Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...