Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...