Homeಚಳವಳಿಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

ಸಿಂಘು ಗಡಿನಲ್ಲಿ ಯುವಕನ ಹತ್ಯೆ: ನಿಹಾಂಗ್ ಗುಂಪು, ಮೃತ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದ ಎಸ್‌ಕೆಎಂ

- Advertisement -
- Advertisement -

ಪ್ರತಿಭಟನಾ ನಿರತ ದೆಹಲಿಯ ಸಿಂಘು ಗಡಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದಿದೆ.

ಹತ್ಯೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪಾವಿತ್ರತೆಯನ್ನು ಬೆಂಬಲಿಸುವುದಿಲ್ಲ. ಘಟನೆಯಲ್ಲಿ ಭಾಗಿಯಾಗಿರುವ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿ ಜೊತೆಗೆ ನಮಗೆ ಸಂಬಂಧವಿಲ್ಲ ಸ್ಪಷ್ಟಪಡಿಸಲು ಬಯಸುತ್ತದೆ ಎಂದಿದೆ.

ಮೃತರನ್ನು ಪಂಜಾಬ್‌ನ ರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕ ನಿಹಾಂಗ್‌ ಗುಂಪಿನ ಜೊತೆಯಲ್ಲಿಯೇ ಇದ್ದರು ಎನ್ನಲಾಗಿದೆ.

ಘಟನೆ ಕುರಿತು ಎಸ್‌ಕೆಎಂ ಪತ್ರಿಕಾ ಹೇಳಿಕೆ ಹೀಗಿದೆ. “ಇಂದು ಬೆಳಗ್ಗೆ ಸಿಂಘು ಗಡಿಯಲ್ಲಿ ಪಂಜಾಬ್‌ನ ಒಬ್ಬ ವ್ಯಕ್ತಿಯನ್ನು (ತರ್ನ್ ತರನ್ ಜಿಲ್ಲೆಯ ಚೀಮಾ ಕಲಾ ಹಳ್ಳಿಯ ದರ್ಶನ್ ಸಿಂಗ್ ಎಂಬುವರ ಮಗ ಲಖ್ಬೀರ್ ಸಿಂಗ್) ವಿರೂಪಗೊಳಿಸಿ ಕೊಲೆ ಮಾಡಲಾಗಿದೆ ಎಂಬುದು ಸಂಯುಕ್ತ ಕಿಸಾನ್ ಮೋರ್ಚಾ ಗಮನಕ್ಕೆ ಬಂದಿದೆ. ಒಂದು ನಿಹಾಂಗ್ ಗುಂಪು ಘಟನೆಯ ಹೊಣೆ ಹೊತ್ತಿದ್ದು, ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಲು ಪ್ರಯತ್ನ ಮಾಡಿದ್ದರಿಂದ ಹೀಗೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಮೃತ ವ್ಯಕ್ತಿ ಇದೇ ಗುಂಪಿನೊಂದಿಗೆ ಹಲವು ದಿನಗಳಿಂದ ಇದ್ದರು” ಎಂದಿದೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಅನಾಮಧೇಯ ಮೃತದೇಹ ಪತ್ತೆ

“ಈ ಕ್ರೂರ ಹತ್ಯೆಯನ್ನು ಎಸ್‌ಕೆಎಂ ಖಂಡಿಸುತ್ತದೆ. ಈ ಘಟನೆಯ ಎರಡೂ ಪಕ್ಷಗಳಾದ ಈ ನಿಹಾಂಗ್ ಗುಂಪು ಮತ್ತು ಮೃತ ವ್ಯಕ್ತಿಗೂ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ. ನಾವು ಯಾವುದೇ ಧಾರ್ಮಿಕ ಪಠ್ಯ ಅಥವಾ ಚಿಹ್ನೆಯ ಪವಿತ್ರತೆಗೆ ವಿರುದ್ಧವಾಗಿದ್ದೇವೆ” ಎಂದು ಸ್ಪಷ್ಟನೆ ನೀಡಿದೆ.

“ಆದರೆ, ಧಾರ್ಮಿಕತೆಯ ಆಧಾರದ ಮೇಲೆ ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸುವುದಿಲ್ಲ. ಕೊಲೆ ಆರೋಪ ಮತ್ತು ಅಪವಿತ್ರತೆಯ ಪಿತೂರಿ ಹಿಂದಿರುವವರ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕು ಎಂದು ಒತ್ತಾಯಿಸುತ್ತೇವೆ. ಸಂಯುಕ್ತ ಕಿಸಾನ್ ಮೋರ್ಚಾ ಯಾವುದೇ ಕಾನೂನುಬದ್ಧ ಕ್ರಮದಲ್ಲಿ ಪೊಲೀಸರು ಮತ್ತು ಆಡಳಿತದೊಂದಿಗೆ ಸಹಕರಿಸುತ್ತದೆ” ಎಂದು ಭರವಸೆ ನೀಡಿದೆ.

ಜೊತೆಗೆ “ಈ  ಪ್ರಜಾತಾಂತ್ರಿಕ ಶಾಂತಿಯುತ ರೈತ ಚಳವಳಿಯು ಯಾವುದೇ ರೀತಿಯ ಹಿಂಸೆಯನ್ನು ವಿರೋಧಿಸುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಶುಕ್ರವಾರ ಸಿಂಘು ಗಡಿಯ ಪ್ರತಿಭಟನಾ ಸ್ಥಳದ ವೇದಿಕೆ ಬಳಿ ಯುವಕನ ಮೃತದೇಹ ಪತ್ತೆಯಾಗಿತ್ತು. ವೇದಿಕೆ ಮುಂಭಾಗದ ಬ್ಯಾರಿಕೇಡ್‌ಗೆ ಕಟ್ಟಲಾಗಿದ್ದ ಮೃತದೇಹದ ಎಡಗೈನ ಮುಂಗೈ ಕತ್ತರಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸೋನಿಪತ್ ಆಸ್ಪತ್ರೆಎ ಕಳುಹಿಸಲಾಗಿದೆ.

ಹತ್ಯೆ ಕುರಿತು ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 302 (ಕೊಲೆ) ಮತ್ತು 34 ಅಡಿಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...