Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...