುಕಿನ ಉಳಿವಿಗಾಗಿ ನಡೆಯುತ್ತಿರುವ ಹೋರಾಟ.

- Advertisement -
- Advertisement -

ಅನುಮತಿ ಪಡೆಯದೇ ಪೆಟ್ರೋಲ್ ಡಿಸೇಲ್‌ ಬೆಲೆಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬ ಹೇಳಿಕೆಗೆ ಯಾವ ಕೇಸ್‌ಗೂ ಬಗ್ಗಲ್ಲ, ಜನರ ಪರವಾಗಿ ಹೋರಾಟ ಮಾಡ್ತಿವಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಳಗಾಂನಲ್ಲಿ ನಡೆದ ಸಾವಿರಾರು ಜನ ಸೇರಿದ್ದ ಮಹಾಂತೇಶ್ ಕವಟಗಿಮಠ್‌ ಮಗಳ ಮದುವೆಯಲ್ಲಿ ಮುಖ್ಯಮಂತ್ರಿಗಳೇ ಭಾಗಿಯಾಗಿದ್ರು. ಆರೋಗ್ಯ ಸಚಿವ ಬಿ.ಶ್ರೀರಾಮುಲು ಚಿತ್ರದುರ್ಗದಲ್ಲಿ ಸಾಮಾಜಿಕ ಅಂತರದ ನಿಯಮಗಳನ್ನು ಉಲ್ಲಂಘಿಸಿ ಮೆರವಣಿಗೆ ಮಾಡಿದರು. ವೈದ್ಯಕೀಯ ಸಚಿವರು ಸ್ವಿಮ್ಮಿಂಗ್‌ ಫೂಲ್‌ನಲ್ಲಿರುವ ಪೋಟೊ ಪ್ರಕಟಿಸಿದ್ದರು. ಇವರ್ಯಾರ ಮೇಲೂ ಕ್ರಮ ತೆಗೆದುಕೊಳ್ಳದೇ ಕೇವಲ ನಮ್ಮ ಮೇಲೆ ಹೇಗೆ ಕ್ರಮ ತೆಗೆದುಕೊಳ್ಳುತ್ತೀರಿ ಎಂದು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೇಸ್ ಹಾಕುವ ಮೂಲಕ ನಮ್ಮನ್ನು ಎದುರಿಸಲು ಸಾಧ್ಯವಿಲ್ಲ. ನಾವು ನಮಗಾಗಿ, ಅಧಿಕಾರಕ್ಕಾಗಿ ಪ್ರತಿಭಟನೆ ಮಾಡಿದ್ದು ಅಲ್ಲ, ನಾವು ಜನರ ಪರವಾಗಿ ಹೋರಾಟ ಮಾಡ್ತಿವಿ. ಅವರ ಪಕ್ಷದವರೇ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಮೊದಲು ಅವರ ಮೇಲೆ ಕ್ರಮ ಜರುಗಿಸಿ ನಂತರ ನಮ್ಮ ಮೇಲೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಇದು ಕಾಂಗ್ರೆಸ್ ಹೋರಾಟವಲ್ಲ, ದೇಶದ ರೈತರು, ಕಾರ್ಮಿಕರು, ದಿನಗೂಲಿ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲ ವರ್ಗದ ಜನರ ಬದುಕಿನ ಉಳಿವಿಗಾಗಿ ನಡೆಯುತ್ತಿರುವ ಹೋರಾಟ. ಕಾಂಗ್ರೆಸ್ ಅಧಿಕಾರಕ್ಕಾಗಿ ಮಾತ್ರವೇ ಇಲ್ಲ. ಸಂಕಷ್ಟದಲ್ಲಿರುವ ಜನರ ಜೊತೆಗೆ ನಿಂತು ಹೋರಾಟ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಸ್ವಾತಂತ್ರ್ಯಾ ನಂತರ ಯಾವತ್ತಿಗೂ ಡೀಸೆಲ್-ಪೆಟ್ರೋಲ್ ಬೆಲೆಯಲ್ಲಿ 30% ರಷ್ಟು ವ್ಯತ್ಯಾಸವಿರುತ್ತಿತ್ತು. ಆದರೆ, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್ ಬೆಲೆ ಪೆಟ್ರೋಲ್ ಗಿಂತಲೂ 30%ರಷ್ಟು ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು
ಈ ದಾಖಲೆ ನಿರ್ಮಿಸಿದ್ದಾರೆ ಎಂದು ಡಿಕೆಶಿ ವ್ಯಂಗ್ಯವಾಡಿನದ್ದಾರೆ.

ಕೇಂದ್ರ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ: ಸಿದ್ದರಾಮಯ್ಯ

ಕೇಸು ಹಾಕಿ ನಮ್ಮನ್ನು ಎದರಿಸಲು ಸಾಧ್ಯವಿಲ್ಲ. ಅಮಾನವೀಯವಾಗಿ ಕೇಂದ್ರ ಸರ್ಕಾರ ನಡೆದುಕೊಂಡಿದೆ.ರಾಕ್ಷಸಿ ಗುಣ ಇರುವ ಕೇಂದ್ರ ಸರ್ಕಾರ ಬಡವರ ರಕ್ತ ಹೀರುವ ಕೆಲಸ ಮಾಡ್ತಿದೆ. ಬಡವರ ಜೀವನದ ಜೊತೆ ಸರ್ಕಾರ ಚೆಲ್ಲಾಟ ಆಡ್ತಿದೆ. ಕೊರೊನಾ ಸಮಯದಲ್ಲಿ ಬೆಲೆ ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ಸುಲಿಗೆ ಮಾಡುತ್ತಿರುವ ಅವರಿಗೆ ಮಾನ ಮರ್ಯಾದೆ ಇದೆಯಾ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...