Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...